ಹುಲಿ ಉಗುರು | ಎಫ್‌ಎಸ್‌ಎಲ್ ವರದಿ ಬಳಿಕ ಸಂತೋಷ್‌ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ

Date:

ಹುಲಿ ಉಗುರು ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವರ್ತೂರು ಸಂತೋಷ್ ಅವರನ್ನು 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸದ್ಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ತನಿಖೆ ಚುರುಕುಗೊಂಡಿದ್ದು, ಎಫ್‌ಎಸ್‌ಎಲ್‌ ವರದಿಯಲ್ಲಿ ಅವರು ಧರಿಸಿದ್ದ ಉಗುರು ಹುಲಿಯದ್ದೆ ಎಂಬುವುದು ಸಾಬೀತಾದರೆ ಸಂತೋಷ್ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ತನಿಖಾಧಿಕಾರಿ ಸುರೇಶ್​ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವರ್ತೂರು ಸಂತೋಷ್ ಅವರು ಧರಿಸಿದ ಹುಲಿ ಉಗುರು ನಿಜವಾದದ್ದಾ? ಎಷ್ಟು ವರ್ಷದ ಹುಲಿ ಉಗುರು? ಅದು ಯಾವ ಜಾತಿಯ ಹುಲಿ? ಸೇರಿದಂತೆ ಇನ್ನು ಹಲವು ಮಾಹಿತಿ ಎಫ್‌ಎಸ್‌ಎಲ್‌ ವರದಿಯ ಮೂಲಕ ತಿಳಿದುಬರಬೇಕಿದೆ.

ಅದು ನಿಜವಾದ ಹುಲಿ ಉಗುರು ಎಂಬುದು ಸಾಬೀತಾದರೆ, ಹುಲಿ ಉಗುರನ್ನು ಸಂತೋಷ್​ಗೆ ನೀಡಿದ್ದು ಯಾರು? ಅವರಿಗೆ ಯಾರು ಮಾರಿದರು? ಇದರ ಮೂಲ ಎಲ್ಲಿ? ಸೇರಿದಂತೆ ಇನ್ನು ಹಲವು ಮಾಹಿತಿಗಳನ್ನು ಕಗ್ಗಲಿಪುರ ಅರಣ್ಯಾಧಿಕಾರಿಗಳು ಕಲೆಹಾಕುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಫ್​​ಎಸ್​​ಎಲ್​ ವರದಿ ಮತ್ತು ಕಗ್ಗಲಿಪುರ ಅರಣ್ಯಾಧಿಕಾರಿಗಳು ನಡೆಸಿದ ತನಿಖೆಯ ವರದಿಯನ್ನು ಕೇಂದ್ರ ಮತ್ತು ರಾಜ್ಯ ಹುಲಿ ಸಂರಕ್ಷಣಾ ಪ್ರಾಧಿಕಾರಗಳಿಗೆ ನೀಡಲಿದ್ದಾರೆ.

ಕೇಂದ್ರ ಮತ್ತು ರಾಜ್ಯ ಹುಲಿ ಸಂರಕ್ಷಣಾ ಪ್ರಾಧಿಕಾರ ಈ ವರದಿಗಳನ್ನು ಆಧರಿಸಿ, ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳ ದತ್ತಾಂಶವನ್ನು ಪರಿಶೀಲನೆ ಮಾಡಲಿದ್ದಾರೆ.

ಕರ್ನಾಟಕದ ನಾಗರಹೊಳೆ, ಭದ್ರಾ, ಕಾಳಿ ದಾಂಡೇಲಿಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳು, ತಮಿಳುನಾಡಿನ ಅಣ್ಣಾಮಲೈ, ಸತ್ಯಮಂಗಲ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಐದು ವರ್ಷಗಳ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಐದು ವರ್ಷಗಳಲ್ಲಿ ಹುಲಿಗಳನ್ನ ಬೇಟೆಯಾಡಿರುವುದು, ಮೃತ ದೇಹಗಳ ಪತ್ತೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.

ಜಾಮೀನು ಅರ್ಜಿ ವಿಚಾರಣೆ

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.25ರಂದು 2ನೇ ಎಸಿಜೆಎಂ ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ವರ್ತೂರ್ ಸಂತೋಷ್ ಹುಲಿ ಉಗುರು ಧರಿಸಿ‌ದ್ದಕ್ಕೆ ಬಂಧಿಸಲಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋದ 15 ದಿನಕ್ಕೆ ಸಂತೋಷ್‌ರನ್ನು ಅರಣ್ಯಾಧಿಕಾರಿಗಳು ಬಂಧಿಸಿ ಕರೆತಂದಿದ್ದರು. ಭಾನುವಾರ ಸಂಜೆ ಬಿಗ್ ಬಾಸ್ ಮನೆಗೆ ಹೋಗಿ, ಸಂತೋಷ್‌ರನ್ನು ವಶಕ್ಕೆ ಪಡೆಯಲಾಗಿತ್ತು. ನಂತರ ವಿಚಾರಣೆ ನಡೆಸಿ, ಬಂಧಿಸಲಾಗಿತ್ತು.

ಸೋಮವಾರ (ಅ.23) ಕೋರಮಂಗಲದ ಜಡ್ಜ್ ನಿವಾಸದಲ್ಲಿ ಸಂತೋಷ್‌ರನ್ನು ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು. ಆ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ನೀಡಲಾಗಿತ್ತು. ಇದೀಗ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿರುವ ಸಂತೋಷ್‌ಗೆ ವಿಚಾರಣಾಧೀನ ಕೈದಿ ಸಂಖ್ಯೆ 10935 ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉದ್ಯಮಿ ಅಪಹರಿಸಿ ₹50 ಲಕ್ಷಕ್ಕೆ ಬೇಡಿಕೆ; ನಾಲ್ವರ ಬಂಧನ

ಸೆಲೆಬ್ರೆಟಿಗಳಿಗೂ ಬಂದ ಹುಲಿ ಉಗುರು ಸಂಕಷ್ಟ

ವರ್ತೂರು ಸಂತೋಷ್ ಬಂಧನವಾದ ಬೆನ್ನಲ್ಲೆ, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಹಲವು ನಟರು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ.

ಸೆಲಬ್ರೆಟಿಗಳು ಟಿವಿ ಸಂದರ್ಶನ ಸಂದರ್ಭಗಳಲ್ಲಿ ಹುಲಿ ಉಗುರು ಧರಿಸಿಕೊಂಡು ತೆಗೆಸಿಕೊಂಡ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...