ತಿಪಟೂರು | ವಿದ್ಯಾರ್ಥಿಗಳಿಗೆ ಏಕಾಗ್ರತೆ ಶ್ರದ್ಧೆ ಅರಿವು ಬಹಳ ಮುಖ್ಯ: ಗುರುಕುಲ ಶ್ರೀ

Date:

 ವಿದ್ಯಾರ್ಥಿಗಳಿಗೆ ಏಕಾಗ್ರತೆ ಶ್ರದ್ಧೆ ಅರಿವು ಬಹಳ ಮುಖ್ಯವಾದದ್ದು ಇದನ್ನು ಯಾರು ಪಾಲಿಸುತ್ತಾರೋ ಅವರು ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದು ಗುರುಕುಲ ಮಠದ ಶ್ರೀ ಇಮ್ಮಡಿ ಕರಿಬಸವದೇಶಿ ಕೇಂದ್ರ ಮಹಾ ಸ್ವಾಮೀಜಿಗಳು ತಿಳಿಸಿದರು.

 ತಿಪಟೂರು ನಗರದ ಶ್ರೀ ಗುರುಕುಲ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನಕ್ಕಿಂತ ಮೀಗಿಲಾಗಿದ್ದು ಜಗತ್ತಿನಲ್ಲಿ ಯಾವುದು ಇಲ್ಲ. ಜ್ಞಾನ ಬಹಳ ಮುಖ್ಯವಾದದ್ದು ಜ್ಞಾನ ಇಲ್ಲದೆ ಇದ್ದರೆ ಬದುಕಿಗೆ ಬೆಲೆ ಇಲ್ಲ. ಶಿಕ್ಷಣದಲ್ಲಿ ಎರಡು ವಿಧಗಳನ್ನು ಕಾಣುತ್ತೇವೆ ಒಂದು ಲೌಕಿಕ, ಇನ್ನೊಂದು ಆಧ್ಯಾತ್ಮಿಕ ಶಿಕ್ಷಣ. ಈ ಎರಡು ಶಿಕ್ಷಣಗಳು ಜೀವನದಲ್ಲಿ ಬಹಳ ಮುಖ್ಯ. ಪ್ರಸ್ತುತ  ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸಂಗ್ರಹಣೆಗೆ ಒತ್ತು ನೀಡಬೇಕು. ನಿಜವಾದ ತಪಸ್ಸು ಎಂದರೆ ಶ್ರದ್ಧೆ, ಏಕಾಗ್ರತೆ, ಹರಿವು, ಬಹಳ ಮುಖ್ಯವಾದದ್ದು, ಶಿಸ್ತನ್ನು ಯಾರು ಪಾಲಿಸುತ್ತಾರೋ ಅವರ ಶಿಕ್ಷಕರು ಅವರ ಜೊತೆಯಲ್ಲೇ ಇರುತ್ತಾರೆ ಗುರು ಹಿರಿಯರಿಗೆ ಗೌರವ ಕೊಡುವುದು ನಿಮ್ಮ ತಂದೆ ತಾಯಿಗಳಿಗು ಗೌರವ ಬರುತ್ತದೆ ಶಿಸ್ತಿಗೆ ಚುತಿ ಬಾರದಂತೆ ನಡೆದುಕೊಳ್ಳಬೇಕು ಏಕಾಗ್ರತೆಯಿಂದ ಮಾತ್ರ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಹಿತವಚವನ್ನು ನೀಡಿದರು.

 ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಕಂಚಿರಾಯಪ್ಪ ಮಾತನಾಡಿ  ಇಂದಿನ ಶೈಕ್ಷಣಿಕ ವಾತಾವರಣ ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ಯಾಂತ್ರಿಕೃತವಾಗಿದೆ. ಅನೇಕ ಮಾಧ್ಯಮಗಳು ಶಿಕ್ಷಣದ ಮಹತ್ವ ಇಂದು ಕಡಿಮೆ ಆಗುತ್ತಿದೆ. ಅಂಥ ವರದಿಗಳನ್ನು ನಾವು ನೀವೆಲ್ಲರೂ ಗಮನಿಸುತ್ತಿದ್ದೇವೆ. ಇಂದಿನ ವಿದ್ಯಾರ್ಥಿಗಳು ಅಕ್ಷರ ಸಂಸ್ಕೃತಿಯಿಂದ ದೂರವಾಗುತ್ತಿದ್ದಾರೆ. ಮೊಬೈಲಿನ ದಾಸರಾಗಿದ್ದು ಸಾಮಾಜಿಕ ಜಾಲತಾಣಗಳ ದಾಸರಾಗಿದ್ದು ವಿದ್ಯಾರ್ಥಿಗಳ ಮನಸ್ಥಿತಿ ಬದಲಾವಣೆ ಆಗಬೇಕು ಯಶಸ್ಸಿನ ಮೆಟ್ಟಿಲು ಹತ್ತಿ ಗುರಿ ಮುಟ್ಟಬೇಕು. ಆಗ ಮಾತ್ರ ವಿದ್ಯಾರ್ಥಿಗಳು ನಿಮ್ಮ ತಂದೆ ತಾಯಿಗಳಿಗೆ ಹಾಗೂ ನಿಮ್ಮ ಗುರು ಹಿರಿಯರಿಗೆ ಸಂದ ಗೌರವವಾಗುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ವಿದ್ಯಾಸಂಸ್ಥೆಯ ಶೈಕ್ಷಣಿಕ ಸಂಯೋಜನಾಧಿಕಾರಿ ಮಹಾಲಿಂಗಯ್ಯ ವಿ ಬಿ, ಪ್ರಾಂಶುಪಾಲರಾದ ಮಹೇಶಯ್ಯ ಎಸ್, ಹಿರಿಯ ಉಪನ್ಯಾಸಕರಾದ ಕೆಂಪಯ್ಯ, ರುದ್ರಸ್ವಾಮಿ, ಕವಿತಾ, ಉಷಾ, ಕುಸುಮ, ಯೋಗಾನಂದ, ಸಿದ್ದೇಶ್, ರಾಜೇಶ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ – ಮಿಥುನ್ ತಿಪಟೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...