ತುಮಕೂರು | ಭೌತಶಾಸ್ತ್ರ ವಿಭಾಗ ಪುನಾರಂಭಿಸಿಸಲು ಒತ್ತಾಯಿಸಿ ಸಿಎಂಗೆ ಎಐಡಿಎಸ್‌ಒ ಮನವಿ

Date:

ನಿಗದಿತ ದಾಖಲಾತಿ ಇದ್ದರೂ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತುಮಕೂರು ವಿ.ವಿ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗವನ್ನು ಅವೈಜ್ಞಾನಿಕ ಕಾರಣಗಳನ್ನು ನೀಡಿ ಮುಚ್ಚಲಾಗಿದೆ ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ ಆರೋಪಿಸಿದ್ದು, ಈ ಕೂಡಲೇ ಮುಚ್ಚಿರುವ ವಿಭಾಗವನನ್ನು ಪುನರಾಂಭಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜಿಗೆ 2007ರಲ್ಲಿ ಸರ್ಕಾರ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಪರಿಸರ ವಿಜ್ಞಾನ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ಮಂಜೂರು ಮಾಡಿದೆ. ನಂತರ 2010ರಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ತುಮಕೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾಗಿ ಮಾರ್ಪಾಡಾಗಿದೆ.

ಈಗ ಹೊಸದಾಗಿ ವಿ.ವಿ ಕ್ಯಾಂಪಸ್ ನಗರದ ಹೊರವಲಯದಲ್ಲಿ ಆರಂಭವಾಗುತ್ತಿದ್ದು ಅಲ್ಲಿ ಇನ್ನೂ ಸಂಪೂರ್ಣವಾಗಿ ತರಗತಿಗಳನ್ನು ಪ್ರಾರಂಭಿಸಿಲ್ಲ ಮತ್ತು ಅಲ್ಲಿಯೂ ಈಗಾಗಲೇ ಒಂದು ಭೌತಶಾಸ್ತ್ರ ಸ್ನಾತಕೋತ್ತರ ಪದವಿ ವಿಭಾಗ (ವಿ.ವಿ ವಿಜ್ಞಾನ ಕಾಲೇಜಿನ ಮತ್ತು ಕ್ಯಾಂಪಸ್‌ನಲ್ಲಿರುವ ಭೌತಶಾಸ್ತ್ರ ವಿಭಾಗದ ಪಠ್ಯ ವಿಷಯ ಬೇರೆ ಬೇರೆ ಇರುತ್ತದೆ) ಚಾಲನೆಯಲ್ಲಿದ್ದು ಅಲ್ಲಿಯೂ ಬಹಳಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಯು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿರುವ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ಪ್ರವೇಶವನ್ನು ಸ್ಥಗಿತಗೊಳಿಸಿರುವ ಕ್ರಮ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಧಕ್ಕೆಯನ್ನು ತರುತ್ತದೆ. ಕುಲಪತಿಗಳನ್ನು ಈ ಕುರಿತು ಪ್ರಶ್ನೆ ಮಾಡಿದಾಗ ತಾಂತ್ರಿಕ ದೋಷಗಳು ಮತ್ತು ಶೈಕ್ಷಣಿಕ ಗುಣಮಟ್ಟದ ಕೊರತೆ, ಹಣಕಾಸಿನ ಕೊರತೆ ಮತ್ತು ವಿದ್ಯಾರ್ಥಿಗಳಿಗೆ ಎರಡು ಕಡೆ ಒಂದೇ ಕೋರ್ಸ್‌ಗಳಿದ್ದರೆ ಗೊಂದಲವಾಗುತ್ತದೆ ಎಂಬ ಕಾರಣಗಳನ್ನು ಹೇಳುತ್ತಾರೆ. ನೆಗಡಿ ಬಂದರೆ ಮೂಗನ್ನೇ ಕತ್ತರಿಸಿ ಎಂಬ ಗಾದೆಯಂತೆ ಉತ್ತರಿಸುತ್ತಾರೆ.

ಕರ್ನಾಟಕದಲ್ಲಿರುವ ಹಲವಾರು ವಿಶ್ವವಿದ್ಯಾನಿಲಯಗಳ ಘಟಕ ಕಾಲೇಜುಗಳಲ್ಲಿ, ಸಂಯೋಜಿತ ಪದವಿ ಕಾಲೇಜುಗಳಲ್ಲಿ ಮತ್ತು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ಗಳಲ್ಲಿ ಕೂಡ ಒಂದೇ ಸ್ನಾತಕೋತ್ತರ ಪದವಿ ಕೋರ್ಸ್ಗಳಿರುವುದನ್ನು ನೋಡಬಹುದು.

ವಿಶ್ವವಿದ್ಯಾನಿಲಯದ ಈ ಶಿಕ್ಷಣವಿರೋಧಿ ನಿಲುವು ತುಮಕೂರಿನ ಶಿಕ್ಷಣತಜ್ಞರು, ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಶಿಕ್ಷಣಪ್ರೇಮಿ ಜನತೆಗೆ ಆತಂಕವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ. ಈ ಕ್ರಮವನ್ನು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯು ಖಂಡಿಸುತ್ತದೆ. ಮತ್ತು ಮಾನ್ಯ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಲು, ಮುಚ್ಚಿರುವ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗವನ್ನು ಪುನರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಸಿ.ಬಿ, ಸೆಕ್ರೇಟರಿಯೇಟ್ ಸದಸ್ಯರಾದ ಭರತ್ ಮತ್ತು ಪಲ್ಲವಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...