ತಿಪಟೂರು | ಕಲ್ಪತರು ವಿದ್ಯಾ ಸಂಸ್ಥೆಯಿಂದ ಜನವರಿ  9 ರಿಂದ ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ

Date:

ತಿಪಟೂರು:ಕಲ್ಪತರು ವಿದ್ಯಾ ಸಂಸ್ಥೆಯ ವತಿಯಿಂದ ಜನವರಿ  9 ರ ಗುರುವಾರ ಬೆಳಗ್ಗೆ 9:30 ರಿಂದ ಸಂಜೆ 5:00 ರ ವರೆಗೆ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ವನ್ನು ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಪತರು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಹೆಚ್‌.ಜಿ.ಸುಧಾಕರ್ ತಿಳಿಸಿದರು.

ತಿಪಟೂರು ನಗರದ ಕಲ್ಪತರು ತಾಂತ್ರಿಕ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಬೃಹತ್ ಉದ್ಯೋಗ ಮೇಳವನ್ನು ಕಲ್ಪತರು ವಿದ್ಯಾಸಂಸ್ಥೆಯು ಇದೇ ಮೊದಲ ಬಾರಿಗೆ ತಿಪಟೂರು,ಅರಸೀಕೆರೆ ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸುಮಾರು ಪ್ರತಿಷ್ಠಿತ 75ರಿಂದ 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು,ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಲ್ಪತರು ವಿದ್ಯಾ ಸಂಸ್ಥೆ ಉಪಾಧ್ಯಕ್ಷರಾದ ಜಿ.ಪಿ. ದೀಪಕ್ ಮಾತನಾಡಿ, ಮೊದಲ ಬಾರಿಗೆ ನಮ್ಮ ವಿದ್ಯಾ ಸಂಸ್ಥೆಯ ವತಿಯಿಂದ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡುತ್ತಿದ್ದೇವೆ. ಇಂಜಿನಿಯರಿಂಗ್,ಎಂಬಿಎ, ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುತ್ತಿದ್ದು, ಆದರೆ ಐಟಿಐ,ಬಿ.ಎ, 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ.ಎಸ್‌.ಸಿ,ವಿದ್ಯಾರ್ಥಿಗಳಿಗೆ ಸಹಾಯವಾಗಲು ಬೆಂಗಳೂರಿನ ಪ್ರತಿಷ್ಠಿತ ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಇದರಲ್ಲಿ ಭಾಗವಹಿಸುತ್ತಿವೆ. ಸುಮಾರು 3000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ಸಂಗಮೇಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು 

ಎಸ್.ಎಸ್.ಎಲ್.ಸಿ, ಪಿಯುಸಿ,ಐಟಿಐ, ಡಿಪ್ಲೋಮೋ,ಬಿಎ, 

ಬಿಎಸ್ಸಿ ಮುಗಿಸಿರುವ ಗ್ರಾಮೀಣ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ. ಷಡಕ್ಷರಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಪಿ.ಕೆ. ತಿಪ್ಪೇರುದ್ರಪ್ಪನವರು, ಮುಖ್ಯ ಅತಿಥಿಗಳಾಗಿ ಡಾ.ರಾಮಕೃಷ್ಣ ರೆಡ್ಡಿ,ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ನ ಶ್ರೀಮತಿ ಕರ್ಪಗಮ್ ಪ್ರಕಾಶ್, ಇನ್ನು ಹಲವಾರು ಕಂಪನಿ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಬಾಗೇಪಲ್ಲಿ ನಟರಾಜು,ಬಿ.ಎಸ್. ಉಮೇಶ್, ಕಾರ್ಯದರ್ಶಿಗಳಾದ ಜಿ.ಎಸ್. ಉಮಾಶಂಕರ್ ಮತ್ತು ಜಗದೀಶ್ ಮೂರ್ತಿ ಸೇರಿದಂತೆ ಕಲ್ಪತರು ವಿದ್ಯಾ ಸಂಸ್ಥೆಯ ಪ್ರಾಂಶುಪಾಲರುಗಳು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.

ವರದಿ – ಮಿಥುನ್ ತಿಪಟೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...