ಮಂಡ್ಯದ ಬೇಬಿ ಬೆಟ್ಟದಲ್ಲಿ ಆರು ತಿಂಗಳೊಳಗೆ ಟ್ರಯಲ್ ಬ್ಲಾಸ್ಟಿಂಗ್ ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಅದರಂತೆ ಟ್ರಯಲ್ ಬ್ಲಾಸ್ಟ್ ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, “ಟ್ರಯಲ್ ಬ್ಲಾಸ್ಟ್ಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ರೈತರೊಂದಿಗೆ ಮಾತನಾಡುತ್ತೇವೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟ್ರಯಲ್ ಬ್ಲಾಸ್ಟ್ ನಡೆಸುತ್ತೇವೆ. ರೈತರು ಹೈಕೋರ್ಟ್ ಆದೇಶವನ್ನು ಮನ್ನಿಸಬೇಕು” ಎಂದು ಹೇಳಿದ್ದಾರೆ.
“ರೈತರು ಕೆಆರ್ಎಸ್ನಿಂದ ನಾಲೆಗೆ ನೀರು ಹರಿಸಲು ಕೇಳುತ್ತಿದ್ದಾರೆ. ಕುಡಿಯುವ ನೀರಿಗೆ ಅಗತ್ಯವಿರುವಷ್ಟು ನೀರನ್ನು ಉಳಿಸಿಕೊಂಡು, ಉಳಿದ ನೀರನ್ನು ರೈತರಿಗೆ ಕೊಡುತ್ತೇವೆ. ಕೆಆರ್ಎಸ್ ನೀರಿನ ಪರಿಸ್ಥಿತಿ ಬಹಳ ಕೆಟ್ಟ ಪರಿಸ್ಥಿತಿಯಲ್ಲಿದೆ. ನೀರಿನ ಕೊರತೆ ಎದುರಾಗುವ ಸಾಧ್ಯತೆಗಳಿವೆ” ಎಂದಿದ್ದಾರೆ.




