ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

Date:

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರ ಅಗಲಿಕೆ ಹಿನ್ನೆಲೆ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಅಗಲಿದ ಅರ್ಥಮಾಂತ್ರಿಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಶ್ರದ್ಧಾಂಜಲಿ ಸಲ್ಲಿಸಿದ ಕಾಂಗ್ರೆಸ್ ಮುಖಂಡರು ಮನಮೋಹನ್ ಸಿಂಗ್ ಅವರ ಆಡಳಿತ ವೈಖರಿ, ರಾಜಕೀಯ ನಿಪುಣತೆಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮ್ ಮಾತನಾಡಿ, ದೇಶಕಂಡ ಅತ್ಯುತ್ತಮ ರಾಜಕಾರಣಿ ಮನಮೋಹನ್ ಸಿಂಗ್ ಅವರು ಶಿಸ್ತುಬದ್ಧ ಆರ್ಥಿಕ ತಜ್ಞರಾಗಿದ್ದರಲ್ಲದೆ ಅರ್ಥವ್ಯಸ್ಥೆಯಲ್ಲಿ ಎಲ್ಲಾ ಪದವಿಗಳನ್ನೂ ಅನುಭವಿಸಿದ ವಿಶ್ವದ ಏಕೈಕ ವ್ಯಕ್ತಿಯಾಗಿದ್ದರು. ಇಂತಹ ಧೀಮಂತ ನಾಯಕನ್ನು ಕಳೆದುಕೊಂಡ ದೇಶ ಇಂದು ಬಡವಾಗಿದೆ ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗದ್ದ ಅವರು ಕೊನೆಯವರೆಗೂ ಕೂಡ ಗಾಂಧಿ ಮನೆತನದ ನಿಷ್ಠೆ ಉಳಿಸಿಕೊಂಡಿದ್ದ ಅಪರೂಪದ ನಾಯಕ. ಇವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಬೇಸರಗೊಂಡರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾತನಾಡಿ, ಪ್ರಧಾನಿ ಆಗಿದ್ದಾಗ ಒಟ್ಟು 116 ಸುದ್ದಿಗೋಷ್ಟಿಗಳನ್ನು ಎದುರಿಸಿದ್ದು, ವಿದೇಶಿ ಪ್ರವಾಸದಿಂದ ವಾಪಸಾಗುವಾಗಲೂ ವಿಮಾನದಲ್ಲಿಯೇ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುವ ವಾಡಿಕೆಯನ್ನು ಅಳವಡಿಸಿಕೊಂಡಿದ್ದರು. ಈಗಿನ ಪ್ರಧಾನಿ ಒಂದೇ ಒಂದು ಸುದ್ದಿಗೋಷ್ಟಿಯನ್ನು ಕೂಡ ಎದರಿಸುವ ಧೈರ್ಯ ತೋರಿಲ್ಲ ಎಂದು ಹಾಲಿ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದರು. ಮುಖ್ಯವಾಗಿ ತಾವು 2ನೇ ಅವಧಿಗೆ ಪ್ರಧಾನಿ ಆಗಿದ್ದಾಗ 70 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡಿದ ಧೀಮಂತ ನಾಯಕ ಎಂದು ಬಣ್ಣಿಸಿದರು.

1991ರಲ್ಲಿ ಭಾರತವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ವಿತ್ತಸಚಿವರಾಗಿ ಅಧಿಕಾರವಹಿಸಿಕೊಂಡ ಮನಮೋಹನ್ ಸಿಂಗ್ ಅವರು ದೇಶವನ್ನು ಸಂಕಷ್ಟದಿಂದ ಪಾರು ಮಾಡಿದ ಬಹುದೊಡ್ಡ ಆರ್ಥಶಾಸ್ತ್ರಜ್ಞರಾಗಿದ್ದರು. ತಮ್ಮ 10 ವರ್ಷದ ಆಡಳಿತದಲ್ಲಿ ದೇಶದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದ ಇತಿಹಾಸ ಹೊಂದಿರುವ ಇವರು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ಮಾಧ್ಯಮದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದ ಸರಳಜೀವಿಯಾಗಿದ್ದರು ಎಂದು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಸಿರಿಧಾನ್ಯ ಬೆಳೆಗಳಿಂದ ಆರ್ಥಿಕ ಸಿರಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಶ್ರದ್ಧಾಂಜಲಿ ಸಭೆಯಲ್ಲಿ ಕಿಸಾನ್ ಘಟಕದ ರಾಮಕೃಷ್ಣಪ್ಪ, ಲಾಯರ್ ಮುನೇಗೌಡ, ಸುಧಾ ವೆಂಕಟೇಶ್, ದಿಬ್ಬೂರು ಶ್ರೀನಿವಾಸ್, ಪೆದ್ದಣ್ಣ, ಪಟ್ರೇನಹಳ್ಳಿ ಕೃಷ್ಣ, ಗೋಪಿ, ಕೋಮಡೇನಹಳ್ಳಿ ಚಂದ್ರಪ್ಪ, ಜನಾರ್ಧನ್ ಯಲುವಹಳ್ಳಿ, ಕಣಿತಹಳ್ಳಿ ವೆಂಕಟೇಶ್, ಅಣ್ಣಮ್ಮ, ಲಾಯರ್ ಚಂದ್ರಶೇಖರ್, ನಾರಾಯಣಸ್ವಾಮಿ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...