ಟೊಮೆಟೊ ದರ ಕುಸಿತ: ಗ್ರಾಹಕರಲ್ಲಿ ಖುಷಿ; ಬೆಳೆಗಾರರಲ್ಲಿ ಆತಂಕ

Date:

ಕಳೆದ ಎರಡು ತಿಂಗಳಿನಿಂದ ಭಾರೀ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿತ ಕಂಡಿದೆ. ಜುಲೈ ತಿಂಗಳಿನಲ್ಲಿ 2,000 ರೂಗೆ. ಮಾರಾಟವಾಗಿದ್ದ 15 ಕೆ.ಜಿಯ ಟೊಮೆಟೊ ಬಾಕ್ಸ್‌, ಈಗ 150 ರಿಂದ 500 ರೂ.ವರೆಗೆ ಮಾರಾಟವಾಗುತ್ತಿದೆ. ಟೊಮೆಟೊ ಬೆಲೆ ಇಳಿಕೆ ಕಂಡಿರುವುದು ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿಸಿದ್ದರೆ, ಹೊಸದಾಗಿ ಟೊಮೆಟೊ ಬಿತ್ತನೆ ಮಾಡಿರುವ ರೈತರು ಕಂಗಾಲಾಗಿದ್ದಾರೆ.

ದೇಶಾದ್ಯಂತ ಟೊಮೆಟೊ ಪೂರೈಕೆ ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿತ್ತು. ಕೋಲಾರ ಎಪಿಎಂಸಿಯಿಂದ ದೇಶದ ನಾನಾ ರಾಜ್ಯಗಳಿಗೆ ಟೊಮೆಟೊ ಪೂರೈಕೆಯಾಗುತ್ತಿತ್ತು. ಪರಿಣಾಮವಾಗಿ ಕೆ.ಜಿ ಟೊಮೆಟೊ ಬೆಲೆ 200 ರೂ. ಗಡಿ ದಾಟಿತ್ತು. ಈ ನಡುವೆ, ನೇಪಾಳದಿಂದಲೂ ಟೊಮೆಟೊ ಆಮದು ಮಾಡಿಕೊಳ್ಳಲಾಗುತ್ತಿತ್ತು. ಅಲ್ಲದೆ, ಹಲವಾರು ರೈತರು ಟೊಮೆಟೊ ಬೆಳೆದಿದ್ದರು. ಇದೆಲ್ಲದರ ಪರಿಣಾಮ ಟೊಮೆಟೊ ಧಾರಣೆ ಹೆಚ್ಚಾಗಿದ್ದು, ಬೆಲೆ ನಿಯಂತ್ರಣಕ್ಕೆ ಬಂದಿದೆ.

ಅಡುಗೆಯಲ್ಲಿ ಟೊಮೆಟೊ ಬಳೆಸುವುದೇ ಸವಾಲೆಂಬಂತೆ ಭಾವಿಸಿದ್ದ ಗ್ರಾಮಕರು ಟೊಮೆಟೊ ಖರೀದಿಗೆ ಮುಂದಾಗಿದ್ದಾರೆ. “ನಾವು ತಿಂಗಳಿಗೆ 12,000 ರೂ. ಸಂಪಾದಿಸುತ್ತೇವೆ. ಆ ಹಣದಲ್ಲಿಯೇ ಎಲ್ಲವನ್ನೂ ನಿಭಾಯಿಸಬೇಕು. ಹೀಗಾಗಿ, ಕೆ.ಜಿ ಟೊಮೆಟೊಗೆ 200 ರೂ. ಭರಿಸಲಾಗದೆ, ಟೊಮೆಟೊ ಬಳಕೆಯನ್ನೇ ನಿಲ್ಲಿಸಿದ್ದೆವು. ಇದೀಗ,30 ರೂ.ಗೆ ಕೆ.ಜಿ ಟೊಮೆಟೊ ದೊರೆಯುತ್ತಿದೆ. ಮತ್ತೆ ಟೊಮೆಟೊ ಬಳಸಲು ಆರಂಭಿಸಿದ್ದೇವೆ” ಎಂದು ಮೈಸೂರಿನ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವ ಶ್ರೀರಂಗಪಟ್ಟಣದ ಇಂದ್ರಮ್ಮ ಅವರು ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರಾವಣ ಮಾಸದಲ್ಲಿ ಮಗಳ ಮದುವೆ ಮಾಡಬೇಕೆಂದು ನಿರ್ಧರಿಸಿದ್ದೆವು. ಆದರೆ, ಕಳೆದ ತಿಂಗಳು ಟೊಮೆಟೊ ಬೆಲೆ ಏರಿಕೆಯಾಗಿದ್ದನ್ನು ಕಂಡು, ಮದುವೆಯ ಅಡುಗೆಗಾಗಿ ನಾವು ಅಂದುಕೊಂಡಿದ್ದ ಅಡುಗೆ ಬಜೆಟ್‌ನಲ್ಲಿ ಹೆಚ್ಚು ಹಣ ಟೊಮೆಟೊಗೆ ಖರ್ಚಾಗಿಬಿಡುತ್ತದೆ ಎಂಬ ಆತಂಕ ಉಂಟಾಗಿತ್ತು. ಇದೀಗ, ಟೊಮೆಟೊ ದರ ಇಳಿದಿರುವುದು ಕೊಂಚ ಸಮಾಧಾನ ತಂದಿದೆ” ಎಂದು ಚನ್ನರಾಯಪಟ್ಟಣದಲ್ಲಿ ಬಡಗಿ ಕೆಲಸ ಮಾಡುವ ನಾಗರಾಜ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಎತ್ತಿನಹೊಳೆ | 100 ದಿನದಲ್ಲಿ 42 ಕಿ.ಮೀ ವರೆಗೆ ನೀರು ಹರಿಯಲಿದೆ: ಡಿಕೆ ಶಿವಕುಮಾರ್

ಆದರೆ, ಕೃಷಿಯಲ್ಲಿ ಎಂದಿಗೂ ನಿರೀಕ್ಷಿತ ಲಾಭ ಕಾಣದಿದ್ದ ರೈತರು, ಟೊಮೆಟೊ ಬೆಲೆ ಏರಿಕೆಯಾಗಿದ್ದರಿಂದ ತಾವು ಟೊಮೆಟೊ ಬೆಳೆಯಲು ಮುಂದಾಗಿದ್ದರು. ಹಲವಾರು ರೈತರು ತಮ್ಮ ಜಮೀನಿನಲ್ಲಿ ಟೊಮೆಟೊ ಸಸಿಗಳನ್ನು ನೆಟ್ಟಿದ್ದರು. ಇದೇ ಸಂದರ್ಭದಲ್ಲಿ ಟೊಮೆಟೊ ಬೆಲೆ ಕುಸಿದಿರುವುದು ಅವರೆಲ್ಲರಲ್ಲಿ ಮತ್ತೆ ನಿರಾಸೆ ಮೂಡಿಸಿದೆ.

“ಕಳೆದ ತಿಂಗಳು ಟೊಮೆಟೊ ಬೆಲೆ ಏರಿಕೆಯಾಗಿದ್ದಾಗ, ಇನ್ನೂ ಒಂದೆರಡು ತಿಂಗಳು ಇದೇ ದರ ಇರುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಅದನ್ನು ನಂಬಿ, ನಾವೂ ಟೊಮೆಟೊ ಬೆಳೆ ಬೆಳೆದಿದ್ದೇವೆ. ಆದರೆ, ಇದೀಗ ಬೆಲೆ ಕುಸಿತ ಕಂಡಿದೆ. ಜಮೀನಿನಲ್ಲಿ ಟೊಮೆಟೊ ಕಾಯಿಗಟ್ಟಿ, ಹಣ್ಣಾಗುವ ಹೊತ್ತಿಗೆ ಮತ್ತಷ್ಟು ಬೆಲೆ ಕುಸಿತಕಂಡರೆ, ಹಾಕಿರುವ ಬಂಡವಾಳವೂ ಕೈಸೇರುವುದು ಕಷ್ಟವಿದೆ. ನಷ್ಟ ಆತಂಕ ಎದುರಾಗಿದೆ” ಎಂದು ರಾಮನಗರ ಜಿಲ್ಲೆಯ ರೈತ ಪ್ರಭಾಕರ್ ಆಂತಕ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...