ತುಮಕೂರು | 2027ರ ವೇಳೆಗೆ 25 ಸಾವಿರ ನವೋದ್ಯಮಗಳ ಆರಂಭ : ಗೃಹ ಸಚಿವ ಡಾ. ಜಿ ಪರಮೇಶ್ವರ

Date:

 ಕೃಷಿ, ಆರೋಗ್ಯ, ಬಾಹ್ಯಾಕಾಶ ಕ್ಷೇತ್ರಗಳಲ್ಲಿ  ಇಡೀ ವಿಶ್ವದಾದ್ಯಂತ ಅತ್ಯಂತ ಉನ್ನತ ಮಟ್ಟದ ತಂತ್ರಜ್ಞಾನ ಆವಿಷ್ಕಾರವಾಗುತ್ತಿದೆ. ಪ್ರತಿನಿತ್ಯ ತಂತ್ರಜ್ಙಾನ ಗಣನೀಯವಾಗಿ ಬದಲಾಗುತ್ತಿವೆ. ಅದರಂತೆ ಕರ್ನಾಟಕದಲ್ಲೂ ಸಾಕಷ್ಟು ನವೋದ್ಯಮಗಳು ಆರಂಭವಾಗುತ್ತಿದ್ದು, 2027ರ ವೇಳೆಗೆ  25  ಸಾವಿರ ನವೋದ್ಯಮಗಳು ಆರಂಭವಾಬೇಕು ಎಂಬ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ ಎಂದು ಸಾಹೇ ವಿವಿಯ ಕುಲಾಧಿಪತಿ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದರು.

ತುಮಕೂರು ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರದಿಂದ(ಜೂನ್-2 & 3) ಆಯೋಜಿಸಲಾಗಿದ್ದ ಎರಡು ದಿನದ ವಿಜ್ಙಾನ ಮತ್ತು ತಂತ್ರಜ್ಞಾನ ಮಾದರಿ ಪ್ರದರ್ಶನ ‘ಟೆಕ್ನೋಡಿಯ–2025’ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯ ಅತಿಹೆಚ್ಚು ಸ್ಟಾರ್ಟ್ ಆಪ್ ಕಂಪೆನಿ ಹೊಂದಿದೆ. ವಿದ್ಯಾರ್ಥಿಗಳ ಸಂಶೋಧನಾತ್ಮಕ ಅಧ್ಯಯನದಿಂದ ಇಲ್ಲಿ ಡೀಪ್ ಟೆಕ್ನಾಲಜಿ ತಂತ್ರಜ್ಞಾನದ ಬೆಳವಣಿಗೆಯಾಗುತ್ತಿದೆ. ಹೊಸ ಹೊಸ ಸಂಶೋಧನೆಗಳು ಸಮಾಜಕ್ಕೆ ತುಂಬಾ ಉಪಯೋಗಕಾರಿಯಾಗಿದೆ ಎಂದರು.

ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ರಾಪ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಪ್ರಕಟ ಮಾಡಿದರೆ, ಮುಂದಿನ ಸಂಶೋಧನೆಗಳಿಗೆ ಅನುಕೂಲವಾಗಲಿದೆ. ಡೀಪ್ ಟೆಕ್ ಟೆಕ್ನಾಲಜಿ ಇಂದು ನಮಗೆ ಅಗತ್ಯವಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರ ಸಾವಿರ ಕೋಟಿಯಷ್ಟು ಅನುದಾನವನ್ನು ನೀಡಿ ಸಹಕಾರವನ್ನು ನೀಡುತ್ತಿದೆ ಎಂದು ಡಾ. ಜಿ ಪರಮೇಶ್ವರ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಡೀ ಜಗತ್ತು ಶಿಕ್ಷಣ, ತಂತ್ರಜ್ಞಾನ ಸಹಾನುಭೂತಿಯ ಮೇಲೆ ನಿಂತಿದೆ. ಇದಕ್ಕೆ ಅನುಗುಣವಾಗಿ ಸಾಹೇ ವಿಶ್ವವಿದ್ಯಾನಿಲಯದ ಆಶೋತ್ತರಗಳಿವೆ. ಯಾರೆಲ್ಲ ಶಿಕ್ಷಣದಿಂದ ದೂರ ಉಳಿದಿದ್ದಾರೋ ಅಂತವರಿಗೆ ಶಿಕ್ಷಣವನ್ನು ನೀಡುವುದು ಸಾಹೇ ವಿಶ್ವವಿದ್ಯಾಲಯದ ಉದ್ದೇಶವಾಗಿದೆ ಎಂದು ಅವರು ನುಡಿದರು.

1001527497

ಬೆಂಗಳೂರಿನ ಸಿ-ಕ್ಯಾಂಪ್ ಸಿಇಒ ಮತ್ತು ನಿರ್ದೇಶಕರಾದ ಡಾ ತಸ್ಲಿಮ್ ಆರಿಫ್ ಸೈಯದ್ ಮುಖ್ಯ ಅತಿಥಿಗಳಾಗಿ ಮಾತನಾಡಿ ಇಡೀ ಜಗತ್ತು ಶಿಕ್ಷಣ, ತಂತ್ರಜ್ಞಾನ ಸಹಾನುಭೂತಿಯ ಮೇಲೆ ಇದಕ್ಕೆ ಅನುಗುಣವಾಗಿ ಸಾಹೇ ವಿಶ್ವವಿದ್ಯಾನಿಲಯದ ಯಾರೆಲ್ಲ ಶಿಕ್ಷಣದಿಂದ ದೂರ ಉಳಿದಿದ್ದರೂ ಅಂತವರಿಗೆ ಶಿಕ್ಷಣವನ್ನು ನೀಡುವುದು ಸಾಧ್ಯ ವಿಶ್ವವಿದ್ಯಾಲಯದ ಉದ್ದೇಶ.ವಿದ್ಯಾರ್ಥಿಗಳಿಗೆ ನೀಡುವ ಪ್ರಾಥಮಿಕ ಶಿಕ್ಷಣ ಸಾಧನೆ ಮಾಡಲು ಗುರಿ ಹೊಂದಿರಬೇಕು. ಇಂದು ವಿಜ್ಞಾನ ಮುಗಿಲೆತ್ತರಕ್ಕೆ ಬೆಳೆದಿದೆ ಸಿಬಿಎಸ್ಇ ಸ್ಪರ್ಧಾತ್ಮಕವಾಗಿ ಬೆಳೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿ ಭಾರತ ಬೆಳವಣಿಗೆ ಕಂಡಿದೆ. ಕೃಷಿ ಮಾರುಕಟ್ಟೆಗಳು ಸೇರಿದಂತೆ ಉಳಿದಂತಹ ಆವಿಷ್ಕಾರಗಳು ಸಂಶೋಧನೆಗಳು ಬೇಕಿದೆ. ಅದರ ಕುರಿತು ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದರು.

ಏನು ಸ್ಪೇಸ್ ಇಂಜಿನಿಯರಿಂಗ್ ಇಂದು ಮುಖ್ಯವಾಗಿದೆ. ದೇಶ ದೇಶಗಳು ಹೂಡಿಕೆ ಮಾಡಿ ಸಂಶೋಧನೆಗಳು ನಡೆಸುತ್ತಿವೆ. ಇದರ ನಿಟ್ಟಿನಲ್ಲಿ ಭಾರತವು ಕೂಡ ಒಂದು.ವಿಜ್ಞಾನ ಸಂಶೋಧನೆಗಳು ಸಮಾಜದ ಹಲವು ಸಮಸ್ಯೆಗಳು ಬಗೆಹರಿಸಬೇಕಿದೆ. ಭಾರತ ಸರ್ಕಾರದಿಂದ ಎಲ್ಲಾ ಸಹಕಾರವನ್ನು ನೀಡುತ್ತಿದೆ. ಇದಕ್ಕೆ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಹಭಾಗಿತ್ವವು ಮುಖ್ಯವಾಗಿದೆ. ಹಾಗೂ ಆವಿಷ್ಕಾರಗಳು ಈ ಶೈಕ್ಷಣಿಕ ಸಂಶೋಧನೆಗಳು ತುಂಬಾ ಮುಖ್ಯವಾಗಿದೆ ಎಂದು ಡಾ.ತಸ್ಲೀಮರಿಫ್ ಸೈಯದ್ ತಿಳಿಸಿದರು.

ಸಾಹೇ ಉಪಕುಲಪತಿ ಡಾ. ಕೆ.ಬಿ ಲಿಂಗೇಗೌಡ  ಮಾತನಾಡಿ,ಟೆಕ್ನೋಡಿಯಾ ಇಂದು ವಿಶೇಷ ಕಾರ್ಯಕ್ರಮ ಇಂದು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಅವಕಾಶ ಇದೆ ಹೊಸ ಹೊಸ ಆಯಾಮಗಳು ಇಲ್ಲಿ ಆವಿಷ್ಕಾರ ಮಾಡಬಹುದಾಗಿತ್ತು ವಿವಿಧ ಸರ್ಕಾರದ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಎಸ್ ರವಿಪ್ರಕಾಶ್ ಮಾತನಾಡಿ, ಎಲ್ಲ ಸಂಶೋಧನಾ ಯೋಜನೆಗಳು ಗಮನಹರವಾಗಿದೆ ವಿದ್ಯಾರ್ಥಿಗಳ ಪ್ರಯತ್ನ ಸಾರ್ಥಕವಾಗಿದೆ. ಈಗಿರುವ ಹೊಸ ವಿದ್ಯಾಮಾನಗಳು ಆವಿಷ್ಕಾರಗಳು ಶಕ್ತಿ ನೀಡಲಿದ್ದು ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ಸಂಶೋಧನದ ಅಧ್ಯಯನ ನಡೆಸಬೇಕೆಂದು ತಿಳಿಸಿದರು.

ಸಾಹೇ ರಿಜಿಸ್ಟ್ರಾರ್ ಡಾ. ಅಶೋಕ್ ಮೆಹ್ತಾ, ಸಾಹೇ ವಿವಿಯ ಪರೀಕ್ಷಾಂಗ ನಿಯಂತ್ರಕರು ಡಾ.ಜಿ.ಗುರುಶಂಕರ್, ಟೆಕ್ನೋಡಿಯಾ ಸಂಯೋಜಕರಾದ ಸ್ಟೆಪ್ ನಿರ್ದೇಶಕರಾದ ಡಾ.ಮನು ಎಸ್ ಮತ್ತು ಸಹಾಯಕ ನಿರ್ದೇಶಕರಾದ ಗುರುನಂದನ್ ಪಿ.ಹೆಚ್, ಡೀನ್ ಎಲ್ಲಾ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...