ಉಡುಪಿ | ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ; ಕೇಂದ್ರದ ನಿಲುವು ಖಂಡಿಸಿ ಪಂಜಿನ ಮೆರವಣಿಗೆ

Date:

  • ಆರೋಪಿಯನ್ನು ಬಂಧಿಸದೆ ಕೇಂದ್ರ ಸರ್ಕಾರದಿಂದ ಪಕ್ಷಪಾತ
  • ಕೇಂದ್ರದ ವರ್ತನೆ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬುವಂತಿದೆ

ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ ಮತ್ತು ಆತನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಐಕ್ಯಾತ ಒಕ್ಕೂಟ ಹಾಗೂ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಉಡುಪಿಯಲ್ಲಿ ಪ್ರತಿಭಟನೆ ನಡೆಸಿವೆ.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರೊ. ಫಣಿರಾಜ್, “ಹೀನಾಯ ದೌರ್ಜನ್ಯ ನಡೆದಾಗ ಗ್ರಾಮ ಗ್ರಾಮದಲ್ಲಿ ಪ್ರತಿಭಟನೆ ನಡೆಯಬೇಕು. ಆ ಕಾರಣಕ್ಕಾಗಿ ಉಡುಪಿ ಇಂದು ಪ್ರತಿಭಟಿಸುತ್ತಿದೆ. ಬಿಜೆಪಿ ಸರ್ಕಾರದ ಪಾಪದ ಕೊಡ ತುಂಬಿರುವುದು ಮಾತ್ರವಲ್ಲ, ಯುಮುನಾ, ಗಂಗೆ ಎಲ್ಲವೂ ಪಾಪದಿಂದ ತುಂಬಿ ಹೋಗಿದೆ. ನದಿ ನೀರನ್ನು ಕಲುಷಿತಗೊಳಿಸಿದ ಹಾಗೆ ಜನರ ಮನಸ್ಸನ್ನು ಕಲುಷಿತಗೊಳಿಸಲಾಗುತ್ತಿದೆ” ಎಂದು ಆರೋಪಿಸಿದರು.

ರೈತರ ಅನ್ನ ಕಸಿಯುವ ಕರಾಳ ಕೃಷಿ ಕಾಯಿದೆ ಜಾರಿಗೆ ತಂದಿದ್ದರು. ರೈತರ ನೆಲ ಕಸಿಯಲು ಕಾನೂನು ತರಲಾಗಿತ್ತು. ಒಂದು ವರ್ಷ ಪ್ರತಿಭಟನೆ ನಡೆಸಲಾಯಿತು. ಅವರ ಮೇಲೆ ಪೋಲಿಸ್ ದೌರ್ಜನ್ಯ ಮಾಡಲಾಯಿತು. ಕೊನೆಗೂ ನ್ಯಾಯ ಗೆದ್ದಿತು. ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾದ ಕೂಡಲೇ ಆರೋಪಿಯನ್ನು ಬಂಧಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಪಕ್ಷಪಾತ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದಕಗಳು ಬಂದಾಗ ಪೋಟೋ ತೆಗೆಸಿಕೊಳ್ಳುವ ಪ್ರಧಾನಿ, ಸರ್ಕಾರಿ ಪ್ರಭಾವಿ ವ್ಯಕ್ತಿಯಿಂದ ಅನ್ಯಾಯವಾದಾಗ ಅವರನ್ನು ಹುದ್ದೆಯಿಂದ ಕೆಳಗಿಳಿಸಬೇಕಿತ್ತು. ಇವರ ವರ್ತನೆಯಿಂದ ಯಾವ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬುವುದು ಸಾಬೀತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ವಿದ್ಯುತ್‌ ಬಿಲ್‌ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ

ಇದ್ರಿಸ್ ಹೂಡೆ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯಗಳು ಮೋದಿ ಸರ್ಕಾರದಲ್ಲಿ ಸಾಮಾನ್ಯವಾಗಿವೆ. ಇವರ ಧೈಯ ಬೇಟಿ ಪಡಾವೋ ಅಲ್ಲ ಬೇಟಿ ಪಟಾವೋ ಆಗಿದೆ. ಹತ್ರಾಸ್ ಅತ್ಯಾಚಾರ ಸಂತ್ರಸ್ಥೆಯ ಶವವನ್ನು ಹೇಳದೆ ಕೇಳದೆ ಸುಡಲಾಗುತ್ತದೆ. ಹಲವು ಪ್ರಕರಣದಲ್ಲಿ ಇವರ ದೌರ್ಜನ್ಯ ಸಾಬೀತಾಗಿದೆ ಎಂದು ಆರೋಪಿಸಿದರು.

ದೇಶದ ಪ್ರತಿಷ್ಠಿತ ಕ್ರೀಡಾ ಪಟುಗಳ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತದೆ. ಪ್ರತಿಭಟಿಸಿದಾಗ ದೌರ್ಜನ್ಯ ಎಸಗುತ್ತಾರೆ. ಉಡುಪಿಯ ಸಂಸದೆ ಮಹಿಳೆ ಆದರೆ ಮಹಿಳಾ ದೌರ್ಜನ್ಯದ ಕುರಿತು ಮಾತನಾಡಲು ಉತ್ಸುಕರಿಲ್ಲ, ಅವರು ಹೆಣದ ಕುರಿತು ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...