ತಿಪಟೂರು | ಭಾರತಕ್ಕೆ ಪ್ರಜಾಪ್ರಭುತ್ವವೇ ಹೊಸಧರ್ಮ : ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ

Date:

ಭಾರತಕ್ಕೆ ಪ್ರಜಾಪ್ರಭುತ್ವವೇ ಹೊಸಧರ್ಮವಾಗಿದೆ, ಪ್ರೀತಿ ಹಾಗೂ ಸ್ವಾಭಿಮಾನದಿಂದ ಹೊಸ ಪ್ರಜಾಪ್ರಭುತ್ವ ಧರ್ಮಕಟ್ಟಿ ಬೆಳೆಸಬೇಕು ಎಂದು ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು.

ತಿಪಟೂರು ನಗರದ ಜನಸ್ಪಂದನಾ ಟ್ರಸ್ಟ್ ವತಿಯಿಂದ ಆಯೋಜಿಸಿದ ಜನಸಂಭ್ರಮ ಕಾರ್ಯಕ್ರಮದಲ್ಲಿ ತಿಪಟೂರು ಸಾಂಸ್ಕೃತಿಕ ನಾಯಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,  ಜಾತಿರಾಜಕಾರಣ, ಧರ್ಮರಾಜಕಾರಣ, ಭಾಷಾರಾಜಕಾರಣದ ಸೇರಿದಂತೆ ಎಲ್ಲಾ ಕ್ಷೇತ್ರಗಳಲೂ ಕಲುಷಿತವಾಗುತ್ತಿರುವ ಸಮಯದಲ್ಲಿ ರಾಜಕಾರಣ ಎಲ್ಲಾ ಬದಲಾವಣೆಗಳಿಗೂ ಮುಲಾಮು ಆಗಿದೆ. ನಮ್ಮ ರಾಜಕೀಯ, ಬದಲಾವಣೆಯ ಗಾಳಿಗೆ ಒಳಗಾಗಬೇಕು. ಪ್ರಜಾಪ್ರಭುತ್ವ ಭಾರತ ಹೊಸಧರ್ಮವಾಗಿದ್ದು ನಾವು, ಹೊಸಪ್ರಜಾಪ್ರಭುತ್ವ ಧರ್ಮವನ್ನು ಪ್ರೀತಿಯ ನೆಲೆಗಟ್ಟಿನಲ್ಲಿ ಕಟ್ಟುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

1000729703

ಮೈಸೂರು ರಂಗಾಯಣ ನಿರ್ದೇಶಕ ತಿಪಟೂರು ಸತೀಶ್ ಮಾತನಾಡಿ, ತಿಪಟೂರು ನೆಲ ಪ್ರತಿರೋಧದ ಗುಣಹೊಂದಿದೆ, ಅನೇಕ ಸಾಂಸ್ಕೃತಿಕ ನಾಯಕರಿಗೆ ಜನ್ಮ ನೀಡುವ ಜೊತೆಗೆ, ಭೂಮಿಕೆ ಹೊದಗಿಸಿದೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಾಜಕಾರಣಕ್ಕೆ ಹೊಸರೂಪಕೊಡುವ ಮೂಲಕ ಟೂಡ ಶಶಿಧರ್ ಮತ್ತು ತಂಡ ಹೊಸ ಬರವಸೆ, ಮೂಡಿಸಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಟೂಡಾ ಶಶಿಧರ್ ಮಾತನಾಡಿ ಜನಸ್ಪಂದನಾ ಟ್ರಸ್ಟ್ ಹಲವಾರು ಸಹೃದಯಿ ಸ್ನೇಹಿತರೊಂದಿಗೆ, ಸಮುದಾಯಗಳೆಡೆಗೆ ನಮ್ಮ ನಡಿಗೆ ಘೋಷ ವಾಕ್ಯದೊಂದಿಗೆ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಕೋವಿಡ್ ಕಾಲಘಟ್ಟದಲ್ಲಿ ಜನಸಾಮಾನ್ಯರಿಗೆ ನೆರವು ನೀಡುವ, ಜೊತೆಗೆ, ರಾಜ್ಯಸರ್ಕಾರದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಸಿದ ಜನಚಳುವಳಿಯಲ್ಲಿ ನಮ್ಮ ಸಂಘಟನೆಯ, ಮಹತ್ವದ ಪಾತ್ರವಹಿಸಿದ ಹೆಮ್ಮೆ ನಮಗಿದೆ, ಎಲ್ಲ ಜನಚಳವಳಿ ಒಡನಾಡಿಗಳೊಂದಿಗೆ ಅನೇಕ ಮಹತ್ವದ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆ ತಿಪಟೂರು ನಖರದಲ್ಲಿ ಜನಸ್ಪಂದನಾ ಟ್ರಸ್ಟ್ ನಿಂದ ಆಯೋಜಿಸಿದ್ದ ಜನಸಂಭ್ರಮ ಕಾರ್ಯಕ್ರಮದಲ್ಲಿ ಸಾಹಿತಿ ಎಸ್ ಗಂಗಾಧರ್, ಕೇಂದ್ರ ಮಕ್ಕಳ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ, ನಟರಾಜ್ ಹೊನ್ನವಳ್ಳಿ, ಚಲನಚಿತ್ರ ಕಲಾವಿದ ವಿಷ್ಣುಕುಮಾರ್, ಮೈಸೂರು ರಂಗಾಯಣ ನಿರ್ದೇಶಕ ತಿಪಟೂರು ಸತೀಶ್, ರಂಗಕಲಾವಿದೆ ರಾಜೇಶ್ವರಿ, ವಾಣಿ ಸತೀಶ್ ಮುಂತ್ತಾದವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘಟಕರಾದ ಶ್ರೀಕಾಂತ್ ಕೆಳಹಟ್ಟಿ, ದಿಲಾವರ್, ಸತೀಶ್ ಕಾಡಶೆಟ್ಟಿಹಳ್ಳಿ, ಅಲ್ಲಾಭಕ್ಷ್ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...