ತಿಪಟೂರು | ಕಲ್ಪತರು ನಾಡಿನ ನೂತನ ಶಾಸಕರಿಗೆ ಸರಣಿ ಸವಾಲು

Date:

ಕಲ್ಪತರು ನಾಡಿನಲ್ಲಿ ಒಮ್ಮೆ ಗೆದ್ದವರ ಮರುಆಯ್ಕೆ ಕಷ್ಟಸಾಧ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ನೂತನ ಶಾಸಕರಾಗಿ ಕೆ ಷಡಕ್ಷರಿ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ ಷಡಕ್ಷರಿ ಮೂರನೇ ಬಾರಿಗೆ ಆಯ್ಕೆಯಾಗಿದ್ದು, ದಾಖಲೆ ಬರೆದಿದ್ದಾರೆ. ಎರಡು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದ್ದರೂ ಅವರ ಮುಂದೆ ಸಾಗರದಷ್ಟು ಸವಾಲು, ಸಾವಿರದಷ್ಟು ನಿರೀಕ್ಷೆಗಳಿವೆ. ಇವುಗಳನ್ನು ಸರಿದೂಗಿಸಿಕೊಂಡು ಆಡಳಿತ ನಡೆಸುವುದು ಅವರ ಎದುರಿಗಿರುವ ಸದ್ಯದ ಸವಾಲಾಗಿದೆ.

‘ಕಲ್ಪತರು ನಾಡು’, ‘ಕೊಬ್ಬರಿ ಕಣಜ’ ಎಂದೇ ಪ್ರಖ್ಯಾತಿ ಪಡೆದಿರುವ ತಿಪಟೂರು ತಾಲೂಕು ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೊಬ್ಬರಿ ಮಾರುಕಟ್ಟೆ ಹೊಂದಿದೆ. ಕಳೆದ ವರ್ಷ ಕ್ವಿಂಟಲ್ ಕೊಬ್ಬರಿ ದರ ₹19,000 ತಲುಪಿತ್ತು. ಆದರೆ, ಐದು ತಿಂಗಳಿನಿಂದ ಕೊಬ್ಬರಿ ದರದಲ್ಲಿ ಭಾರೀ ಕುಸಿತವಾಗಿರುವುದು ರೈತರನ್ನು ಕೆಂಗೆಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಲೂಕು ರೈತ ಸಂಘ ಕೊಬ್ಬರಿ ಬೆಲೆ ಏರಿಕೆಗೆ ಒತ್ತಾಯಿಸಿ 35 ದಿನ ಧರಣಿ ನಡೆಸಿತ್ತು. ಆಗ ಸ್ಥಳಕ್ಕೆ ಕೆ.ಷಡಕ್ಷರಿ ಬಂದಿದ್ದು, ಬೆಂಬಲ ವ್ಯಕ್ತಪಡಿಸಿದ್ದರು.  ಚುನಾವಣೆ ಪ್ರಚಾರ ವೇಳೆ ತಾಲೂಕಿಗೆ ಬಂದಿದ್ದ ಸಿದ್ದರಾಮಯ್ಯ ಕೊಬ್ಬರಿ ಬೆಲೆಯನ್ನು ₹15,000 ಏರಿಸುವ ಭರವಸೆ ನೀಡಿದ್ದರು. ಹಾಗಾಗಿ ಆಸೆ ಕಂಗಳಿನಿಂದ ಎದುರು ನೋಡುವಂತಾಗಿದೆ” ಎಂಬುದು ರೈತರ ಅಭಿಪ್ರಾಯವಾಗಿದೆ.

“ತಮ್ಮ ಬಳಿ ಈಗಾಗಲೇ ಕೊಬ್ಬರಿ ಶೇಖರಣೆಯಾಗಿದ್ದು, ತುಂಬಾ ತಡವಾದರೆ ಕೊಬ್ಬರಿಯ ಗುಣಮಟ್ಟ ಕಳಪೆಯಾಗುವ ಆತಂಕವಾಗಿದೆ. ಇನ್ನೂ ಕೊಬ್ಬರಿ ಬೆಲೆ ಕುಸಿತ ಕಂಡಾಗ ಕೊಬ್ಬರಿ ಹಾಳಾಗದಂತೆ ಶೇಖರಣೆ ಮಾಡಲು ಶಿತಲೀಕರಣ ಘಟಕದ ಅಗತ್ಯವಿದೆ. ಎಪಿಎಂಸಿಯಲ್ಲಿ ರೈತರದ್ದೇ ಸಾಕಷ್ಟು ಹಣ ಇದೆ. ಅದನ್ನು ಸದ್ಬಳಕೆ ಮಾಡಿಕೊಂಡು ಶಿತಲೀಕರಣ ಘಟಕ ಸ್ಥಾಪಿಸಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ” ಎಂದು ತಿಳಿಸಿದ್ದಾರೆ.

“2013ರಲ್ಲಿ ಕೆ.ಷಡಕ್ಷರಿ ಶಾಸಕರಾದಾಗ ತಿಪಟೂರು ತಾಲೂಕು ಗಣಿಬಾಧಿತ ಪ್ರದೇಶವಾಗಿರುವುದರಿಂದ ಸುಮಾರು ₹750 ಕೋಟಿ ಅನುದಾನ ಪ್ರದೇಶ ಅಭಿವೃದ್ಧಿಗೆ ಮೀಸಲಾಗಿದೆ. ಮೂರು ಜಿಲ್ಲೆಗಳಿಗೆ ಅನುಕೂಲವಾಗುವಂತಹ ಸರ್ಕಾರಿ ಹೈಟೆಕ್ ಸೂಪರ್ ಸ್ಫೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಹೊಂದಿದೆ. ಹಾಗಾಗಿ ತಾಲೂಕಿನ ತಿಮ್ಲಾಪುರದ ಬಳಿ ಜಾಗ ಗುರುತಿಸಲಾಗಿತ್ತು. ಇದೀಗ ಆಸ್ಪತ್ರೆ ನಿರ್ಮಾಣ ಕಾರ್ಯ ಜಾರಿಗೆ ಬರುವ ನಿರೀಕ್ಷೆಯಿದೆ” ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಬನ್ನೇರುಘಟ್ಟ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶ

“ತಾಲೂಕಿನ ಕೆಲ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಬಾಕಿ ಇದೆ. ಶಾಸಕರ ಅನುದಾನದಲ್ಲಿ, ವಿಶೇಷ ಅನುದಾನದಲ್ಲಿ ರಸ್ತೆಗಳ ಅಭಿವೃದ್ಧಿ ಆಗುವ ಸಾಧ್ಯತೆ ಇದೆ. ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ಜಲಜೀವನ್ ಮಿಷನ್ ಅಡಿಯಲ್ಲಿ ನೀರು ಸರಬರಾಜು ಮಾಡುತ್ತಿದ್ದು, ಶುದ್ಧ ಕುಡಿಯುವ ನೀರಿನ ಅಭಾವ ಇದೆ. ಹಾಗಾಗಿ ಬಹುತೇಕ ಗ್ರಾಮಗಳಿಗೆ ಶುದ್ಧ ನೀರಿನ ಘಟಕ ನಿರ್ಮಾಣ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಜನರ ನಂಬಿಕೆ ಉಳಿಸುವ ಯತ್ನ ರಾಜ್ಯದಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸುವುದರಿಂದ ತಾಲೂಕಿನ ಅಭಿವೃದ್ಧಿಗೆ ಸಕಲ ಪ್ರಯತ್ನ ಮಾಡಲಾಗುವುದು. ಈಗಾಗಲೇ ಅನೇಕ ಯೋಜನೆ ಜಾರಿಗೆ ತಂದಿದ್ದು, ಸಾವಿರಾರು ಕೋಟಿ ಅನುದಾನವನ್ನು ಹಿಂದೆಯೂ ತಂದಿದ್ದೇನೆ. ಮುಂದಿನ ದಿನಗಳಲ್ಲಿಯೂ ಹಲವು ನೂತನ ಯೋಜನೆಗಳೊಂದಿಗೆ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಜನರ ನಂಬಿಕೆ ಉಳಿಸಿಕೊಳ್ಳುತ್ತೇನೆ” ಎಂದು ಶಾಸಕ ಕೆ.ಷಡಕ್ಷರಿ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...