ಟೊಮೆಟೊ ಬಂಪರ್ | 45 ದಿನಗಳಲ್ಲಿ ₹4 ಕೋಟಿ ಲಾಭ ಪಡೆದ ರೈತ

Date:

ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿದೆ. ಕಳೆದ ಎರಡು ತಿಂಗಳಿನಿಂದ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೆ.ಜಿ ಟೊಮೆಟೊ 120ರಿಂದ 140 ರೂ.ಗೆ ಮಾರಾಟವಾಗುತ್ತಿದೆ. ದುಬಾರಿ ಬೆಲೆಯ ಸಂದರ್ಭದಲ್ಲಿ ಟೊಮೆಟೊ ಬೆಳೆದಿದ್ದ ಆಂಧ್ರಪ್ರದೇಶದ ರೈತರೊಬ್ಬರು ಒಂದೂವರೆ ತಿಂಗಳಿನಲ್ಲಿ (45 ದಿನ) ಬರೋಬ್ಬರಿಗೆ 4 ಕೋಟಿ ರೂ. ಲಾಭ ಪಡೆದಿದ್ದಾರೆ.

ಆಂಧ್ರದ ಚಿತ್ತೂರು ಜಿಲ್ಲೆಯ ರೈತ ಮುರುಳಿ ಅವರು ತಮ್ಮ 22 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, 130 ಕಿ.ಮೀ. ದೂರದಲ್ಲಿರುವ ಕೋಲಾರ ಎಪಿಎಂಸಿಯಲ್ಲಿ ಉತ್ತಮ ಬೆಲೆ ಸಿಗುತ್ತದೆಯೆಂದು ಇಲ್ಲಿಗೆ ತಂದು ಮಾರಾಟ ಮಾಡುತ್ತಿದ್ದಾರೆ. 45 ದಿನಗಳಿಂದ ಆಗಾಗ್ಗೆ ಟೊಮೆಟೊ ಕಠಾವು ಮಾಡಿ, ಮಾರಾಟ ಮಾಡಿರುವ ಅವರು ಬರೋಬ್ಬರಿ 4 ಕೋಟಿ ರೂ. ಲಾಭ ಪಡೆದಿದ್ದಾರೆ.

“ಕಳೆದ ಎಂಟು ವರ್ಷಗಳಿಂದ ಟೊಮೆಟೊ ಬೆಳೆಯುತ್ತಿದ್ದೇನೆ. ಆದರೆ, ಎಂದೂ ಅಂತಹ ಲಾಭ ಪಡೆದಿರಲಿಲ್ಲ. ಈಗ ಉತ್ತಮ ಲಾಭ ಬಂದಿದೆ” ಎಂದು ರೈತ ಮುರುಳಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಜುಲೈನಲ್ಲಿ ಬೆಲೆ ಕುಸಿತದಿಂದಾಗಿ ಭಾರಿ ನಷ್ಟವನ್ನು ಅನುಭವಿಸಿದ್ದೆವು. ಬೀಜ, ರಸಗೊಬ್ಬರ, ಕೂಲಿ, ಸಾಗಾಣಿಕೆ ಮತ್ತಿತರ ವೆಚ್ಚಗಳಿಂದಾಗಿ 1.5 ಕೋಟಿ ರೂ. ಸಾಲಕ್ಕೆ ಸಿಲುಕಿದ್ದೆವು. ಅಲ್ಲದೆ, ತಮ್ಮ ಗ್ರಾಮದಲ್ಲಿ ಸರಿಯಾದ ವಿದ್ಯುತ್ ಪೂರೈಕೆ ಇಲ್ಲದ ಕಾರಣ, ಇಳುವರಿಯೂ ಕುಸಿದಿತ್ತು” ಎಂದು ಅವರು ಹೇಳಿಕೊಂಡಿದ್ದಾರೆ.

“ಈ ಬಾರಿ ಅಧಿಕಾರದ ಪರಿಸ್ಥಿತಿ ಬದಲಾಗಿದೆ. ಉತ್ತಮ ಬೆಳೆ ಬಂದಿದೆ. ಇದುವರೆಗೆ 35 ಬಾರಿ ಟೊಮೆಟೊ ಕಟಾವು ಮಾಡಿದ್ದೇವೆ. ಇನ್ನೂ ಸುಮಾರು 15 ಬಾರಿ ಕಟಾವು ಮಾಡುವ ಸಾಧ್ಯತೆ ಇದೆ. 45 ದಿನಗಳಲ್ಲಿ ಇದ್ದ ಸಾಲವನ್ನೆಲ್ಲ ತೀರಿಸಿ, 2 ಕೋಟಿ ರೂ. ಉಳಿತಾಯ ಲಾಭ ಪಡೆದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಲಾಭದ ಹಣದಲ್ಲಿ ಮತ್ತಷ್ಟು ಭೂಮಿ ಖರೀದಿಸಲು ಯೋಜಿಸುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆ ಕೃಷಿ ಮಾಡುವ ಚಿಂತನೆಯಲ್ಲಿದ್ದಾರೆ. ಕೃಷಿಯನ್ನು ನಂಬುವ ಮತ್ತು ಗೌರವಿಸುವವನು ಎಂದಿಗೂ ಎದೆಗುಂದ ಬಾರದು, ಒಂದೊಮ್ಮೆ ಕೃಷಿ ನಮ್ಮ ಕೈಹಿಡಿಯುತ್ತದೆ ಎಂದು ಅವರು ಹೇಳುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...