ದೇಶದಲ್ಲಿಯೇ ಮುಂಚೂಣಿ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ ಕೆಎಸ್‌ಆರ್‌ಟಿಸಿಯದ್ದು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Date:

  • ಕೆಎಸ್‌ಆರ್‌ಟಿಸಿಯ 62ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ
  • ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವ

‘ಸಾರ್ವಜನಿಕರಿಗೆ ಸಮರ್ಪಕವಾದ ಸೇವೆಯನ್ನು ಒದಗಿಸುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೇಶದಲ್ಲಿಯೇ ಮುಂಚೂಣಿಯಲ್ಲಿರುವ ಸಾರಿಗೆ ಸಂಸ್ಥೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನಿಗಮದ 62ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

‘ಕೋವಿಡ್ ಸಂದರ್ಭದಲ್ಲಿ ಉಂಟಾದ ಆರ್ಥಿಕ ಸಂಕಷ್ಟದಿಂದ ನೂತನ ವಾಹನಗಳನ್ನು ಖರೀದಿಸಲಾಗದ ಪರಿಸ್ಥಿತಿಯಲ್ಲಿದ್ದಾಗ 8 ರಿಂದ 9 ಲಕ್ಷ ಕಿ.ಮಿ. ಕ್ರಮಿಸಿದ ತನ್ನ ಹಳೆಯ ಕವಚ ದುರಸ್ತಿ ವಾಹನಗಳನ್ನು ಪುನಶ್ಚೇತನಗೊಳಿಸಲಾಗಿದೆ. ಆ ಮೂಲಕ ಇನ್ನೂ ಆ ವಾಹನಗಳನ್ನು 4-5 ಲಕ್ಷ ಕಿ.ಮಿ.ವರೆಗೆ ಕಾರ್ಯಾಚರಣೆಗೊಳಿಸಲು ಯೋಜನೆಯನ್ನು ರೂಪಿಸಿ, ಹಳೆಯ ವಾಹನಗಳನ್ನು ಹೊಸ ವಾಹನಗಳಂತೆ ಪರಿವರ್ತಿಸಿ ಚಾಲನೆಗೆ ಬಳಸಿಕೊಳ್ಳುತ್ತಿರುವುದು ಖುಷಿ ಕೊಟ್ಟಿದೆ’ ಎಂದು ಸಿಬ್ಬಂದಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲಿನ ಲಭ್ಯವಿರುವ ಅನುಕಂಪಕದ ಅವಲಂಬಿತ ಖಾಲಿ ಹುದ್ದೆಗಳನ್ನು ಯಾವುದೇ ವಿಳಂಬವಿಲ್ಲದೇ ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆಯಾದ ‘ಶಕ್ತಿ ಯೋಜನೆ’ಯು ಮಹಿಳೆಯರ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ. ಆದರೆ ಉಚಿತ ಪ್ರಯಾಣ ಕೊಟ್ಟಿರುವುದು ಕೆಲವರಿಗೆ ತಡೆಯಲಿಕ್ಕಾಗುತ್ತಿಲ್ಲ. ಪ್ರತಿದಿನ ನಾಲ್ಕೂ ನಿಗಮದಲ್ಲಿ ಒಂದು ಲಕ್ಷದ ಐವತ್ತಾರು ಸಾವಿರ ಟ್ರಿಪ್ ನೀಡಲಾಗುತ್ತಿದೆ. ಯಾವುದಾದರೊಂದು ಸಣ್ಣ ಘಟನೆ ಆಗಿಬಿಟ್ಟರೆ ಅದನ್ನೇ ದೊಡ್ಡದು ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಹಾಕಲಾಗುತ್ತಿದೆ. ಆದರೆ ಎಲ್ಲ ರಾಜಕೀಯ ಅಪಪ್ರಚಾರ ಮೀರಿ ಶಕ್ತಿ ಯೋಜನೆ ಯಶಸ್ಸು ಕಂಡಿದೆ. ಇದಕ್ಕೆ ಸಿಬ್ಬಂದಿಯ ಪ್ರಯತ್ನ ಕೂಡ ಕಾರಣ’ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸಮಾರಂಭದಲ್ಲಿ ಅಪಘಾತ ಪರಿಹಾರ ನಿಧಿ ಯೋಜನೆಯಡಿ 20 ನೂತನ ಬೊಲೆರೋ ವಾಹನಗಳ ಸೇರ್ಪಡೆ, ‘ಶಕ್ತಿ’ ಯೋಜನೆಯ ಕುರಿತ ವಿಶೇಷ ಆಂತರಿಕ ನಿಯತಕಾಲಿಕ ‘ಸಾರಿಗೆ ಸಂಪದ’ ಬಿಡುಗಡೆ, ಸಾರಿಗೆ ಮಿತ್ರ ಹೆಚ್.ಆರ್.‌ಎಂ.ಎಸ್‌ ಯೋಜನೆ ಹಾಗೂ ಸಾರಿಗೆ ವಿದ್ಯಾ ಚೇತನ ಯೋಜನೆಗೆ ಚಾಲನೆ, ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಜಿ, ಆಡಳಿತ ಮಂಡಳಿ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...