ಮೈಸೂರು | ದಮ್ಮ ಪಯಣ ಕಾರ್ಯಕ್ರಮದಲ್ಲಿ ದಸಂಸ ಹಿರಿಯ ಹೋರಾಟಗಾರರಿಗೆ ಗೌರವ ಸಮರ್ಪಣೆ

Date:

ಮೈಸೂರಿನ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ದಮ್ಮ ಪಯಣ ಕಾರ್ಯಕ್ರಮದಲ್ಲಿ ದಸಂಸ ಹಿರಿಯ ಹೋರಾಟಗಾರರಿಗೆ ಗೌರವ ಸಮರ್ಪಣೆಯನ್ನು ಮಾಡಲಾಯಿತು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ ” ದಸಂಸವು ಈ ನಾಡಿನ ಅಸ್ಪೃಶ್ಯರ ಶೋಷಣೆಗೊಳಗಾದ ತಬ್ಬಲಿ ಸಮುದಾಯಗಳಿಗೆ ಕಳೆದ 40 ವರ್ಷಗಳಿಂದ ಅವಿರತವಾಗಿ ಹೋರಾಟ ಮಾಡುತ್ತಾ ದೌರ್ಜನ್ಯಕ್ಕೆ ಒಳಗಾದ ದಲಿತರಿಗೆ ರಕ್ಷಣೆ ಮತ್ತು ನ್ಯಾಯ ಕೊಡಿಸುತ್ತಾ ಬರುತ್ತಿದೆ. ಇಂತಹ ಮಾತೃ ಸಂಘಟನೆಯಲ್ಲಿ ಮೈಸೂರು ಭಾಗದಲ್ಲಿ ಹಲವಾರು ವರ್ಷಗಳಿಂದ ನೊಂದ ಜನರ ಬಗ್ಗೆ ಹೋರಾಟ ಮಾಡಿ ಸಾಮಾಜಿಕ ನ್ಯಾಯವನ್ನು ಕಲ್ಪಿಸಿಕೊಡುವಲ್ಲಿ ನಿರಂತರ ಹೋರಾಟ ಮಾಡಿದ ದಸಂಸ ಹಿರಿಯ ಹೋರಾಟಗಾರರಿಗೆ ದಮ್ಮ ಪಯಣ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡುತ್ತಿರುವುದು ನ್ಯಾಯಸಮ್ಮತವಾಗಿದೆ.

ದಸಂಸವು ಎಷ್ಟೇ ವಿಭಜನೆಯಾದರೂ ಅದರ ತತ್ವ ಸಿದ್ಧಾಂತಗಳು ಇಂದಿಗೂ ನಮ್ಮ ದಲಿತ ಸಮಾಜಕ್ಕೆ ಅನಿವಾರ್ಯವಾಗಿದೆ. ಜಾತಿ ಮತ್ತು ಅಸ್ಪೃಶ್ಯತೆಯ ಸೋಂಕಿನಲ್ಲಿ ಇಂದಿಗೂ ನಲುಗುತ್ತಿರುವ ದಲಿತ ಸಮುದಾಯಗಳಿಗೆ ಆತ್ಮಸ್ಥೈರ್ಯ ತುಂಬಿ. ಅವರ ನೋವಿಗೆ ದಿನನಿತ್ಯ ಸ್ಪಂದಿಸುವ ಕೆಲಸ ಆಗುತ್ತಿರುವುದು ದಸಂಸದ ಬಗ್ಗೆ ಇಂದಿಗೂ ದಲಿತರಲ್ಲಿ ಗೌರವ ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕಾರಣಿಗಳ ಕುತಂತ್ರ ಮತ್ತು ಸಮಯ ಸಾಧಕತನದ ಮಾತಿಗೆ ದಸಂಸವು ಒಳಗಾಗಿ ಅನೇಕ ಹೊಡೆತಗಳು ಬಿದ್ದರೂ ಅದು ಮತ್ತೆ ಮತ್ತೆ ಪುಟಿದೇಳುತ್ತಿರುವುದು ಕೆಲವು ರಾಜಕಾರಣಿಗಳಲ್ಲಿ ನಡುಕ ಉಂಟಾಗುತ್ತಿದೆ. ಇಂತಹ ತಾಯಿ ಹೃದಯ ಇರುವ ದಸಂಸದ ಸಂಘಟನೆಯಲ್ಲಿ ತಮ್ಮ ಬದುಕು, ಜೀವನವನ್ನೇ ಮುಡುಪಾಗಿಟ್ಟು ನೊಂದ ಜನರ ಏಳಿಗೆಗೆ ಹಗಲಿರುಳು ಶ್ರಮಿಸುತ್ತಿರುವ ಈ ಹೋರಾಟಗಾರರಿಗೆ ಜಿಲ್ಲೆಯ ದಲಿತ ಸಮಾಜದ ಪರವಾಗಿ ನಾನು ಅಭಿನಂದಿಸುತ್ತೇನೆ ಎಂದರು.

ಕಾರ್ಯಕ್ರಮ ಆಯೋಜಕ ಮಾಲ್ಗುಡಿ ಮಹದೇವಸ್ವಾಮಿ ಮಾತನಾಡಿ ” ದಸಂಸವು ಒಂದು ಸಂಘವಾಗದೆ ನೊಂದ ಜನರ ಕೈ ಬೀಸಿ ಕರೆಯುವ ದೈತ್ಯ ಶಕ್ತಿಯಾಗಿದೆ. ಕಣ್ಣೀರು ಒರೆಸುವ ಮಾತೃ ಹೃದಯವನ್ನು ಹೊಂದಿದೆ. ಯಾವುದೋ ಒಂದು ಹಳ್ಳಿಯಲ್ಲಿ ದಲಿತರ ಮೇಲೆ ಜಾತಿ ಕಾರಣಕ್ಕಾಗಿ ನಡೆಯುವ ಗಲಭೆ ಮತ್ತು ದೌರ್ಜನ್ಯಗಳನ್ನು, ಜಾತಿ ವಾದಿಗಳನ್ನು ವಿರೋಧ ಹಾಕಿಕೊಂಡು ಒಬ್ಬ ದಸಂಸ ನಾಯಕ ಮೆಟ್ಟಿ ನಿಂತು ಆ ನೊಂದ ಕುಟುಂಬಕ್ಕೆ ರಕ್ಷಣೆ ಕೊಡಿಸುವುದು ಸಾಮಾನ್ಯದ ವಿಚಾರವಲ್ಲ. ಇತ್ತೀಚೆಗಂತೂ ಕೆಲವು ದಸಂಸ ಕ್ರಿಯಾಶೀಲ ನಾಯಕರು ಅನಾಥ ಹೆಣಗಳನ್ನು ಶವ ಸಂಸ್ಕಾರ ಮಾಡಿ ಆ ಶವಕ್ಕೆ ಸದ್ಗತಿಗಳನ್ನು ಮಾಡುತ್ತಿರುವುದು ನನಗೆ ಅಚ್ಚರಿ ತರುತ್ತಿದೆ.

ಕುಟುಂಬದಿಂದಲೇ ತಿರಸ್ಕಾರಕ್ಕೆ ಒಳಗಾಗಿ ಅನಾರೋಗ್ಯ ಪೀಡಿತರಾದ ನಿರ್ಗತಿಕರನ್ನು ಆಸ್ಪತ್ರೆಗೆ ಸೇರಿಸಿ ಅವರಿಗೆ ಚಿಕಿತ್ಸೆ ಕೊಡಿಸಿ ನಿಮ್ಮ ಜೊತೆ ನಾವಿದ್ದೇವೆ ಎಂಬ ದಸಂಸ ನಾಯಕರ ಆ ಮಾತು ಸಮಾಜದ ಸ್ವಾಸ್ಥ್ಯವನ್ನೇ ಕಲಕುತ್ತಿದೆ. ದಸಂಸ ಕಾರ್ಯಕರ್ತರು ಸಮಾಜದ ಬದಲಾವಣೆ ಮಾಡುವ ಒಬ್ಬೊಬ್ಬ ಸೈನಿಕರಿದ್ದಂತೆ. ಇವರ ಬೆವರು ಮತ್ತು ಶ್ರಮ ಮತ್ತು ನಿರಂತರ ಹೋರಾಟ ನಾವೆಲ್ಲರೂ ನೆಮ್ಮದಿಯಿಂದ ಬದುಕಲು ಕಾರಣವಾಗುತ್ತಿದೆ. ದಸಂಸದ ಬಗ್ಗೆ ದಲಿತರಲ್ಲಿ ಇಂದಿಗೂ ಅಭಿಮಾನ, ಒಂದು ರೀತಿಯ ಭರವಸೆ ಇದೆ ” ಎಂದರು.

ಈ ಸುದ್ದಿ ಓದಿದ್ದೀರಾ?ಚಾಮರಾಜನಗರ | ಕೋವಿಡ್ -19 ತಡೆಗೆ ಸುರಕ್ಷತಾ ಹಾಗೂ ಮುಂಜಾಗೃತಾ ಕ್ರಮಗಳನ್ನು ಪಾಲಿಸಿ : ಶಿಲ್ಪಾ ನಾಗ್

ಕಾರ್ಯಕ್ರಮದಲ್ಲಿ ದಸಂಸದ ಹಿರಿಯ ಹೋರಾಟಗಾರರಾದ ಬೆಟ್ಟಯ್ಯ ಕೋಟೆ, ನಿಂಗರಾಜ್‌ ಮಲ್ಲಾಡಿ, ಆಲ್ಗೂಡು ಶಿವಕುಮಾರ, ದೇವಗಳ್ಳಿ ಸೋಮಶೇಖರ್‌, ಮಣಿಯಯ್ಯ, ಮಾಜಿ ಮೇಯರ್ ಪುರುಷೋತ್ತಮ್, ಬೌದ್ಧ ದಮ್ಮದ ಬಂತೇಜಿಗಳು, ಜಿಲ್ಲಾ ಎಸ್ಸಿ ಎಸ್ಟಿ ಜಾಗೃತಿ ಸಮಿತಿ ಸದಸ್ಯ ಅಹಿಂದ ಜವರಪ್ಪ, ಸೋಮಯ್ಯ ಮಲಿಯೂರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...