ತುಮಕೂರು | ಎ-ಖಾತೆ, ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ : ಸಚಿವ ರಹೀಮ್ ಖಾನ್

Date:

ತುಮಕೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮನೆ, ನಿವೇಶನಗಳಿಗೆ ದಾಖಲಾತಿ ಮಾಡಿಕೊಡುವ ಸಲುವಾಗಿ ಬಿ ಖಾತೆಯನ್ನು ಜಾರಿಗೆ ತರಲಾಗಿದ್ದು, ಈಗಾಗಲೇ 3 ತಿಂಗಳ ಅವಧಿ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಶೇ.50ರಷ್ಟು ಮಾತ್ರ ಬಿ ಖಾತೆಗಳಾಗಿರುವ ಹಿನ್ನೆಲೆಯಲ್ಲಿ ಉಳಿದವರಿಗೂ ಅನುಕೂಲ ಕಲ್ಪಿಸುವ ಸಲುವಾಗಿ ಬಿ ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ 3 ತಿಂಗಳ ಕಾಲ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದರು.

ಕಳೆದ 30-40 ವರ್ಷಗಳಿಂದ ಯಾವುದೇ ದಾಖಲಾತಿಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಬಡ ಜನರಿಗೆ ಅನುಕೂಲ ಕಲ್ಪಿಸಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಾಸೆ ಮೇರೆಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಈ ಸಂಬಂಧ ಮಸೂದೆ ಮಂಡಿಸಿ ಬಿ ಖಾತೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10,000 ಎ ಖಾತೆ ಮತ್ತು 5800 ಬಿ ಖಾತೆ ಸೇರಿದಂತೆ 15800 ಎ ಮತ್ತು ಬಿ-ಖಾತೆಗಳಿವೆ ಎಂದು ಮಾಹಿತಿ ನೀಡುತ್ತಾ, ಪ್ರಸ್ತುತ 3 ತಿಂಗಳ ಅವಧಿಯಲ್ಲಿ ಶೇ.50ರಷ್ಟು ಮಾತ್ರ ಬಿ ಖಾತೆಯಾಗಿದೆ. ಉಳಿದ ಶೇ.50ರಷ್ಟು ಬಿ ಖಾತೆ ಆಗಬೇಕಾಗಿದೆ. ಹಾಗಾಗಿ ಉಳಿದವರಿಗೂ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ ಎಂದರು.

ನಗರೋತ್ಥಾನ ಯೋಜನೆಯಡಿ 102 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಈ ಪೈಕಿ 40 ಕೋಟಿ ರೂ. ಮಾತ್ರ ಖರ್ಚಾಗಿದೆ. ಉಳಿದ ಹಣವನ್ನು ಆದಷ್ಟು ಶೀಘ್ರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸುವಂತೆ ಪಟ್ಟಣ ಪಂಚಾಯತಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಸ್ವಚ್ಛತೆ ಕಾಪಾಡುವಂತೆಯೂ ಹಾಗೂ ಸಾರ್ವಜನಿಕರಿಗೆ ಶುಚಿ, ರುಚಿಯಾದ ಆಹಾರ ನೀಡುವಂತೆಯೂ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್‌ಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆಯೂ ಸೂಚಿಸಿರುವುದಾಗಿ ಅವರು ಹೇಳಿದರು.

ಇಂದಿರಾ ಕ್ಯಾಂಟೀನ್‌ಗಳನ್ನು ಬಡವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಯಾವುದೇ ಕಾರಣಕ್ಕೂ ಈ ಕ್ಯಾಂಟೀನ್‌ಗಳಲ್ಲಿ ಜನರಿಗೆ ತೊಂದರೆಯಾಗದಂತೆ ತಿಂಡಿ, ಊಟದ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಸಿ ಟಿವಿಗಳು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಇಂದಿರಾ ಕ್ಯಾಂಟೀನ್ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...