ತುಮಕೂರು | ಸಮತೆ-ಮಮತೆಗಳ ಪರಂಪರೆ ಅಗತ್ಯ : ಬರಗೂರು ರಾಮಚಂದ್ರಪ್ಪ

Date:

ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ-ಮಮತೆಗಳ ಪರಂಪರೆ ಅಗತ್ಯ ಎಂದು ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು

ತುಮಕೂರು ದಸರಾ ಉತ್ಸವ ಅಂಗವಾಗಿ ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಪ್ರೊ ಹೆಚ್.ಜಿ. ಸಣ್ಣಗುಡ್ಡಯ್ಯ ಹಾಗೂ ವೀಚಿ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಸಂವಾದಗೋಷ್ಠಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಂಪರೆ ಎಲ್ಲಾ ಕಾಲದಲ್ಲಿಯೂ ಬೆಳವಣಿಗೆ ಹೊಂದುತ್ತಾ ಬರುತ್ತಿದ್ದು, ಸಂಸ್ಕೃತಿ ಮತ್ತು ಪರಂಪರೆಗಳ ನಡುವಿನ ಸೂಕ್ಷ್ಮ ವ್ಯತ್ಯಾಸಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಬರವಣಿಗೆ ಸಂಸ್ಕೃತಿಯ ಜೊತೆ-ಜೊತೆಗೆ ಜನಮೂಲ ಸಂಸ್ಕೃತಿಯನ್ನು ತಿಳಿದಾಗ ಮಾತ್ರ ಈ ನೆಲದ ಮೂಲ ಪರಂಪರೆಯ ನೆಲೆಗಟ್ಟನ್ನು ನೋಡಲು ಸಾಧ್ಯ ಎಂದು ತಿಳಿಸಿದರು.

1000536792

ತುಮಕೂರು ಜಿಲ್ಲೆಯು ಕನ್ನಡ ಭಾಷೆ ಹಾಗೂ ರಾಜ್ಯಕ್ಕೆ ಹಲವು ಮೊದಲುಗಳನ್ನು ನೀಡಿದೆ. ಕನ್ನಡದ ಮೊದಲ ನಾಟಕ ಸಂಸ್ಥೆ, ಕನ್ನಡ ಮೊದಲ ಟಾಕಿ ಸಿನಿಮಾಗೆ ಚಿತ್ರಕಥೆ, ಸಾಹಿತ್ಯ, ಬರವಣಿಗೆ ಸೇರಿದಂತೆ ಕಲೆ, ವಿಜ್ಞಾನ, ಸಾಹಿತ್ಯ, ಸಿನಿಮಾ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಜಿಲ್ಲೆಗೆ ತನ್ನದೇ ಆದ ಇತಿಹಾಸ ಇರುವುದರಿಂದ ಜಿಲ್ಲೆಯ ಸಾಧಕರನ್ನು ಕುರಿತು ತಿಳಿಸುವಂತಹ ವಿವಿಧ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಸಮಾಜದಲ್ಲಿನ ಆಗು-ಹೋಗುಗಳ ಕುರಿತು ತಮ್ಮದೆ ಆದ ದೃಷ್ಟಿಕೋನದಲ್ಲಿ ವಿಮರ್ಶಿಸುವ ಸಾಹಿತಿಗಳು ಸಮಾಜದ ನಿಜವಾದ ಸಾಕ್ಷಿಪ್ರಜ್ಞೆಗಳಾಗಿದ್ದಾರೆ ಎಂದು ತಿಳಿಸಿದರು. ವಿಶ್ವ ವಿದ್ಯಾನಿಲಯಗಳು ಕೇವಲ ಪದವಿಗಳನ್ನು ನೀಡುತ್ತವೆ. ಆದರೆ ಭಾರತದ ಸಂಸ್ಕೃತಿ ಬದುಕನ್ನು ಕಟ್ಟಿಕೊಳ್ಳುವುದನ್ನು ಕಲಿಸುತ್ತದೆ. ಭಾರತದ ಮೂಲ ಸಂಸ್ಕೃತಿ ಪರಂಪರೆಯ ಬಗ್ಗೆ ವಚನಕಾರರು, ಸಾಹಿತಿಗಳು, ಚಿಂತಕರು ತಿಳಿಸಿರುವ ಕಾನೂನು ವ್ಯವಸ್ಥೆ, ಅಧುನಿಕ ಯುಗದಲ್ಲಿ ಮಹಿಳೆಯ ಪಾತ್ರ, ಸಮಾನತೆ, ಬಹುತ್ವ ವಿಷಯಗಳ ಕುರಿತು ಚರ್ಚೆ ನಡೆಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಂ. ಟಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಸಾಹಿತಿ ನಾಗಭೂಷಣ ಬಗ್ಗನಡು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ಹಿರಿಯ ಪತ್ರಕರ್ತ ಎಸ್. ನಾಗಣ್ಣ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್, ಚಿತ್ರ ಕಲಾವಿದರಾದ ಕೋಟೆಕುಮಾರ್, ಪ್ರಭು ಹರಸೂರು, ಲಕ್ಷ್ಮಣ್ ದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹಾಗೂ ಕವಿಗೋಷ್ಠಿ ಉಪಸಮಿತಿ ಅದ್ಯಕ್ಷ ಬಾಲಗುರುಮೂರ್ತಿ, ದಸರಾ ಕವಿಗೋಷ್ಠಿ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ ಹಾಗೂ ರಂಗನಾಥ ಕೆ. ಮರಡಿ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...