ದತ್ತಪೀಠದಲ್ಲಿ ನಡೆಯಲಿರುವ ದತ್ತಜಯಂತಿ ಪ್ರಯುಕ್ತವಾಗಿ ಮುಳ್ಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯುವುದರಿಂದ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ವಸತಿ ಗೃಹ ಉದ್ಘಾಟನೆ; ಸಚಿವ ರಾಮಲಿಂಗಾ ರೆಡ್ಡಿ
ಹಾಗೆಯೇ, ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ.





