ಧಾರವಾಡದ ವೆಂಕಟೇಶ್ವರ ದೇವರ ಮೂರ್ತಿ ಪ್ರತಿಷ್ಠಾಪಿಸಿದ್ದು, ಟಿಪ್ಪು ಸುಲ್ತಾನ್: ಪ್ರೊ. ಎ.ವಾಯ್.ಸಾವಂತ್

Date:

ಧಾರವಾಡಕ್ಕೂ ಟಿಪ್ಪುವಿಗೂ ಒಂದು ರೀತಿಯ ನಂಟಿದೆ. ಟಿಪ್ಪು ಸುಲ್ತಾನ್ ಆಡಳಿತ ಅವಧಿಯಲ್ಲಿ ಅನೈತಿಕ, ಅವ್ಯವಹಾರಕ್ಕೆ ಅವಕಾಶ ಇರಲಿಲ್ಲ. ವಿಶೇಷವಾಗಿ ಹೇಳಬೇಕೆಂದರೆ ಶುಕ್ರವಾರಪೇಟೆಯಲ್ಲಿ ಸ್ವತಃ ವೆಂಕಟೇಶ್ವರ ದೇವರ ಮೂರ್ತಿಯನ್ನು ಟಿಪ್ಪು ಸುಲ್ತಾನ್ ಪ್ರತಿಷ್ಠಾಪಿಸಿದರು ಎಂದು ನಗರದ ಅಂಜುಮನ್ ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯತೆಯಲ್ಲಿ ಯುವಜನರ ಪಾತ್ರ ಘೋಷವಾಕ್ಯದಲ್ಲಿ ಹಮ್ಮಿಕೊಂಡಿದ್ದ ‘ವಿಚಾರ ಸಂಕೀರ್ಣ’ ಕಾರ್ಯಕ್ರಮದಲ್ಲಿ ಪ್ರೊ. ಎ.ವಾಯ್.ಸಾವಂತ್ ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಂಜುಮನ್ ಇಸ್ಲಾಂ ಸಂಸ್ಥೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಷ್ಟ್ರವೀರ ಟಿಪ್ಪು ಸುಲ್ತಾನ್ ಯುವ ಮಂಡಳ, ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ್ ಟ್ರಸ್ಟ್, ಈದಿನ.ಕಾಮ್ ಡಿಜಿಟಲ್ ಮಾಧ್ಯಮ, ಕನ್ನಡ ಸಾಹಿತ್ಯ ವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ, ಸ್ಟಾರ್ 74 ನ್ಯೂಸ್ ಚಾನೆಲ್ ಇವರ ಸಂಯುಕ್ತಾಶ್ರಯದಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಮತ್ತು ರಾಷ್ಟ್ರವೀರ ದೇಶಪ್ರೇಮಿ ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಈ ವೇಳೆ ಮಾತನಾಡುತ್ತಾ, ಟಿಪ್ಪು ಸುಲ್ತಾನ್ ವೆಂಕಟೇಶ್ವರ ಮೂರ್ತಿ ಪ್ರತಿಷ್ಠಾಪಿಸಿ ಪೂಜಾರಿಯನ್ನು ನೇಮಿಸಿದರು. ಮತ್ತು ದೇವಸ್ಥಾನಕ್ಕಾಗಿ ನವಲೂರಿನಲ್ಲಿ 4 ಎಕರೆ ಜಮೀನು ದಾನ ಮಾಡಿದರು. ಅದರ ಜೊತೆಗೆ ಟಿಪ್ಪು ಭೂಮಾಪನ ವ್ಯವಸ್ಥೆಯನ್ನು ಧಾರವಾಡದಲ್ಲಿ ಮೊಟ್ಟಮೊದಲಿಗೆ ಜಾರಿಗೆ ತಂದರು. ಮೊಟ್ಟಮೊದಲಿಗೆ ಕ್ಷಿಪಣಿ ಪ್ರಯೋಗವನ್ನು ಪ್ರಾರಂಭಿಸಿದ್ದು ಟಿಪ್ಪು. ವಿದೇಶಿಗರು ನೇರವಾಗಿ ನಮ್ಮ ರಾಜ್ಯಕ್ಕೆ ಬರಬಾರದು ಎಂಬ ಉದ್ದೇಶದಿಂದ ಕಾರವಾರದಲ್ಲಿ ಸೀ-ಬರ್ಡ್ ನೌಕಾಲಯವನ್ನು ನಿರ್ಮಿಸಿದರು ಎಂದು ಮೋಡಿ ಲಿಪಿಯ ಮೂಲಕ ಟಿಪ್ಪುವಿನ ಇತಿಹಾಸವನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮಾತನಾಡಿ, ಕನ್ನಡ ಪ್ರೇಮಿ ಟಿಪ್ಪು ಸುಲ್ತಾನ್ ಅವರ ವಿಚಾರಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು. ಅವರು ಆದರ್ಶದ ವ್ಯಕ್ತಿಯಾಗಿದ್ದು, ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು. ಮತ್ತು ಎಲ್ಲ ಧರ್ಮಗಳು ಒಗ್ಗಟ್ಟಾಗಿ ಬದುಕುವುದನ್ನು ಕಲಿಸುತ್ತವೆ ಎಂದು ಹೇಳಿದರು.

ಇದನ್ನೂ ಓದಿ ಧಾರವಾಡ | ಕನ್ನಡಿಗರು ಭಾಷೆ, ಸಂಸ್ಕೃತಿಯ ಬಗ್ಗೆ ಉದಾಸೀನ ಮನೋಭಾವ ಹೊಂದಬಾರದು: ಡಾ. ಮಹೇಶ ವಾಳ್ವೇಕರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಎಮ್ ಕೆ ನದಾಫ್, ಕುಮಾರಿ ಮುಸ್ಕಾನ್ ನದಾಫ್, ಮಹಮ್ಮದ ಅಲಿ ಗುಡೂಭಾಯಿ, ಅಶ್ರಫ್ ಕಲಘಟಗಿ ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಸಿದ್ದರು. ಪ್ರಮೀಳಾ ಜಕ್ಕಣ್ಣವರ್ ಭಾವೈಕ್ಯತೆಯ ಗೀತೆಯನ್ನು ಹಾಡಿದರು. ಅನಿಲ್ ಮೈತ್ರಿ ಮತ್ತು ಸಂಗಡಿಗರು ಟಿಪ್ಪು ಸುಲ್ತಾನ್ ಲಾವಣಿ ಪದಗಳನ್ನು ಹಾಡುವುದರ ಜೊತೆಗೆ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಸಾಪ ತಾಲೂಕು ಅಧ್ಯಕ್ಷ ಮಹಾಂತೇಶ್ ನರೇಗಲ್ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...