ಮೂಡಬಿದರೆ | ತುಳುನಾಡಿನ ಕೋಮು ಸಾಮರಸ್ಯ ಪರಂಪರೆ ಪುಸ್ತಕ ಬಿಡುಗಡೆ

Date:

ಆಳ್ವಾಸ್ ಬಿ.ಎಡ್ ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ರಿಯಾಝ್ ಕಾರ್ಕಳ ರವರು ಬರೆದ ತುಳುನಾಡಿನ ಕೋಮು ಸಾಮರಸ್ಯ ಪರಂಪರೆ ಎಂಬ ಪುಸ್ತಕವನ್ನು ಹಿರಿಯ ಜಾನಪದ ವಿದ್ವಾಂಸ ಡಾ.ಗಣನಾಥ ಎಕ್ಕಾರ್ ರವರು ಇತ್ತೀಚೆಗೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಪುಸ್ತಕ ಬಿಡುಗಡೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಈ ಹಿಂದೆ ಸಂಸ್ಕಾರವಂತ ಬುದ್ಧಿವಂತರ ಜಿಲ್ಲೆ ಎಂದೇ ಪ್ರಸಿದ್ಧವಾಗಿತ್ತು. ಆದರೆ ಇಂದು ನಮ್ಮ ಈ ಕರಾವಳಿಯು ಧರ್ಮ ಸಂಘರ್ಷದ ನೆಲವಾಗಿ ಮಾರ್ಪಟ್ಟು ಕುಖ್ಯಾತಿಗೆ ಒಳಗಾಗಿದೆ. ತುಳುನಾಡಿನ ಸಾಮರಸ್ಯ ಪ್ರಣೀತವಾದ ಗತವೈಭವವನ್ನು ಪುನರ್ ಸ್ಥಾಪಿಸುವುದು ಕರಾವಳಿಯ ಪಾಲಿಗೆ ಅತಿ ಅಗತ್ಯದ ಕಾರ್ಯವಾಗಿದ್ದು ಈ ನಿಟ್ಟಿನಲ್ಲಿ ಪ್ರಸ್ತುತ ಕೃತಿಯು ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

ಪುಸ್ತಕ ಪರಿಚಯ ಮಾಡಿದ ಇತಿಹಾಸಕಾರ ಡಾ. ಸುರೇಶ್ ರೈಯವರು, ಈ ಗ್ರಂಥವು ಸಮಾಜ ಶಾಸ್ತ್ರೀಯ ಸಂಶೋಧನಾ ವಿಧಾನದ ಎಲ್ಲಾ ಮಾನದಂಡಗಳನ್ನು ಪೂರ್ಣಗೊಳಿಸಿರುವುದರಿಂದ ಇದೊಂದು ಮಹತ್ವದ ಸಂಶೋಧನಾ ಗ್ರಂಥ ಎಂದು ಅಭಿಪ್ರಾಯಪಟ್ಟರು. ಆಶಯ ನುಡಿಗಳನ್ನಾಡಿದ ಸಾಹಿತಿ ಮುಷ್ತಾಕ್ ಹೆನ್ನಬೈಲುರವರು, ಸಂಘರ್ಷ ಎಂಬುವುದು ಸಕಲ ಜೀವಚರಾಚರಗಳಲ್ಲೂ ಕಂಡುಬರುವ ಸಾಮಾನ್ಯ ಗುಣವಾಗಿದ್ದು, ಅದನ್ನು ಮೀರಿ ಸಾಮರಸ್ಯವನ್ನು ಪುನರ್ ಸ್ಥಾಪಿಸಲು ಪ್ರಯತ್ನಿಸುವುದು ನಾಗರಿಕ ಸಮಾಜದ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಈ ಕೃತಿಯು ಮಹತ್ವವನ್ನು ಪಡೆದಿರುತ್ತದೆ ಎಂದು ಅಭಿಪ್ರಾಯಪಟ್ಟರು. ಲೇಖಕ ಮುಹಮ್ಮದ್ ರಿಯಾಝ್ ರವರು ಸಭೆಯನ್ನುದ್ದೇಶಿಸಿ ಮಾತನಾಡಿ, ಈ ಕೃತಿಯು ವರ್ತಮಾನದ ತುಳುವರಿಗೆ ಗತ ತುಳುವರ ಸೌಹಾರ್ದ ಪ್ರಣೀತ ಜೀವನ ವಿಧಾನವನ್ನು ನೆನಪಿಸುವ ಮೂಲಕ ಸಾಮರಸ್ಯ ಪ್ರಣೀತ ತುಳುನಾಡನ್ನು ಕಟ್ಟುವ ಸಲುವಾಗಿ ಸಲ್ಲಿಸಿದ ಅಳಿಲುಸೇವೆಯಾಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಂಕರಮೂರ್ತಿ ಎಚ್.ಕೆ ಯವರು ಸರ್ವರನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಅಪೂರ್ವ ರವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಲೇಖಕರ ಮಾತಾಪಿತರು, ಆಳ್ವಾಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತಿಯ ಬಗ್ಗೆ ಒಂದಿಷ್ಟು..

ಮುಹಮ್ಮದ್ ರಿಯಾಝ್ ಕಾರ್ಕಳ ರವರು ಬರೆದ ತುಳುನಾಡಿನ ಕೋಮು ಸಾಮರಸ್ಯ ಪರಂಪರೆ ಗ್ರಂಥವನ್ನು ಮೈಸೂರಿನ ಜ್ಯೋತಿ ಪ್ರಕಾಶನದವರು ಪ್ರಕಟಿಸಿದ್ದು, ಜನವರಿ 24 ರಂದು ಬಿಡುಗಡೆ ಕಂಡಿತು. ಇತಿಹಾಸಕಾರ ಡಾ.ಸುರೇಶ್ ರೈಯವರು ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಇದಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ. ಅಲ್ಲದೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ರವರು ಈ ಗ್ರಂಥಕ್ಕೆ ಸಂದೇಶವನ್ನು ಬರೆದಿದ್ದಾರೆ. ತುಳುನಾಡಿನ ಕೋಮು ಸಾಮರಸ್ಯದ ಸಮಗ್ರ ಆಯಾಮದ ಅಂಶಗಳ ಬಗ್ಗೆ ಈ ಕೃತಿಯು ಬೆಳಕು ಚೆಲ್ಲುತ್ತದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...