ದಕ್ಷ ಅಧಿಕಾರಿಯ ವರ್ಗಾವಣೆ ಸಮ್ಮತವಲ್ಲ, ಸರ್ಕಾರದ ಆದಿವಾಸಿ ವಿರೋಧಿ ನಡೆ ಖಂಡನೀಯ: ಭರತ್‌ ಚಂದ್ರ ದೇವಯ್ಯ

Date:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹೊಸ ಹುರುಪಿನಿಂದ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಕಾರ್ಯದರ್ಶಿ ರಂದೀಪ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಆದಿವಾಸಿಗಳ ಏಳಿಗೆಯನ್ನು ಸಹಿಸದೆ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದಿವಾಸಿ ವಿರೋಧಿ ದೋರಣಾ ನಡೆಯನ್ನು ಖಂಡಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿಗಳ ಒಕ್ಕೂಟದ ಅದ್ಯಕ್ಷ ಕುಡಿಯರ ಭರತ್‌ ಚಂದ್ರ ದೇವಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಐಎಎಸ್ ರಂದಿಪ್‌ರವರ ವರ್ಗಾವಣೆಯನ್ನು ರದ್ದುಪಡಿಸಿ ಬುಡಕಟ್ಟು ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿ ಮುಂದುವರೆಸಬೇಕು” ಎಂದು ಕರ್ನಾಟಕ ರಾಜ್ಯ ಕಾಡು ಕಾಡಂಚಿನ ಅರಣ್ಯಾಧಾರಿತ ಆದಿವಾಸಿಗಳ ಒಕ್ಕೂಟದ ಪರವಾಗಿ ಆಗ್ರಹಿಸಿದರು.

”ಕರ್ನಾಟಕ ಸರ್ಕಾರವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಬೇರ್ಪಡಿಸಿದ ತರುವಾಯ ಪ್ರತ್ಯೇಕವಾದ ಸಚಿವಾಲಯ ಮತ್ತು ನಿರ್ದೇಶನಾಲಯವನ್ನು ಅಸ್ತಿತ್ವಕ್ಕೆ ತಂದಿರುವುದು ಬುಡಕಟ್ಟು ಜನರ ಅಭ್ಯುದಯಕ್ಕೆ ಸಹಕಾರಿಯಾಗಿದೆ. ಇಲಾಖೆಯು ರಾಜ್ಯದ ಬುಡಕಟ್ಟು ಸಮುದಾಯಗಳು ಹಾಗೂ ಕಾಡು, ಕಾಡಂಚಿನ ಆದಿವಾಸಿ ಸಮುದಾಯಗಳ ಶಿಕ್ಷಣ, ಆರೋಗ್ಯ, ಕೌಶಲ್ಯ ವರ್ಧನೆ, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಸಮುದಾಯಗಳ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಹಾಕಿಕೊಂಡಿರುವುದು ಸಂತೋಷದಾಯಕವಾಗಿದ್ದು, ಅಭಿವೃದ್ಧಿಯ ಆಶಾ ಭಾವನೆ ಮೂಡಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ರಂದೀಪ್ ಅವರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ 50 ಸಮುದಾಯಗಳ ಅಭಿವೃದ್ಧಿಗಾಗಿ ಅನೇಕ ವಿನೂತನ ಯೋಜನೆಗಳನ್ನು ರೂಪಿಸಿದ್ದಾರೆ. ಮುಖ್ಯಮಂತ್ರಿಗಳು ಪ್ರಸ್ತುತ 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅವಿರತ ಶ್ರಮ ವಹಿಸುತ್ತಿದ್ದರು. ಅವರು ಅಧಿಕಾರ ವಹಿಸಿಕೊಂಡ ಪ್ರಾರಂಭದಿಂದಲೂ ಪರಿಶಿಷ್ಟ ಪಂಗಡ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಅದರಲ್ಲೂ ಆದಿಮಾ ಬುಡಕಟ್ಟುಗಳು, ಆದಿವಾಸಿ ಸಮುದಾಯಗಳ ಸಮಸ್ಯೆಗಳಾದ ವಂಶವಾಹಿ ಕಾಯಿಲೆ ʼಸಿಕ್ಕಲ್ ಶೆಲ್ ಅನೀಮಿಯಾʼ ರೋಗ ನಿವಾರಿಸುವ ನಿಟ್ಟಿನಲ್ಲಿ ಅನೇಕ ಹೊಸ ಯೋಜನೆಗಳನ್ನು ಹಮ್ಮಿಕೊಂಡು ಸಮುದಾಯದ ಆರೋಗ್ಯ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ಡಿ ದೇವರಾಜ ಅರಸು ಜನ್ಮ ದಿನಾಚರಣೆ

“ಅರಣ್ಯ ಹಕ್ಕು ಮಾನ್ಯತೆ ಕಾಯ್ದೆಯಡಿ ಭೂಮಿ ವಿತರಣೆ, ಅರಣ್ಯ ಸಂಪನ್ಮೂಲಗಳ ಹಕ್ಕು ನೀಡುವುದು, ಇಲಾಖೆಯ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸೇವೆಗಳ ಉನ್ನತೀಕರಣ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಅಧ್ಯಯನ, ಸಂಶೋಧನೆ ಮುಂತಾದ ಕೆಲಸ ಕಾರ್ಯಗಳನ್ನು ಕ್ರಿಯಾಶೀಲಗೊಳಿಸುವಂತಹ ಮಹತ್ತರ ಕಾರ್ಯಗಳನ್ನು ಮಾಡಿದ್ದಾರೆ” ಎಂದರು.

“ಮುಖ್ಯಮಂತ್ರಿಗಳ ಆಶಯದಂತೆ ನಿರ್ಲಕ್ಷಿತರ, ಅನ್ಯಾಯಕ್ಕೆ ಒಳಗಾದ ಕಟ್ಟಕಡೆಯ ಸಮುದಾಯಗಳಿಗೆ ನ್ಯಾಯ ನೀಡುವಲ್ಲಿ ನಿರಂತರ ಪ್ರಯತ್ನ ನಡೆಸುತ್ತಿರುವ ದಕ್ಷ, ಪ್ರಾಮಾಣಿಕ ಅಧಿಕಾರಿ ರಂದೀಪ್ ಅವರನ್ನು ಏಕಾಏಕಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಿ ಹೆಚ್ಚುವರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹೊಣೆಗಾರಿಕೆ ನೀಡಿರುವುದು ನಿಜಕ್ಕೂ ಬೇಸರವನ್ನು ಉಂಟುಮಾಡಿದೆ. ಈ ಕೂಡಲೇ ಸರ್ಕಾರ ರಂದೀಪ್‌ ಅವರ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು” ಎಂದು ಕರ್ನಾಟಕ ರಾಜ್ಯ ಕಾಡು, ಕಾಡಂಚಿನ ಅರಣ್ಯಾಧಾರಿತ ಆದಿವಾಸಿಗಳ ಒಕ್ಕೂಟವು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...