ತುಮಕೂರು | ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಪರಮೇಶ್ವರ್

Date:

 ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಗರದ ಅಮಾನಿಕೆರೆಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಗ್ಲಾಸ್ ಬ್ರಿಡ್ಜ್(ಗಾಜಿನ ಸೇತುವೆ) ನಿರ್ಮಾಣಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. 

 ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 200 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಈ ಅನುದಾನದಲ್ಲಿ 25 ಕೋಟಿ ರೂ.ಗಳನ್ನು ಬಳಸಿಕೊಂಡು ಗಾಜಿನ ಸೇತುವೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. 

1000957887

ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ 30 ವಾರ್ಡುಗಳ ಅಭಿವೃದ್ಧಿಗಾಗಿ 200 ಕೋಟಿ ರೂ.ಗಳನ್ನು ವ್ಯಯಿಸಲಾಗುವುದು. ಈ ಅನುದಾನವನ್ನು ಬಳಸಿಕೊಂಡು ಬೆಂಗಳೂರಿನ ಲಾಲ್‌ಬಾಗ್ ಮಾದರಿಯಲ್ಲಿ ನಗರದ ಅಕ್ಕ-ತಂಗಿ ಕೆರೆ ಅಭಿವೃದ್ಧಿ, 137 ಕೋಟಿ ರೂ. ವೆಚ್ಚದಲ್ಲಿ 202 ರಸ್ತೆ ನಿರ್ಮಾಣ, ಅಮಾನಿಕೆರೆಯನ್ನು ಸ್ವಚ್ಛಗೊಳಿಸಿ ಮಕ್ಕಳಿಗಾಗಿ ಸಾಹಸ ಕ್ರೀಡೆಗೆ ಅವಕಾಶ ನೀಡುವುದರೊಂದಿಗೆ ಐಲ್ಯಾಂಡ್, ಬರ್ಡ್ ಪಾರ್ಕ್ ನಿರ್ಮಾಣ, 18 ಉದ್ಯಾನವನಗಳ ಅಭಿವೃದ್ಧಿ, ತಲಾ 6 ಕೋಟಿ ರೂ. ವೆಚ್ಚದಲ್ಲಿ ನಗರದ ಖಾಸಗಿ ಬಸ್ ನಿಲ್ದಾಣದ ಆಧುನೀಕರಣ ಹಾಗೂ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಕಟ್ಟಡವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

  ತುಮಕೂರು  ನಗರದ ಒಳಚರಂಡಿ ವ್ಯವಸ್ಥೆಗಾಗಿ ಪ್ರತ್ಯೇಕವಾಗಿ 50ಕೋಟಿ ರೂ.ಗಳನ್ನು ಮೀಸಲಿಡಲಾಗಿದೆಯಲ್ಲದೆ ಕರ್ನಾಟಕ ಗಣಿಬಾಧಿತ ಪರಿಸರದ ಪುನಃಶ್ಚೇತನ ನಿಧಿಯಡಿ 131 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಕಟ್ಟಡವನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಗುವುದು ಎಂದು ತಿಳಿಸಿದರು.

 ನಗರದಲ್ಲಿ ವಧಾಗಾರ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ನೈರ್ಮಲ್ಯತೆ(ಹೈಜೆನಿಕ್)ಯಿಂದ ಕೂಡಿದ ಮಾಂಸ ಮಾರಾಟ ಮಾರುಕಟ್ಟೆಯನ್ನು ನಿರ್ಮಿಸಲು ಪಾಲಿಕೆ ಮುಂದಾಗಿದೆ ಎಂದು ಹೇಳಿದರು.

 ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನ ಆಸು-ಪಾಸಿನಲ್ಲಿ ನಿರ್ಮಿಸುವಂತೆ ಐಟಿಬಿಟಿ ಸಚಿವರಿಗೆ ಮನವಿ ಮಾಡಲಾಗಿದ್ದು, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಜಿಲ್ಲೆಯ ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡತೆ ರಾಷ್ಟ್ರೀಯ ಹೆದ್ದಾರಿ 48ರ ಸಮೀಪ 3,000 ಎಕರೆ ಹಾಗೂ ಶಿರಾ ತಾಲ್ಲೂಕಿನ ಸೀಬಿ ದೇವಸ್ಥಾನದ ಸಮೀಪ 5000 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಜಿಲ್ಲೆಗೆ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣವನ್ನು ಮಂಜೂರಾತಿ ನೀಡಬೇಕೆಂದು ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು ಪಕ್ಷಾತೀತವಾಗಿ ಸರ್ಕಾರ ಮೇಲೆ ಒತ್ತಾಯ ತರಲಾಗುವುದು ಎಂದು ಹೇಳಿದರು.

1000957863

 ಜಿಲ್ಲೆಯಲ್ಲಿ ಹೆಲಿಕಾಪ್ಟರ್ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿರುವ ಗುರುತಿಗಾಗಿ ನಗರದ ಹೃದಯಭಾಗದ ಟೌನ್‌ಹಾಲ್ ಪಕ್ಕದಲ್ಲಿ ಹೆಲಿಕಾಪ್ಟರ್ ಮಾದರಿಯನ್ನು ಇರಿಸಲಾಗುವುದು. ಪಾಲಿಕೆ ಆವರಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸರ್ಕಾರದಿಂದ ಅನುಮತಿ ದೊರೆತ ನಂತರ ಪುತ್ಥಳಿಯನ್ನು ಸ್ಥಾಪಿಸಲಾಗುವುದು. ಪುತ್ಥಳಿಯನ್ನು ಸ್ಥಾಪನೆಗೆ ಶ್ರೀ ಸಿದ್ಧಾರ್ಥ ಸಂಸ್ಥೆಯಿಂದ 36 ಲಕ್ಷ ರೂ.ಗಳನ್ನು ಕೊಡುಗೆಯಾಗಿ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿಯಿದ್ದು, ಹಂತ-ಹಂತವಾಗಿ ಖಾಲಿ ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದರಲ್ಲದೆ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರಿAಗ್ ಕಾಲೇಜು ಮಂಜೂರು ಮಾಡುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಮಂಜೂರಾತಿಯ ಹಸಿರು ನಿಶಾನೆ ದೊರೆಯಲಿದೆ ಎಂದರು.

ಟೌನ್‌ಹಾಲ್ ಸರ್ಕಲ್ ಸಮೀಪದ ರಸ್ತೆ ಬಳಿ ಇರುವ ದರ್ಗಾ ಮತ್ತು ಮಂದಿರ ತೆರವುಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

1000957881

 ಮೈಕ್ರೋ ಫೈನಾನ್ಸ್ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಮೈಕ್ರೋಫೈನಾನ್ಸ್ಗಳಿಗೆ ಸಂಬಂಧಿಸಿದಂತೆ ಈಗಿರುವ ಕಾನೂನನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಮೈಕ್ರೋ ಫೈನಾನ್ಸ್ಗಳು ಆರ್‌ಬಿಐ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕಾನೂನು ಜಾರಿಗೆ ತರಲಾಗುವುದು. ಈಗಾಗಲೇ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ನಿಂದ ಸಾಲ ಪಡೆದು ತೀರಿಸಲಾಗದೆ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅನಧಿಕೃತ ಮೈಕ್ರೋಫೈನಾನ್ಸ್ ಹಾವಳಿಯನ್ನು ಮಟ್ಟ ಹಾಕಲು ಜಿಲ್ಲಾಧಿಕಾರಿಗಳಿಗೆ

 ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಹೇಳಿದರು.

 ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಹೆಚ್ಚಿದ್ದರೂ ಕೇಂದ್ರವು ರಾಜ್ಯದ ಪಾಲನ್ನು ನೀಡದೆ ತಾರತಮ್ಯ ಮಾಡುತ್ತಿದೆ. ಈ ಬಾರಿ ಕೇಂದ್ರದ ಆಯ-ವ್ಯಯದಲ್ಲಿ ರಾಜ್ಯದ ಪಾಲಿನ ತೆರಿಗೆ ಹಣ ನೀಡುವ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ. ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...