ತುಮಕೂರು | ಅಂತಃಕರಣ, ಪೊರೆವ ಗುಣ ಇರುವವರೆಲ್ಲರೂ ಅಮ್ಮಂದಿರೆ: ಡಾ.ಶಾಲಿನಿ

Date:

ಹೆತ್ತರಷ್ಟೇ ಅಮ್ಮ ಅಲ್ಲ, ಅಪ್ಪಾಜೀನೂ ಅಮ್ಮಾನೇ. ಅಮ್ಮನ ಅಂತಃಕರಣ, ಪೊರೆಯುವ ಗುಣ ಇರುವವರೆಲ್ಲರೂ ಅಮ್ಮಂದಿರೆ. ನಮ್ಮಲ್ಲಿ ಮಾತೃಹೃದಯ ಇರಬೇಕು ಎಂದು ತುಮಕೂರಿನ ಶ್ರೀ ಸಿದ್ದಗಂಗಾ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಸೆಂಟರ್‌ನ ಪ್ರಾಂಶುಪಾಲೆ ಡಾ. ಶಾಲಿನಿ ಅಭಿಪ್ರಾಯಪಟ್ಟರು.

ಕರ್ನಾಟಕ ಲೇಖಕಿಯರ ಸಂಘ ತುಮಕೂರು ಜಿಲ್ಲಾ ಶಾಖೆಯು ತಾಯಂದಿರ  ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ “ಮಾತೃತ್ವ, ನನ್ನ ಅನುಭವ” ಎಂಬ ವಿಷಯದ ಕುರಿತು ನಡೆಸಿದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ಬಹುಮಾನವಾಗಿ ಪ್ರೇಮಾ ಮಲ್ಲಣ್ಣ ದತ್ತಿನಿಧಿ ಪ್ರ ವಿತರಣೆಯನ್ನು, ಡಾ. ಬಿ ಆರ್ ಅಂಬೇಡ್ಕರ್ ಉಚಿತ ಕೋಚಿಂಗ್ ಸೆಂಟರ್, ಅಂಬೇಡ್ಕರ್ ಭವನದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

“ಅಮ್ಮನ ಮಹತ್ವ ಎಷ್ಟು ಹೇಳಿದರೂ ಸಾಲದು. ಅಮ್ಮ ಏನಾದರೂ ಬುದ್ದಿ ಮಾತು ಹೇಳಿದರೆ ಜಗಳ ಮಾಡಬೇಡಿ. ನೀವು ನಿಮ್ಮ ಅಪ್ಪ ಅಮ್ಮನನ್ನು ಹೇಗೆ ಕಾಣುತ್ತೀರಾ ಎಂಬುದರ ಮೇಲೆ ನಿಮ್ಮ ವ್ಯಕ್ತಿತ್ವ ನಿರ್ಧಾರವಾಗುತ್ತದೆ. ಪ್ರಮುಖ ಹೆಜ್ಜೆ ಇಡುವಾಗ ಅಮ್ಮನ ಸಲಹೆ ಪಡೆಯಿರಿ. ಮುಂದೆ ಇಟ್ಟ ಹೆಜ್ಜೆ ಹಿಂದೆ ಇಡಬೇಡ ಎಂಬುದನ್ನು ನಾನು ಅಮ್ಮನಿಂದ ಕಲಿತೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದತ್ತಿದಾನಿ ಪ್ರೇಮಾ ಮಲ್ಲಣ್ಣ ಮಾತಾನಾಡುತ್ತಾ, “ಮನೆಯೇ ಮೊದಲ ಪಾಠಶಾಲೆ; ತಾಯಿಯೇ ಮೊದಲ ಗುರು. ತಾಯಿಯ ಪಾದದ ಕೆಳಗೆ ಸ್ವರ್ಗ ಇದೆ. ಆರಂಭದಿಂದಲೂ ಲೇಖಕಿಯರ ಸಂಘದಲ್ಲಿ ಕ್ರಿಯಾಶೀಲವಾಗಿ, ಸಂಘದ ಒಡನಾಟದಲ್ಲಿ ಇರುವುದರಿಂದ ತಾಯಂದಿರ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆಯನ್ನು ನಡೆಸಲು ಸಂಘದಲ್ಲಿ ದತ್ತಿಯಾಗಿ ತೊಡಗಿಸಿಕೊಳ್ಳಲಾಗಿದೆ” ಎಂದು ತಿಳಿಸಿದರು. ಸ್ಪರ್ಧೆಗೆ ಬಂದ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ತರಲು ಸಲಹೆ ಮಾಡಿದರು.

ಸಿ.ಎಲ್ ಸುನಂದಮ್ಮ ಮಾತನಾಡಿ, “ಸ್ಪರ್ಧೆಗೆ ಬಂದ ಪ್ರಬಂಧಗಳೆಲ್ಲವೂ ಭಾವಪೂರ್ಣವಾಗಿ ಉತ್ತಮವಾಗಿದ್ದವು” ಎಂದರು.

ಡಾ. ಬಿ.ಆರ್ ಅಂಬೇಡ್ಕರ್ ಉಚಿತ ಕೋಚಿಂಗ್ ಸೆಂಟರ್‌ನ ಅಧ್ಯಕ್ಷೆ ಜಯಶೀಲ ಮಾತನಾಡಿ, “ತಂದೆ ತಾಯಿಯರನ್ನು ನೋಡಿಕೊಳ್ಳುವ ಜವಾಬ್ದಾರಿ ಮಕ್ಕಳದೇ ಆಗಿದೆ. ಅವರನ್ನು ವೃದ್ಧಾಶ್ರಮಗಳಿಗೆ ದೂಡುವುದು ನಮ್ಮ ಸಂಸ್ಕೃತಿ ಅಲ್ಲ. ಪ್ರೀತಿ, ಕರುಣೆ, ವಿಶ್ವಾಸ ಕಡಿಮೆ ಆಗುತ್ತಾ ಇದೆ. ಸಾಮಾಜಿಕ ಹಾಗೂ ಕೌಟುಂಬಿಕ ಮೌಲ್ಯಗಳನ್ನು ಉಳಿಸಿಕೊಳ್ಳೋಣ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮಲ್ಲಿಕಾ ಬಸವರಾಜು ಮಾತನಾಡುತ್ತಾ, “ತಾಯಿಯು ತನ್ನ ಜೀವವನ್ನು ಒತ್ತೆ ಇಟ್ಟು ಮಗುವಿಗೆ ಜನ್ಮ ಕೊಡುವಳು. ಹೆರಿಗೆಯೆಂಬುದು ಅವಳಿಗೆ ಮರುಹುಟ್ಟು. ತಾಯಿಯ ಅಂತಃಕರಣ ಮತ್ತು ಪ್ರೀತಿಯಿಂದ ಸಮಾಜವನ್ನು ತಿದ್ದಿ ಮುನ್ನಡೆಸೋಣ” ಎಂದರು.

ಇದನ್ನೂ ಓದಿ: ತುಮಕೂರು | ಅನಂತಮೂರ್ತಿ ಆರಂಭಿಸಿದ ಚಲನೆ ಬಾನುರಿಂದ ಪೂರ್ಣ : ಅಗ್ರಹಾರ ಕೃಷ್ಣಮೂರ್ತಿ

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಗಿರಿಜಮ್ಮ ತೋವಿನಕೆರೆಗೆ ಪ್ರಥಮ ಬಹುಮಾನವಾಗಿ ರೂ 2000-00, ಶಾಂತಲಕ್ಷ್ಮಿ ಹೆಬ್ಬೂರು ದ್ವಿತೀಯ ಬಹುಮಾನ ರೂ 1500-00, ಆಕಾಶ್.ಬಿ.ಆರ್ ಬಾಣಸಂದ್ರಗೆ ತೃತೀಯ ಬಹುಮಾನ ರೂ 1000-00, ನಿದಾ ಆಪ್ರಿನ್ ತುಮಕೂರು ಸಮಾಧಾನಕರ ಬಹುಮಾನ ರೂ 500-00 ನಗದು ವಿತರಿಸಲಾಯ್ತು.

ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ಸಿ ಎನ್ ಸುಗುಣಾದೇವಿ, ಸಿ ಎಲ್ ಸುನಂದಮ್ಮ, ಉಪಾಧ್ಯಕ್ಷೆ ಸಿ ಎ ಇಂದಿರಾ, ಲಲಿತ ಮಲ್ಲಪ್ಪ, ಶೈಲಜಾ, ಸುಮಾ ಬೆಳಗೆರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮನೆಕೆಲಸ ಮಾಡುತ್ತಾ ಕಷ್ಟ ಪಟ್ಟು ತನ್ನ ಮೂರು ಮಕ್ಕಳನ್ನೂ ವಿದ್ಯಾವಂತರಾಗಿ ಮಾಡಿರುವ ವರಲಕ್ಷ್ಮಿ ರವರನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಯ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...