ತುಮಕೂರು | ಮಕ್ಕಳ ಕಳ್ಳಸಾಗಾಣೆ ಪ್ರಕರಣದ 7 ಮಂದಿ ಬಂಧನ; ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ಎಸ್‌ಪಿ ಶ್ಲಾಘನೆ

Date:

ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣವನ್ನು ಪೊಲೀಸ್ ವಿಶೇಷ ತನಿಖಾ ತಂಡ ಭೇದಿಸಿದ್ದು, ಐದು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಕಳ್ಳಸಾಗಾಣೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ತಿಳಿಸಿದರು.

ತುಮಕೂರು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು.

“ಒಂಬತ್ತು ಮಕ್ಕಳ ಪೈಕಿ ಒಂದು ಮಗುವನ್ನು ಪೋಷಕರ ಸುಪರ್ದಿಗೆ ವಹಿಸಲಾಗಿದೆ. ಮತ್ತೊಂದು ಮಗು ಮೃತಪಟ್ಟಿದೆ. ಉಳಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ದತ್ತು ಸ್ವೀಕಾರ ಕೇಂದ್ರದಲ್ಲಿ ಇರಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮಗು ಕಳವಾಗಿರುವ ಬಗ್ಗೆ ಜೂನ್‌ 19ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಭೇದಿಸಲು ಅಪರ ಪೊಲೀಸ್ ಅಧೀಕ್ಷಕರುಗಳಾದ ವಿ ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ ಶಿರಾ ಉಪ ವಿಭಾಗದ ಡಿವೈಎಸ್‌ಪಿ ಬಿ ಕೆ ಶೇಖರ್, ಗುಬ್ಬಿ ವೃತ್ತದ ಸಿಪಿಐ ಗೋಪಿನಾಥ್ ವಿ ಹಾಗೂ ಗುಬ್ಬಿ ಠಾಣೆಯ ಪಿಎಸ್‌ಐ ಸುನೀಲ್ ಕುಮಾರ್ ಜಿ ಕೆ ಹಾಗೂ ಸಿಬ್ಬಂದಿಗಳಾದ ನವೀನ್ ಕುಮಾರ್, ವಿಜಯ ಕುಮಾರ್, ಮಧುಸೂಧನ್ ಹಾಗೂ ಎಸ್‌ಪಿ ಕಚೇರಿಯ ಸಿಬ್ಬಂದಿ ನರಸಿಂಹರಾಜು, ದುಶ್ಯಂತ್ ಅವರನ್ನು ಒಳಗೊಂಡ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು” ಎಂದರು.

“ತನಿಖಾ ತಂಡ ಪ್ರಕರಣವನ್ನು ಭೇದಿಸಲು ಹೋದಾಗ ಗರ್ಭ ಧರಿಸಿದ ಅವಿವಾಹಿತ ಮಹಿಳೆಯರು, ಅಕ್ರಮ ಸಂಬಂಧದಿಂದ ಗರ್ಭ ಧರಿಸಿದವರನ್ನು ಪತ್ತೆ ಮಾಡಿ ಅವರಿಂದ ಮಕ್ಕಳನ್ನು ಪಡೆದು ಮಕ್ಕಳಿಲ್ಲದ ದಂಪತಿಗಳಿಂದ ಹೆಚ್ಚಿನ ಹಣ ಪಡೆದು ಮಾರಾಟ ಮಾಡುತ್ತಿರುವುದು ಬೆಳೆಕಿಗೆ ಬಂದಿದೆ. ಈ ಕೃತ್ಯಕ್ಕೆ ಹುಳಿಯಾರಿನ ಗೂಬೆ ಹಳ್ಳಿ ಪಿಎಚ್‌ಸಿಯ ಫಾರ್ಮಾಸಿಸ್ಟ್ ಮೆಹೆಬೂಬ್ ಷರೀಫ್ ಎಂಬವವ ಸಹಕರಿಸಿರುತ್ತಾನೆ. ಈತನ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ” ಎಂದು ಅವರು ಹೇಳಿದರು.

“ತುಮಕೂರು ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುವ ಮಹೇಶ ಯು ಡಿ(39), ಜಾತ್ರೆಗಳಲ್ಲಿ ಟ್ಯಾಟೂ ಹಾಕುವ ಗುಬ್ಬಿ ತಾಲೂಕಿನ ಬಿಕ್ಕೇ ಗುಡ್ಡ ಗ್ರಾಮದ ಕೆ ಎನ್ ರಾಮಕೃಷ್ಣಪ್ಪ (53), ಡ್ರೈವರ್ ಕೆಲಸ ಮಾಡುವ ತುಮಕೂರಿನ ಭಾರತೀ ನಗರದ ಹನುಂಮತ ರಾಜು(45), ಮಧುಗಿರಿ ದೊಡ್ಡೇರಿಯ ಪಿಎಚ್‌ಸಿಯಲ್ಲಿ ಸ್ಟಾಫ್ ನರ್ಸ್ ಆಗಿರುವ ಪೂರ್ಣಿಮಾ ಎನ್(39), ಶಿರಾ ಟೌನ್‌ನ ಸ್ಟಾಫ್ ನರ್ಸ್ ಸೌಜನ್ಯ(48), ಹುಳಿಯಾರಿನ ಗೂಬೆಹಳ್ಳಿಯ ಪಿಎಚ್‌ಸಿಯ ಫಾರ್ಮಾಸಿಸ್ಟ್ ಮೆಹೆಬೂಬ್ ಷರೀಫ್(52) ಹಾಗೂ ಮಂಡ್ಯದ ಬೆಳ್ಳೂರಿನ ಆಟೋ ಡ್ರೈವರ್ ಮುಬಾಕರ್ ಪಾಷ(44) ಬಂಧಿತ ಆರೋಪಿಗಳು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗಳ ಬೇಡಿಕೆ ಈಡೇಸುವಂತೆ ಕಾಟನ್ ಇಂಡಸ್ಟ್ರೀಸ್‌ ಅಸೋಸಿಯೇಷನ್‌ ಆಗ್ರಹ

“ಮಕ್ಕಳನ್ನು ಅಪಹರಿಸಲು ಆರೋಪಿಗಳು ಬಳಸಿದ್ದ ಮಾರುತಿ-800 ಕಾರು, 50 ಸಾವಿರ ನಗದು, ನಾಲ್ಕು ಮೊಬೈಲ್‌ಗಳನ್ನು ವಶಕ್ಕೆ ಪಡೆದಿರುತ್ತಾರೆ. ಆರೋಪಿತರು ಮಾರಾಟ ಮಾಡಿದ ಮಕ್ಕಳ ಜನನದ ಬಗ್ಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಜನ್ಮ ದೃಢೀಕರಣ ಪತ್ರವನ್ನು ನೀಡಿರುವುದು ತನಿಖೆಯಿಂದ ಗೊತ್ತಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ” ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಎಎಸ್‌ಪಿ ವಿ ಮರಿಯಪ್ಪ, ತುಮಕೂರು ಹಾಗೂ ಶಿರಾ ಡಿವೈಎಸ್‌ಪಿ ಹಾಗೂ ತನಿಖಾ ತಂಡದ ಪೊಲೀಸರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...