ತಿಪಟೂರು | ಸಯದ್ ಮೆಹಮೂದ್‌ ಸೌಹಾರ್ದತೆಯ ಪ್ರತೀಕ : ಟೂಡಾ ಶಶಿಧರ್

Date:

 ಭಾವೈಕ್ಯತೆಗೆ ಹೆಸರಾಗಿದ್ದ ಸಯದ್ ಮೆಹಮೂದ್ ಅವರ ವ್ಯಕ್ತಿತ್ವ ಇಂದಿನ ಕಾರ್ಯಕ್ರಮಕ್ಕೆ ಪ್ರೇರಣೆಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ ಹೆಚ್ಚಾಗುತ್ತದೆ ಎಂದು ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟೂಡಾ ಶಶಿಧರ್ ತಿಳಿಸಿದರು.

ತಿಪಟೂರು ನಗರದ ರೋಟರಿ ಭವನದಲ್ಲಿ ಏರ್ಪಡಿಸಿದ್ದ ಸೈಯದ್ ಮೆಹಮೂದು –ಒಂದು ನೆನಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮೆಹಮೂದ್ ಸಾರ್ವಜನಿಕ ಜೀವನದಲ್ಲಿ ಗೆದ್ದಿದ್ದರು. ಅವರು ಎಂದೂ ಅಧಿಕಾರದ ಹಿಂದೆ ಹೋದವರಲ್ಲ. ಬಹಳ ವರ್ಷಗಳ ಹಿಂದೆಯೇ ನಗರದಲ್ಲಿ ಕೈಗಾರಿಕೋದ್ಯಮಿಯಾಗಿ ಬಹಳಷ್ಟು ಜನರಿಗೆ ಉದ್ಯೋಗ ನೀಡಿದ್ದ ಅವರು ಗಾಂಧೀನಗರ ಭಾಗದ ಜನರನ್ನು ಒಗ್ಗೂಡಿಸಿ ಅವರಿಗೆ ಶಕ್ತಿ ತುಂಬಿದರು. ನಗರಸಭೆಯ ಸದಸ್ಯರಾಗಿ ಆಯ್ಕೆಯಾದ ಮೇಲೆ ಅಧ್ಯಕ್ಷರಾಗುವ ಅವಕಾಶ ಸ್ವಲ್ಪದರಲ್ಲಿಯೇ ಕೈತಪ್ಪಿ ಉಪಾಧ್ಯಕ್ಷರಾಗಿ ಆಯ್ಕೆಯಾದರೂ ಅಧಿಕಾರದ ಹಿಂದೆ ಹೋಗಲಿಲ್ಲ. ಸಮಾಜದ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಹಗಲಿರುಳೂ ದುಡಿದ ಅವರು ಕುಟುಂಬದಲ್ಲಿಯೂ ಎಲ್ಲರ ಪಾಲಿಗೆ ಹೀರೋ ಆಗಿದ್ದುದು ವಿಶೇಷ. ಅವರ ಸುಂದರ ವ್ಯಕ್ತಿತ್ವವೇ ಇಂದಿನ ಕಾರ್ಯಕ್ರಮಕ್ಕೆ ಪ್ರೇರಣೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಬೆಂಗಳೂರಿನ ಉರ್ದು ಅಕಾಡೆಮಿ ಮಾಜಿ ಅಧ್ಯಕ್ಷ ಮುಬಿನ್ ಮುನಾವರ್ ತಿಪಟೂರಿನ ಮಸೀದಿಗಳನ್ನು ಮೆಹಮೂದ್ ಯಾವ ರೀತಿ ಅಭಿವೃದ್ಧೀಪಡಿಸಿದರು ಎಂಬುದು ನಾವು ನೋಡಿದ್ದೇವೆ. ಹಿಡಿದ ಕೆಲಸಗಳನ್ನು ಪಟ್ಟು ಬಿಡದೇ ಮಾಡುವುದು ಅವರ ಜಾಯಮಾನ. ಮುಸಲ್ಮಾನರ ವಿದ್ಯಾಭ್ಯಾಸಕ್ಕಾಗಿ ಆಲ್-ಅಮೀನ್ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದರು. ಅವರ ಕನಸನ್ನು ನಾವು ನನಸು ಮಾಡಬೇಕಿದೆ. ಮೆಹಮೂದ್ ಅವರ ನೆನಪಿಗಾಗಿ ಅವರ ಹೆಸರಿನಲ್ಲಿ ಶಾಲೆ ಲೈಬ್ರರಿ ಸ್ಥಾಪಿಸಬೇಕು. ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಅವರ ಜೀವನ ಚರಿತ್ರೆಯನ್ನು ಪುಸ್ತಕದ ರೂಪದಲ್ಲಿ ತರಬೇಕು. ಅವರ ಸಾಧನೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಇದಕ್ಕೆ ನಾನೂ ಕೂಡ ಸಹಾಯ ಮಾಡುತ್ತೇನೆ ಎಂದು ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರಿನ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಸಮೀವುಲ್ಲ ಮಾತನಾಡಿ ಮೆಹಮೂದ್ ತಾವು ಉತ್ತಮ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗದಿದ್ದರೂ ಮನೆ-ಮನೆಗೂ ಭೇಟಿ ನೀಡಿ ಮುಸ್ಲಿಂ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ಸಾರಿ ಹೇಳಿದರು. ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಕಟ್ಟಿದರು. ಮಸೀದಿ ನಿರ್ಮಾಣಕ್ಕೆ ಅದರ ನಿರ್ವಹಣೆಗೆ ನಿರಂತರ ಆದಾಯಕ್ಕಾಗಿ ಅಂಜುಮಾನ್ ಕಾಂಪ್ಲೆಕ್ಸ್ ಕಟ್ಟಿ ಸಮಾಜದ ಅಭಿವೃದ್ಧಿಗೆ ನೆರವಾದರು. ಅವರ ಕಾರ್ಯಕ್ರಮವನ್ನು ಜನಸ್ಪಂದನ ಟ್ರಸ್ಟ್ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ನಗರಸಭಾ ಸದಸ್ಯರಾದ ಶ್ರೀನಿವಾಸ್, ನಯೀಮ್ ಪಾಷ, ಮಹಮ್ಮದ್ ಗೌಸ್, ಕೆಕೆ ಕಾನ್ವೆಂಟ್‌ನ ತನ್ವೀರ್ ಸಹ್ಮದ್, ಮುತುವಲ್ಲಿ ಇಸ್ಮಾಯಿಲ್ ಮಾತನಾಡಿದರು.

 ಮುಖಂಡರಾದ, ಅಲ್ಲಾಬಕ್ಷ, ಅಬ್ದುಲ್ ಖುದೂಸ್, ಶ್ರೀಕಾಂತ್ ಕೆಳಹಟ್ಟಿ ಜನಸ್ಪಂದನಾ ಹಾಗೂ ಸೌಹಾರ್ಧ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...