ತುಮಕೂರು | ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

Date:

ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜರುಗಿದ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಕಡು ಬಡತನದಲ್ಲಿ ಹುಟ್ಟಿ ಅಸ್ಪೃಶ್ಯತೆ, ಅಸಮಾನತೆ, ಮಹಿಳಾ ಅಸಮಾನತೆ ವಿರುದ್ಧ ಹೋರಾಡಿ ಸಮ ಸಮಾಜ ನಿರ್ಮಾಣ ಮಾಡಲು ತಮ್ಮ ಜೀವನವನ್ನೇ ಸವೆಸಿ ಧ್ವನಿ ಇಲ್ಲದವರಿಗೆ ದನಿಯಾಗಿದ್ದ ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. 

1000742683

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದೀನ-ದಲಿತರಿಗೆ, ನೊಂದವರಿಗೆ ಪ್ರತ್ಯಕ್ಷ ದೇವರಾಗಿ ಕಾಣುವ ಮೂಲಕ ಅವರ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. ಏಷ್ಯದ ಉಪ ಖಂಡದಂತಿರುವ ನಮ್ಮ ದೇಶದಲ್ಲಿ ಹಲವು ವೈವಿಧ್ಯತೆಗಳನ್ನು ಏಕೀಕರಣಗೊಳಿಸಿ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ. ತಮ್ಮ ಅನುಭವದ ರಸಗಟ್ಟಿಯಿಂದ ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುವ ಮೂಲಕ ಪ್ರತಿ ಭಾರತೀಯ ಪ್ರಜೆಗೆ ಆತ್ಮ ವಿಶ್ವಾಸ ತಂದುಕೊಟ್ಟಿದ್ದಾರೆ. ಸಾವಿರಾರು ವರ್ಷಗಳಿಂದ ತುಳಿತಕ್ಕೊಳಗಾದ ಮತ್ತು ಸಮಾಜದಿಂದ ಹಿಂದೆ ಉಳಿದುಕೊಂಡಿದ್ದ ಅನೇಕ ಸಮುದಾಯಗಳು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಬದುಕನ್ನು ಕಟ್ಟಿಕೊಂಡಿವೆ ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಾತನಾಡಿ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಾವೆಲ್ಲರೂ ಸಮಾಜದಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದೇವೆ. ಪ್ರತಿಯೊಬ್ಬರಿಗೂ ಸಮಾನ ನ್ಯಾಯವನ್ನು ಒದಗಿಸುವುದು, ಎಲ್ಲರಿಗೂ ನ್ಯಾಯವನ್ನು ದೊರಕಿಸಿಕೊಡುವುದೇ ಸಂವಿಧಾನದ ಆಶಯವಾಗಿದೆ ಎಂದು ತಿಳಿಸಿದರು.

1000742690

ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಮಾತನಾಡಿ ತಲಾ ತಲಾಂತರದಿಂದ ಬಂದ ಅನಿಷ್ಟ ಪದ್ಧತಿಗಳನ್ನು ಸಮಾಜದಿಂದ ಕಿತ್ತೊಗೆಯಲು ಇಡೀ ವ್ಯವಸ್ಥೆಯನ್ನೇ ಎದುರು ಹಾಕಿಕೊಳ್ಳುವ ಮೂಲಕ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವಂತೆ ಮಾಡಿದವರು ಡಾ. ಬಿ.ಆರ್. ಅಂಬೇಡ್ಕರ್. ಭಾರತದ ಧಾರ್ಮಿಕ ವ್ಯವಸ್ಥೆ, ಜಾತಿ ವ್ಯವಸ್ಥೆ ಮತ್ತು ಪುರುಷ ಪ್ರಧಾನ ವ್ಯವಸ್ಥೆಯಿಂದ ಸ್ವತಂತ್ರವಾಗಿ ಉಸಿರಾಡಲು ಸಹ ಆಗದ ಸ್ಥಿತಿಯಲ್ಲಿ ಸಿಲುಕಿದ್ದ ಜನರನ್ನು ಸಂಕೋಲೆಯಿಂದ ಬಿಡಿಸಿದ ಅವರ ಮಾನವೀಯತೆಯ ವಿಚಾರಧಾರೆಗಳು ಪ್ರಪಂಚಕ್ಕೆ ಪಸರಿಸಿವೆ. ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ಎಂಬ ನ್ಯಾಯವನ್ನು ಒದಗಿಸಿದ ಅವರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆಗಳನ್ನು ಅರಿತು ಬಾಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಸ್ಲಂ ಜನಾಂದೋಲನದ ಎ. ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...