ತುಮಕೂರು | ಅಂಬೇಡ್ಕರ್ ಚಿಂತನೆ ಸಾರ್ವತ್ರಿಕವಾಗಿ ಚರ್ಚೆಯಾಗಬೇಕು : ಡಾ.ವೈ.ಕೆ.ಬಾಲಕೃಷ್ಣಪ್ಪ

Date:

ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ರಕ್ತ ರಹಿತ ಕ್ರಾಂತಿಯ ಮೂಲಕ ಈ ದೇಶದ ನಿಮ್ನ ವರ್ಗಗಳಿಗೆ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆಯ ಸವಲತ್ತುಗಳನ್ನು ಸಂವಿಧಾನದ ಮೂಲಕ ನೀಡಿದರು ಎಂದು ಕರ್ನಾಟಕ ರಾಜ್ಯ ಸರ್ಕಾರಿ  ಎಸ್. ಸಿ ,ಎಸ್. ಟಿ ನೌಕರರ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು.

ತುಮಕೂರು ನಗರದ ಟಿ.ಎ.ಪಿ.ಎಂಎಸ್ ಕಟ್ಟಡದಲ್ಲಿರುವ ಕರ್ನಾಟಕ ರಾಜ್ಯ ಸರಕಾರಿ ಎಸ್. ಸಿ,ಎಸ್. ಎಸ್. ಟಿ ನೌಕರರ ಸಮನ್ವಯ ಸಮಿತಿ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 76ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇಡೀ ವಿಶ್ವದಲ್ಲಿಯೇ ದೇಶದ ಎಲ್ಲಾ ವರ್ಗದ ಜನರನ್ನು ಒಳಗೊಂಡ ಸಂವಿಧಾನವಿದ್ದರೆ,ಆದು ಭಾರತದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವಾಗಿದೆ. ಇದು ಭಾರತೀಯರೆಲ್ಲರೂ ಹೆಮ್ಮೆ ಪಡುವಂತಹ ವಿಚಾರ ಎಂದರು.

1000742748

ಭಾರತದ ಸಂವಿಧಾನ ಜಾತಿ, ವರ್ಗ, ವರ್ಣ, ಲಿಂಗಭೇಧವಿಲ್ಲದೆ ಎಲ್ಲರಿಗೂ ಸಮಾನತೆಯನ್ನು ಕಲ್ಪಿಸುವ ಸಮ ಸಮಾಜದ ಪರಿಕಲ್ಪನೆ ಹೊಂದಿರುವ ಸಂವಿಧಾನವಾಗಿದೆ.ಇದರ ಅಡಿಯಲ್ಲಿ ಭಾರತ ಸಧೃಢವಾಗಿ ಮುನ್ನೆಡೆಯಲು ಹಾಕಿಕೊಟ್ಟ ಮಾರ್ಗವಾಗಿದೆ.ಇಡೀ ವಿಶ್ವದಲ್ಲಿ ಬಾಬಾ ಸಾಹೇಬರಷ್ಟು ಪದವಿಗಳನ್ನು ಪಡೆದ ಜ್ಞಾನವಂತರು ಮೊತ್ತಬ್ಬರಿಲ್ಲ.ಹಾಗಾಗಿ ಬಾಬಾ ಸಾಹೇಬರು ಹುಟ್ಟಿದ ದಿನವನ್ನು ವಿಶ್ವಸಂಸ್ಥೆ ಜ್ಞಾನದ ದಿನವಾಗಿ ಘೋಷಿಸಿದೆ.ಸ್ವಾತಂತ್ರ ಭಾರತದ ಮೊಟ್ಟ ಮೊದಲ ಕಾನೂನು ಮಂತ್ರಿಯಾಗಿ, ಮಹಿಳೆಯರಿಗೆ ಆಸ್ತಿ ಸೇರಿದಂತೆ ಸಮಾನತೆ ಹಕ್ಕು ಪ್ರತಿಪಾದಿಸುವ ಹಿಂದೂ ಕೋಡ್ ಬಿಲ್‌ಗೆ ಅಧಿವೇಶದಲ್ಲಿ ಬೆಂಬಲ ದೊರೆಯದ ಹಿನ್ನೆಲೆಯಲ್ಲಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ತ್ಯಾಗ ಜೀವಿ.ಅವರು ಎಳೆದ ಸಮಾನತೆ ರಥವನ್ನು ಸಾಧ್ಯವಾದರೆ ಮುಂದಕ್ಕೆ ತೆಗೆದುಕೊಂಡು ಹೋಗಿ, ಹಿಂದಕ್ಕೆ ತರಬೇಡಿ ಎಂದು ದೇಶದ ವಿದ್ಯಾವಂತ ಯುವಜನತೆಗೆ ಕರೆ ನೀಡಿದ್ದರು ಎಂದು ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿರುವ ನಮ್ಮ ನಾಡಿನಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒರ್ವ ದಲಿತ ಹೆಣ್ಣು ಮಗಳ ಮೇಲೆ ಅತ್ಯಾಚಾರ,ಕೊಲೆ ನಡೆಯತ್ತಿದೆ.ದಲಿತರು ದೇವಾಲಯ ಪ್ರವೇಶಿಸಿದರು ಎಂಬ ಕಾರಣಕ್ಕೆ ಬೇರೆ ದೇವಾಲಯ ನಿರ್ಮಿಸಿದಾಗ, ದೇವರನ್ನು ಗುಡಿಯಿಂದ ಹೊರತಂದಾಗ ಬಾಯಿ ಬಿಡದ, ತಪ್ಪು ಮಾಡಿದವರಿಗೆ ಜಾಗೃತಿ ಮೂಡಿಸಿದ ಜನರು,ಬಾಬಾ ಸಾಹೇಬರ ಹುಟ್ಟಿದ ದಿನ, ಪರಿನಿಬ್ಬಾಣ ದಿನವನ್ನು ಆಚರಿಸಿ, ಕಣ್ಣೀರು ಹರಿಸಿ, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತಿದ್ದಾರೆ.ಇದರ ಹಿಂದಿನ ಅಜೆಂಡಾ ತಿಳಿದೇ ಅಂಬೇಡ್ಕರ್ ಅವರು ತಮ್ಮ ಲಕ್ಷಾಂತರ ಅನುಯಾಯಿ ಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದರು.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು ಸಂವಿಧಾನವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಎಸ್,ಎಸ್. ಟಿ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ನಾಗರಾಜು ಉಪಾಧ್ಯಕ್ಷ ಹನುಮಂತರಾಜು, ಪದಾಧಿಕಾರಿಗಳಾದ ಹೆಚ್.ಗೋಪಿನಾಥ್,ಪ್ರಕಾಶ್, ಗಿರೀಶ್, ಚಂದ್ರಶೇಖರ್, ರವಿಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...