ತುಮಕೂರು |ಕೊಲ್ಕತ್ತಾ ವೈದ್ಯೆ ಕೊಲೆ ಖಂಡಿಸಿ ಎಐಡಿಎಸ್ಓ ಮೊಂಬತ್ತಿ ಮೆರವಣಿಗೆ

Date:

ಕೊಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಕಿರಿಯ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆಯನ್ನು ಖಂಡಿಸಿ ಇಂದು ಎಐಡಿಎಸ್ಓ ವತಿಯಿಂದ ತುಮಕೂರು ಟೌನ್ ಹಾಲ್ ವೃತ್ತದಿಂದ ಸ್ವಾತಂತ್ರ್ಯ ಚೌಕದವರೆಗೆ ಮೋಂಬತ್ತಿ ಮೆರವಣಿಗೆ ಮಾಡಲಾಯಿತು.

ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಮಾತನಾಡಿ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳಿಗೆ ಮಾದ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನ, ಇಂಟರ್‌ನೆಟ್, ಮೊಬೈಲ್‌ಗಳ ಮೂಲಕ ಪೋರ್ನೋಗ್ರಫಿಕ್ ವೆಬ್‌ಸೈಟ್‌ಗಳನ್ನು ಹರಿಬಿಡುತ್ತಿರುವುದು, ದುರಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣವಾಗಿವೆ. ವಿಕೃತ ಮನಸ್ಥಿತಿ ಬೆಳೆಸಿಕೊಂಡು ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರದಂತಹ ಹೀನ, ಅನಾಗರಿಕ, ಅಮಾನವೀಯ ಕೃತ್ಯವನ್ನು ಎಸಗುತ್ತಿದ್ದಾರೆ. ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಭಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರಗಳು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಂಡಿಲ್ಲ. ಜೊತೆಗೆ ಇಂದಿನ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸಡಿಲತೆ, ನೂನ್ಯತೆಗಳಿಂದಾಗಿ ಎಷ್ಟೋ ಇಂತಹ ಅಪರಾಧಗಳನ್ನು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ವಿದ್ಯಾರ್ಥಿ-ಯುವಜನರು, ಪುರುಷ-ಮಹಿಳೆಯರು ಒಂದಾಗಿ ನಮ್ಮ ದೇಶದ ನವೋದಯ ಹರಿಕಾರರ, ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳ ಜೀವನ ಹೋರಾಟಗಳಿಂದ ಸ್ಪೂರ್ತಿ ಪಡೆದು ಉನ್ನತವಾದ ನೀತಿ, ನೈತಿಕತೆ, ಸಂಸ್ಕೃತಿಯ ತಳಹದಿಯ ಮೇಲೆ ಪ್ರಭಲ ಹೋರಾಟ ಕಟ್ಟಿ ಬೆಳೆಸಬೇಕಾಗಿದೆ. ಇಂತಹ ಹೋರಾಟದ ಮೂಲಕ ಮಾತ್ರವೇ ನಿಜವಾದ ಸಮಾನತೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾದ್ಯ ಎಂದು ಹೇಳಿದರು.

WhatsApp Image 2024 08 21 at 9.44.40 PM

ಎಐಡಿಎಸ್ಓ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಮಾತನಾಡಿ ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಅಲ್ಲದೆ ದೇಶದಾದ್ಯಂತ ಜನರು ಈ ಘಟನೆಯನ್ನು ಖಂಡಿಸಿ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಾಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಮತ್ತು ಪ್ರತಿಭಟನಾಕಾರರ ಮನಸ್ಸಿನಲ್ಲಿ ಭಯದ ಭಾವನೆಯನ್ನು ಹುಟ್ಟಿಸಲು 14 ಆಗಸ್ಟ್ 2024 ರಂದು ಮಧ್ಯರಾತ್ರಿ ಆರ್ ಜಿ ಕಾರ್ ವೈದ್ಯಕೀಯ ಕಾಲೇಜಿಗೆ ನುಗ್ಗಿ ಪ್ರತಿಭಟನೆಯ ಸ್ಥಳವನ್ನು ಧ್ವಂಸಗೊಳಿಸಿದ್ದಾರೆ. ಈ ಕೃತ್ಯ ಎಸಗಿಸುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಈ ಉದ್ದೇಶಪೂರ್ವಕ ಮತ್ತು ವ್ಯವಸ್ಥಿತ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆಸ್ಪತ್ರೆಯ ಅಧಿಕಾರಿಗಳು ಸಹ ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿಲ್ಲ, ಬದಲಾಗಿ ಅಪರಾಧಿಗಳೊಂದಿಗೆ ಶಾಮೀಲಾಗಿದ್ದು ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ. ಗುಂಡಾಗಳ ಇಂತಹ ಕೃತ್ಯಗಳು ಅಪರಾಧ ಎಸಗಿದವರಿಗೆ ಮಾತ್ರ ಸಹಾಯ ಮಾಡುತ್ತವೆ ಮತ್ತು ನಿಜವಾದ ಪ್ರತಿಭಟನಾಕಾರರನ್ನು ಸಮಾಜ ವಿರೋಧಿಗಳೆಂದು ಬಿಂಬಿಸುವ ಮತ್ತು ಚಳವಳಿಯನ್ನು ಹತ್ತಿಕ್ಕುವ ಶಕ್ತಿಯ ಕೈಗಳನ್ನು ಬಲಪಡಿಸುತ್ತವೆ. ಆದ್ದರಿಂದ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೆ ಜಾಗರೂಕತೆಯಿಂದ ಹೋರಾಟವನ್ನು ಬೆಳೆಸಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಡಿಎಸ್ಓ ನ ಭರತ್, ಸೈಯದ್, ಸುಮಂತ್ ಮುಂತಾದವರು ಮೆರವಣಿಗೆಯ ನೇತೃತ್ವ ವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...