ತುಮಕೂರು | ಸರ್ಕಾರಿ ಆಸ್ಪತ್ರೆಯಲ್ಲಿ ʼಡಿ ಗ್ರೂಪ್‌ʼ ನೌಕರನೇ ವೈದ್ಯ!

Date:

ಆರೋಗ್ಯದ ಏರುಪೇರಿನಿಂದಾಗಿ ಆಸ್ಪತ್ರೆಗೆ ದೌಡಾಯಿಸಿದರೆ, ವೈದ್ಯರ ಬದಲಾಗಿ ಡಿ ಗ್ರೂಪ್‌ ನೌಕರ ಚಿಕಿತ್ಸೆ ನೀಡುತ್ತಿದ್ದಾರೆಂಬ ಆರೋಪ ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ.

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೂ, ಜಿಲ್ಲಾ ಆರೋಗ್ಯ ಅಧಿಕಾರಿ ಈ ಬಗ್ಗೆ ಯಾವುದೇ ರೀತಿಯ ಗಮನಹರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.

“ಕೀಲು ಮೂಳೆಗೆ ಸಂಬಂಧಿಸಿದ ರೋಗಿಗಳಿಗೆ ಡಿ ಗ್ರೂಪ್ ನೌಕರ ಮದಕರಿ ನಾಯಕ ಎಂಬಾತ ಚಿಕಿತ್ಸೆ ನೀಡುತ್ತಿದ್ದಾನೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ತಾನೇ ಮುಂದಾಗಿ ಚಿಕಿತ್ಸೆ ನೀಡುತ್ತಿರುವುದರಿಂದ ಚಿಕಿತ್ಸೆಗೆಂದು ಬಂದವರಿಗೆ ಗಾಬರಿಯಾಗುತ್ತಿದ್ದು, ಇದನ್ನು ಯಾರಿಗೆ ಪ್ರಶ್ನೆ ಮಾಡುವುದು ಎಂಬುದೇ ತಿಳಿಯುತ್ತಿಲ್ಲ” ಎಂದು ನಾಗರಿಕರು ಅವಲತ್ತುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಚಿಕಿತ್ಸೆ ನೀಡಲು ವೈದ್ಯರನ್ನು ಕರೆಯಿರಿ, ಅವರು ಎಲ್ಲಿ ಹೋದರು? ಎಂದು ರೋಗಿಗಳು ಪ್ರತಿರೋಧ ಒಡ್ಡಿದರೆ, ʼಈಗ ನಾನೇ‌ ಡಾಕ್ಟರ್, ಟ್ರಿಟ್ಮೆಂಟ್ ತೆಗೆದುಕೊಳ್ಳುವುದಾದರೆ ತೆಗೆದುಕೊಳ್ಳಿ, ಇಲ್ಲಾ ಅಂದ್ರೆ ಹೋಗಿʼ ಎಂದು ತೀವ್ರ ಕಟುವಾಗಿ ವರ್ತಿಸುತ್ತಿದ್ದಾನೆ” ಎಂದು ರೋಗಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್ಥೋಪೆಡಿಕ್ ವೈದ್ಯರ ದೀರ್ಘ ರಜೆ

ಆರ್ಥೋಪೆಡಿಕ್ ವೈದ್ಯರು ದೀರ್ಘ ರಜೆಯಲ್ಲಿ ತೆರಳಿದ್ದಾರೆ. ಆದರೆ, ಇಲ್ಲಿ ಬದಲಿ ವೈದ್ಯರನ್ನು ನಿಯೋಜನೆ ಮಾಡಿಲ್ಲ. ವೈದ್ಯರ ಕೊರತೆಯಿಂದಾಗಿ ಡಿ ಗ್ರೂಪ್ ನೌಕರ ತಾನೇ ಚಿಕಿತ್ಸೆ ನೀಡುತ್ತಿದ್ದಾನೆ. ಪಾವಗಡ ಆಸ್ಪತ್ರೆಯ ಈ ಅವ್ಯವಸ್ಥೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಡಿ ಗ್ರೂಪ್‌ ನೌಕರನಿಂದ ಎಕ್ಸ್‌ ರೇ ವೀಕ್ಷಣೆ
ಡಿ ಗ್ರೂಪ್‌ ನೌಕರನಿಂದ ಎಕ್ಸ್‌ ರೇ ವೀಕ್ಷಣೆ

ಡಿ ಗ್ರೂಪ್‌ ನೌಕರ ಆಸ್ಪತ್ರೆಗೆ ಬರುವ ರೋಗಿಗಳಿಗೆ ಎಕ್ಸ್‌-ರೇ ತೆಗೆದು, ಅದರಲ್ಲಿ ತನಗೆ ಕಂಡಿದ್ದನ್ನು ತೋರಿಸಿ ವಿವರಣೆ ನೀಡುವ ಈತ, ರೋಗಿಗಳಿಗೆ ಪೆಟ್ಟಾದ ಕಾಲು, ಇಲ್ಲವೇ ಕೈಗಳಿಗೆ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಕೂಡ ಹಾಕುತ್ತಾನೆಂಬ ಆರೋಪ ಕೇಳಿಬಂದಿದೆ.

ಕ್ರಮ ಕೈಗೊಳ್ಳದ ಡಿಎಚ್‌ಒ

ಜಿಲ್ಲೆಯ ಯಾವ ಸರ್ಕಾರಿ ಆಸ್ಪತ್ರೆಯಲ್ಲಿ ಎಷ್ಟು ವೈದ್ಯರಿದ್ದಾರೆ? ಅವರು ರಜೆಯಲ್ಲಿದ್ದರೆ ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಏನು ಮಾಡಬೇಕು? ಬದಲಿ ವೈದ್ಯರನ್ನು ವಾರಕ್ಕೆ ಒಮ್ಮೆಯೋ, ಎರಡು ಬಾರಿಯೋ ನಿಯೋಜನೆ ಮಾಡಲು ಏಕೆ ಮುಂದಾಗಿಲ್ಲ ಎಂಬ ಪ್ರಶ್ನೆಗಳು ಎದುರಾಗಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಡಿಎಚ್‌ಒ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಅವರ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ.

“ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರಿರುತ್ತಾರೆ. ಹೀಗೆ ಬಂದಾಗ ತಜ್ಞರಲ್ಲದ, ಅದರಲ್ಲೂ ವೈದ್ಯರೇ ಅಲ್ಲದ ಡಿ ಗ್ರೂಪ್ ‌ನೌಕರ ಚಿಕಿತ್ಸೆ ನೀಡಿದರೆ ಹೇಗೆ? ಒಂದು ವೇಳೆ ಜೀವಕ್ಕೆ ಏನಾದರೂ ಅಪಾಯವಾದರೆ? ಅಥವಾ ಅಂಗಾಗ ಊನಗೊಂಡರೆ ಏನು ಗತಿ?” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...