ತೀರ್ಥಹಳ್ಳಿ | ಇನ್ನೂ ಸಿಗದ ರಸ್ತೆ ಸೌಕರ್ಯ: ಗ್ರಾಮಸ್ಥರಿಂದ ಪಂಚಾಯತ್ ಚುನಾವಣೆ ಬಹಿಷ್ಕಾರದ ಎಚ್ಚರಿಕೆ!

Date:

“ನಮ್ಮೂರಿನ ರಸ್ತೆ ಸರಿ ಇಲ್ಲ. ರಸ್ತೆ ಮಾಡದೇ ಇದ್ದಲ್ಲಿ ಮುಂಬರುವ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ. ಚುನಾವಣೆಗೆ ಬಹಿಷ್ಕಾರ ಹಾಕುತ್ತೇವೆ..”…ಹೀಗಂತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗ್ರಾಮಸ್ಥರು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಹೌದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರ್ ಕೋಳಿಗೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗಾರ್ಡಗದ್ದೆ ಗ್ರಾಮದಿಂದ ಹುರುಳಿ, ತೆಮ್ಮೆ ಮನೆ ರಸ್ತೆ ಮಾರ್ಗ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಈಗಾಗಲೇ ಎಷ್ಟೇ ಬಾರಿ ಮನವಿ ಮಾಡಿಯೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈ ರೀತಿಯ ಎಚ್ಚರಿಕೆಯನ್ನು ನೀಡಿದ್ದಾರೆ.

“ನಮ್ಮ ಊರಿನ ರಸ್ತೆಯ ಅವ್ಯವಸ್ಥೆಯ ಸಂಬಂಧ ಸ್ಥಳೀಯರು ಹಲವಾರು ಬಾರಿ ಗ್ರಾಮ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ಸರಿಪಡಿಸಿಕೊಡಿ ಎಂದು ತುಂಬಾ ಸಲ ಕೇಳಿಕೊಂಡಿದ್ದೇವೆ. ಆದರೆ, ಇಲ್ಲಿಯವರೆಗೂ ಯಾವುದೇ ರೀತಿಯ ಸ್ಪಂದನೆ ಬಂದಿರುವುದಿಲ್ಲ” ಎಂದು ಸ್ಥಳೀಯರಾದ ಗಿರೀಶ್ ಅವರು ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮೂರಿಗೆ ರಸ್ತೆ ಆಗದಿದ್ದಲ್ಲಿ ಮುಂಬರುವ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡುವುದು ಶತಸಿದ್ದ. ಇದು ನಮ್ಮೂರಿನ ಪ್ರತಿಯೊಬ್ಬ ನಾಗರಿಕರ ಅಭಿಪ್ರಾಯವಾಗಿದೆ. ಹೀಗಾಗಿ ನಮ್ಮೂರಿಗೆ ರಸ್ತೆ ಮಾಡಿಸಿಕೊಡಲು ನಿಮ್ಮ ಮಾಧ್ಯಮದ ಮೂಲಕ ಮನವಿ ಮಾಡುತ್ತಿದ್ದೇವೆ” ಎಂದು ಗಿರೀಶ್ ತಿಳಿಸಿದರು.

1002012263

ಈ ಸಂಬಂಧ ಪಿಡಿಒ ವಿಶಾಲ ಮಾತನಾಡಿ, “ನಾನು ಇಲ್ಲಿಗೆ ಅಧಿಕಾರಿಯಾಗಿ ಬಂದು 5 ರಿಂದ 6 ವರ್ಷ ಕಳೆದಿದೆ. ಅಂದಿನಿಂದಲು ಈ ಊರಿನಲ್ಲಿ ರಸ್ತೆ ಸಮಸ್ಯೆಯಿದೆ, ಈ ಸಂಬಂಧ ಹಲವಾರು ಬಾರಿ ಮೇಲಧಿಕಾರಿಗಳಿಗೆ ಮನವಿ ನೀಡಲಾಗಿದೆ. ಆದರೂ ಸಹ ಏನು ಸ್ಪಂದನೆ ಸಿಗುತ್ತಿಲ್ಲ” ಎಂದು ತಿಳಿಸಿದರು.

“ನಮ್ಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಣ್ಣಪುಟ್ಟ ಅನುದಾನದಿಂದ ಮಣ್ಣು ಹಾಕಿ ಗುಂಡಿ ಮುಚ್ಚುವ ರೀತಿ ಹಲವಾರು ಬಾರಿ ಮಾಡಿದ್ದೇವೆ. ಆದರೆ ಡಾಂಬರಿಕರಣ ಆಗಬೇಕು ಅಂದರೆ ಅದು ನಮ್ಮಿಂದ ಆಗುವುದಿಲ್ಲ. ಅಷ್ಟು ದೊಡ್ಡ ಮಟ್ಟದ ಹಣ ನಮಗೆ ಬರುವುದಿಲ್ಲ, ಇಲ್ಲಿಯವರೆಗೆ ಕೊಟ್ಟಿರುವ ಮನವಿ ಪತ್ರ ಹಾಗೂ ಎಲ್ಲ ದಾಖಲೆಗಳನ್ನು ಮತ್ತೊಮ್ಮೆ ಮೇಲಧಿಕಾರಿಗಳಿಗೆ ಕಳುಹಿಸಿಕೊಡುತ್ತೇನೆ. ಜೊತೆಗೆ ಇಲ್ಲಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಅನಾರೋಗ್ಯ ಪೀಡಿತರಿಗೆ, ವಯೋವೃದ್ಧರಿಗೆ, ಒಟ್ಟಾರೆ ಪ್ರತಿಯೊಬ್ಬರಿಗೂ ಮಳೆಗಾಲದಲ್ಲಿ ವಿಪರೀತ ಸಮಸ್ಯೆ ಎದುರಾಗುತ್ತಿದೆ. ಇಲ್ಲಿ ಸಂಬಂಧ ರಸ್ತೆ ಆಗಬೇಕು ಎಂಬುದು ನಮ್ಮ ಆಶಯವಾಗಿದೆ. ನಾವು ಸಹ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಈ ಸಂಬಂಧ ಅಧಿಕಾರಿಗಳು ಗಮನವಹಿಸುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕಾಗಿದೆ” ಎಂದು ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ವಿಜಯಪುರ | ಶಿಥಿಲಗೊಂಡಿರುವ ಬಂಗಾರ ಗುಂಡಿಯ ಸರ್ಕಾರಿ ಶಾಲೆ: ಜೀವ ಭಯದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು!

ಮುಂದಿನ ದಿನಗಳಲ್ಲಿ ಚುನಾವಣೆ ಬಹಿಷ್ಕಾರ ಆಗುತ್ತಾ? ಇಲ್ಲವೇ ಅಪಘಾತಗಳು ಉಂಟಾಗಿ ಜೀವ ಹಾನಿಯಾಗುವುದಕ್ಕೂ ಮೊದಲು ಅಧಿಕಾರಿಗಳು ಸ್ಪಂದಿಸುತ್ತಾರಾ? ಹಲವಾರು ವರ್ಷಗಳಿಂದ ಇರುವ ಈ ಮೂಲಭೂತ ಸೌಕರ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುತ್ತಾರಾ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದುನೋಡಬೇಕಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...