ತುಮಕೂರು | ಪುರಾಣಗಳ ಕುರುಡು ನಿರಾಕರಣೆ ಸಲ್ಲದು: ಪ್ರೊ. ಬರಗೂರು ರಾಮಚಂದ್ರಪ್ಪ

Date:

ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು ಕಾವ್ಯದಲ್ಲಿ ಧ್ವನಿ ಮುಖ್ಯವಾಗಿರುತ್ತದೆ. ಅಲ್ಲಿ ರೂಪಕಗಳಿರುತ್ತವೆ, ಸಂಕೇತಗಳಿರುತ್ತವೆ. ಆದರೆ, ಶಾಸ್ತ್ರ ಕೃತಿಗಳಲ್ಲಿ ರೂಪಕ, ಧ್ವನಿ, ಸಂಕೇತಗಳಿಗೆ ಯಾವುದೇ ಅವಕಾಶಗಳಿರುವುದಿಲ್ಲ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ತುಮಕೂರು ಜಿಲ್ಲಾ ಲೇಖಕಿಯರ ಸಂಘ ಹಾಗೂ ಚಿಂತನ ಚಿತ್ತಾರ ಪ್ರಕಾಶನ, ಮೈಸೂರು ಸಹಯೋಗದಲ್ಲಿ ತುಮಕೂರು ವಿಶ್ವವಿಶ್ವವಿದ್ಯಾಲಯದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ  ಆಯೋಜಿಸಿದ್ದ ತುಮಕೂರು ವಿವಿಯ ಸಹಾಯಕ ಪ್ರಾಧ್ಯಾಪಕಿ, ಕತೆಗಾರ್ತಿ ಡಾ. ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆʼ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿ, ಜ್ಯೋತಿ ಅವರು ತಮ್ಮ ಕತೆಗಳಲ್ಲಿ ಮಹಾಭಾರತದ ಪ್ರಸಂಗಗಳನ್ನು ಮರುಸೃಷ್ಟಿ ಮಾಡಿ ಯಶಸ್ವಿಯಾಗಿ ಹೊಸ ಪ್ರಯೋಗ ಮಾಡಿದ್ದಾರೆ ಎಂದರು.

ಶಾಸ್ತ್ರಗಳನ್ನು ವಿಮರ್ಶೆ ಮಾಡುವುದಕ್ಕೂ ಕಾವ್ಯಗಳನ್ನು ವಿಮರ್ಶೆ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಈ ಅರ್ಥದಲ್ಲಿ ಪುರಾಣ ಕಾವ್ಯ ಹಾಗೂ ಪುರಾಣ ಶಾಸ್ತ್ರಗಳನ್ನು ಪ್ರತ್ಯೇಕವಾಗಿ ನೋಡುವ ಗೆರೆ ಮಾಯವಾಗುತ್ತಿದೆ ಅಥವಾ ಹಿನ್ನಡೆಯನ್ನು ಅನುಭವಿಸುತ್ತಿವೆಯಾ ಎಂಬ ಆತಂಕವನ್ನು ಎರಡೂ ವಲಯದವರು ಉಂಟು ಮಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮಾಯಣ ಮಹಾಭಾರತದಂತಹ ಭಾರತದ ಮಹಾಕಾವ್ಯಗಳನ್ನು ಕುರುಡು ನಿರಾಕರಣೆ ಮಾಡಬಾರದು, ಪುರಾಣ ಕಾವ್ಯಗಳು ಯಾಕೆ ಇನ್ನೂ ಜೀವಂತವಾಗಿವೆ ಎಂಬ ಪ್ರಶ್ನೆಯನ್ನು ಹಾಕಿಕೊಳ್ಳಬೇಕು. ಪುರಾಣ ಪಾತ್ರಗಳನ್ನು ದುರುಯೋಗಪಡಿಸಿಕೊಳ್ಳುವುದು ಬೇರೆ. ಪುರಾಣ ಪಾತ್ರಗಳನ್ನು ದುರುಪಯೋಗ ಪಡಿಸಿಕೊಳ್ಳುವುದಕ್ಕಾಗಿಯೇ ಅನೇಕ ಶಕ್ತಿಗಳು ನಮ್ಮ ನಡುವೆ ಇದ್ದೇ ಇರುತ್ತವೆ. ಆದರೆ, ಅದರಾಚೆಗೆ ಪುರಾಣ ಕಾವ್ಯ ಯಾಕೆ ಹುಟ್ಟಿತು, ಅದರ ಪಾತ್ರಗಳು ಹೇಗೆ ರೂಪುಗೊಂಡವು? ವಚನಕಾರರ ಸಂದರ್ಭದಲ್ಲಿ ಅಲ್ಲಮ, ಬಸವಣ್ಣ ಮುಂತಾದವರು ವೇದ, ಪುರಾಣ, ತರ್ಕಗಳನ್ನು ಕುರಿತು ಆಡಿದ ಮಾತು ಅದು ಪುರಾಣ ಕಾವ್ಯಗಳನ್ನು ಕುರಿತು ಆಡಿದ ಮಾತು ಅಲ್ಲ. ಅದು ಶಾಸ್ತ್ರಗಳನ್ನು ಕುರಿತು ಆಡಿದ ಮಾತು. ಹಾಗಾಗಿ ಪುರಾಣ ಕಾವ್ಯಗಳನ್ನು ಅವಲೋಕನ ಮಾಡಲು ಬೇರೆ ರೀತಿಯ ಧ್ವನಿ ಇಟ್ಟುಕೊಳ್ಳಬೇಕಾಗುತ್ತದೆ. ಈ ಕಾರಣದಿಂದ ಅವು ಮತ್ತೆ ಮತ್ತೆ ಹುಟ್ಟುತ್ತವೆ ಎಂದರು.

ಒಂದು ಪಾತ್ರವನ್ನು ಇಟ್ಟುಕೊಂಡು ಕಾವ್ಯ, ಕಥೆ, ಕಾದಂಬರಿ ಅಳೆಯುವುದು ವಿಮರ್ಶೆಯಾಗುವುದಿಲ್ಲ.  ಅದರಲ್ಲಿ ಅನೇಕ ಪಾತ್ರಗಳು ಬರುತ್ತವೆ. ಎಲ್ಲ ಪಾತ್ರಗಳೂ ಸಂಯೋಜನೆಗೊಂಡು ಅಂತಿಮವಾಗಿ ಕಾವ್ಯ ಏನು ಹೇಳುತ್ತದೆ, ಹಾಗೆಯೇ ಮಹಾಭಾರತದ ಎಲ್ಲಾ ಪಾತ್ರಗಳು ಸಂಯೋಜನೆಗೊಂಡು ಅಂತಿಮವಾಗಿ ಮಹಾಭಾರತ ಏನು ಹೇಳುತ್ತದೆ, ಅದರ ಧ್ವನಿ ಏನು? ಅದರ ಆಶಯ ಏನು? ಎಂಬುದನ್ನು ಗುರುತಿಸಬೇಕೆ ಹೊರತು ಒಂದು ಸನ್ನಿವೇಶವನ್ನು, ಒಂದು ಪಾತ್ರವನ್ನು ಕೇಂದ್ರವಾಗಿಟ್ಟುಕೊಂಡು ಅದರ ಮುಖಾಂತರವೇ ಎಲ್ಲವನ್ನು ವಿಮರ್ಶೆ ಮಾಡುವುದು ಸಾಹಿತ್ಯ ವಿಮರ್ಶೆಯ ನಿಜವಾದ ಗುಣಲಕ್ಷಣ ಅಲ್ಲ, ಅದು ಸಾಹಿತ್ಯ ವಿಮರ್ಶೆ ಎಂದು ಅನ್ನಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ ಪ್ರಸನ್ನಕುಮಾರ್ ಕೆ, ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶೇಟ್ ಎಂ. ಪ್ರಕಾಶ್, ಪ್ರಜಾಪ್ರಗತಿ ಸಂಪಾದಕ ಎಸ್. ನಾಗಣ್ಣ, ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ಲೇಖಕ ಜಿ.ವಿ. ಆನಂದಮೂರ್ತಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...