ಹಾಸನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಎಸ್ ಎಂ ಕೃಷ್ಣರಿಗೆ ಶ್ರದ್ಧಾಂಜಲಿ

Date:

ಇತ್ತಿಚಿಗೆ ಮಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

ಇದೆ ವೇಳೆ ಕಾಂಗ್ರೆಸ್ ಮುಖಂಡ ಇ ಎಚ್ ಲಕ್ಷ್ಮಣ್ ಮಾತನಾಡಿ, “ನಮ್ಮ ರಾಜ್ಯದಲ್ಲಿ ಸರಳ ಸಜ್ಜನಿಕೆಯ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಮತ್ತು ಎಸ್ ಎಂ ಕೃಷ್ಣ ಇಬ್ಬರೂ ಕೂಡ ಒಂದು ರೀತಿಯ ಹೊಂದಾಣಿಕೆ ಇದ್ದವರು. ಯಾವತ್ತೂ, ಯಾರಿಗೂ ನೋವಾಗದ ರೀತಿ ರಾಜಕಾರಣ ಮಾಡಿಕೊಂಡವರು. ದೇವೇಗೌಡರು ಮತ್ತು ಈ ಇಬ್ಬರೂ ಕೂಡ ಒಂದೇ ಬಾರಿ ಸ್ವತಂತ್ರವಾಗಿ ಗೆದ್ದು ವಿಧಾನಸೌದಕ್ಕೆ ಹೋದವರು. ಅಲ್ಲಿಂದ ಅವರ ಪಯಾಣ ತಿರುಗಿ ನೋಡಲೇ ಇಲ್ಲ. ಅವರು ಕೊಟ್ಟ ಕೊಡುಗೆ ಅನೇಕ ಮೈಲಿಗಲ್ಲುಗಳನ್ನು ಬಿಟ್ಟು ಹೋಗಿದೆ. ಕೆಂಗಲ್ ಹನುಮಂತಯ್ಯ ಕೊಟ್ಟಂಥ ಕೊಡುಗೆ ಎಸ್ ಎಂ ಕೃಷ್ಣ ಅವರು” ಎಂದರು.

“ರಾಜಕಾರಣದಲ್ಲಿ ಅನೇಕ ಕಷ್ಟ ಅನುಭವಿಸಿದವರು. ಇವರ ಅಧಿಕಾರದಲ್ಲಿ ವೀರಪ್ಪನ್ ರಾಜ್‌ಕುಮಾರ್‌ ಅವರನ್ನು ಅಪಹರಣ ಮಾಡಿದ್ದಂತಹ ಘಟನೆಯ ನೋವುಗಳಿದ್ದರೂ ಎಸ್ ಎಂ ಕೃಷ್ಣ ಅವರು ನಗುನಗುತ್ತಲೇ ಕೆಲಸ ಮಾಡಿದವರು” ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಕೆ ಜವರೇಗೌಡ ಮಾತನಾಡಿ, “ಎಸ್ ಎಂ ಕೃಷ್ಣ ಅವರಿಗೆ ಗೌರವ ಕೊಡುವುದು ನಮ್ಮ ಕರ್ತವ್ಯ. ಭಾರತ ಕಂಡಂತಹ ಅಪುರೂಪದ ರಾಜಕಾರಣಿ, ಅನೇಕ ಪಾಶ್ಚಾತ್ಯ ದೇಶಗಳಿಗೆ ಭೇಟಿ ಕೊಟ್ಟಾಗ ಬೆಂಗಳೂರು ಸಿಲಿಕಾನ್ ಸಿಟಿಯ ಕೊಡುಗೆ ಕೊಟ್ಟ ಕೃಷ್ಣ ಅವರ ಹೆಸರು ಬರುತ್ತದೆ. ಕ್ರಿಯಾಶೀಲ ರಾಜಕಾರಣಿ ಎಂದರೂ ತಪ್ಪಾಗಲಾರದು. ಮಂಡ್ಯದ ಉಪಚುನಾವಣೆಯಲ್ಲಿ ಎಸ್ ಎಂ ಕೃಷ್ಣ ಸಂಸದರಾಗುತ್ತಾರೆ. ದೇವರಾಜ ಅರಸು ಸಿಎಂ ಆದಾಗ ಕೃಷ್ಣ ಅವರು ಕೈಗಾರಿಕಾ ಮಂತ್ರಿಯಾಗಿದ್ದರು. ಇವರು ನಿಜವಾಗಿಯೂ ರಾಜಕಾರಣಿಗೆಳಿಗೆ ಆದರ್ಶ ವ್ಯಕ್ತಿ” ಎಂದು ಎಸ್ ಎಂ ಕೃಷ್ಣ ಅವರನ್ನು ನೆನೆದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆರೆಗಳಿಂದ ಹೊಲಗಳಿಗೆ ನೀರು ಹರಿಸಲು ಆಗ್ರಹ

ಶ್ರದ್ಧಾಂಜಲಿ ಸಭೆಯಲ್ಲಿ ಮಾಜಿ ಶಾಸಕ ಬಿ ವಿ ಕರೀಗೌಡ, ಹೆಚ್ ಪಿ ಮೋಹನ್, ಶಿವಪ್ಪ, ಗೋಪಾಲ್, ವಿಶ್ವನಾಥ್, ಅಶೋಕ್, ಬಾಲಶಂಕರ್, ದೇವಪ್ಪ ಮಲ್ಲಿಗೆವಾಳ್, ರಘು ದಾಸರಕೊಪ್ಪಲು, ಕಡಾಕಡಿ ಫೀರ್ ಸಾಹೇಬ್, ಮುನಿಸ್ವಾಮಿ, ಯೂತ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...