ಕಾನೂನುಬದ್ಧ ಸಲಿಂಗ ವಿವಾಹ, ಅಲ್ಪಸಂಖ್ಯಾತರ ರಕ್ಷಣೆಗೆ ಒತ್ತು; ರಾಷ್ಟ್ರಪತಿಗೆ ಪತ್ರ ಬರೆದ ಅಕ್ಕೈ ಪದ್ಮಶಾಲಿ

Date:

  • ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಕಠಿಣ ಕಾನೂನು ಅಗತ್ಯ
  • ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆ ಚರ್ಚಿಸಿ, ಸಮಿತಿ ರಚಿಸಿ

ಸಲಿಂಗ ವಿವಾಹ ಮತ್ತು ಲೈಂಗಿಕ ಅಲ್ಪಸಂಖ್ಯಾತರು ದಿನನಿತ್ಯ ತಮ್ಮ ಜೀವನದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ವಿಧಾನ ಪರಿಷತ್ತಿನಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಲೈಂಗಿಕ ಅಲ್ಪಸಂಖ್ಯಾತರ ವಿರೋಧಿ ದಿನ (ಎಲ್‌ಜಿಬಿಟಿಕ್ಯೂಐಎ) ಅಂಗವಾಗಿ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಮೇ 18ರಂದು ಅಕ್ಕೈ ಪದ್ಮಶಾಲಿ ಪತ್ರ ಬರೆದಿದ್ದಾರೆ.

ಸದನದಲ್ಲಿ ಅಂತಾರಾಷ್ಟ್ರೀಯ ಲಿಂಗತ್ವ ವಿರುದ್ಧ ದೌರ್ಜನ್ಯ, ಸಲಿಂಗ ವಿವಾಹಕ್ಕೆ ಮ್ಯಾನತೆ, ಲೈಂಗಿಕ ಅಲ್ಪಸಂಖ್ಯಾತರು ದಿನ ನಿತ್ಯ ತಮ್ಮ ಬದುಕಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ರಾಜ್ಯಸಭಾ, ವಿಧಾನಪರಿಷತ್ತಿನಲ್ಲಿ ಸಮುದಾಯಕ್ಕೆ ಸೂಕ್ತ ಸ್ಥಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದನದಲ್ಲಿ ಇಲ್ಲಿಯವರೆಗೂ ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಥವಾ ಕಾನೂನು ಬದ್ಧವಾಗಿ ಪರಿಹರಿಸಲು ಯಾವುದೇ ಸಮಿತಿ ರಚನೆಯಾಗಿಲ್ಲ. ತಮ್ಮದೇ ಸಮಸ್ಯೆಗಳ ಕುರಿತು ಮಾತನಾಡಲು ಅವಕಾಶವೂ ಇಲ್ಲ ಇದೊಂದು ಖಂಡನಾರ್ಹ ವಿಷಯ. ಲೈಂಗಿಕ ಅಲ್ಪಸಂಖ್ಯಾತರಿಗೆ ಸದನದಲ್ಲಾಗುವ ಚರ್ಚೆಗಳಿಗೆ ಅವಕಾಶ ಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಹೊಸಿಲ ಒಳಗೆ-ಹೊರಗೆ | ನೀವು ಯಾವತ್ತಾದರೂ ಬಸ್ಸಿನಲ್ಲಿ ಪಯಣಿಸುವ ಮಹಿಳೆಯ ಸ್ಥಾನದಲ್ಲಿ ನಿಂತು ಯೋಚಿಸಿದ್ದೀರಾ?

ರಾಜ್ಯಗಳಲ್ಲಿಯೂ ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಪೊಲೀಸರು. ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಕೊಡಲಾಗಿದೆ. ಆದರೂ, ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಸಮಾಜದಲ್ಲಿ ಗೌರವ ಸ್ವಾಭಿಮಾನದಿಂದ ಬದುಕುವಂತಾಗಬೇಕು. ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ ಎಂದೂ ಅಕೈ ಪದ್ಮಶಾಲಿ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...