ತುಮಕೂರು | ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವಾರ್ಷಿಕ ಮಹಾಸಭೆ ; ಶೈಕ್ಷಣಿಕ ಕ್ಷೇತ್ರದ ಇನ್ನಷ್ಟು ಪ್ರಗತಿಗೆ ಡಾ.ಜಿ.ಪರಮೇಶ್ವರ್ ಕರೆ

Date:

 ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ತುಮಕೂರು  ನಗರದ ಹೊರವಲಯದ ಗೊಲ್ಲಹಳ್ಳಿ ಶ್ರೀ ಸಿದ್ಧಾರ್ಥ ಶಿಕ್ಷಕ ತರಬೇತಿ ಕೇಂದ್ರ ಸಭಾಂಗಣದಲ್ಲಿ ಇಂದು (ಶನಿವಾರ) ನಡೆಯಿತು.

ಸಭೆಗೆ ಆರಂಭಿಸುವ ಮುನ್ನ ಶಿಕ್ಷಣ ಭೀಷ್ಮ ಡಾ. ಗಂಗಧರಯ್ಯ, ಡಾ. ಶಿವಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಸ್ಥೆಯಲ್ಲಿ ಕಾರ್ಯನಿರ್ವಹಣೆ ಮಾಡಿ ಅಗಲಿದ ಸಿಬ್ಬಂದಿಗಳಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

1001089313

ಶಿಕ್ಷಣ ಭೀಷ್ಮ ಡಾ. ಹೆಚ್.ಎಂ.ಗಂಗಾಧರಯ್ಯ ನವರು ತಳ ಮಟ್ಟದಿಂದ ಕಟ್ಟಿ ಬೆಳಸಿದ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು, ಸಂಸ್ಥೆಯ ಬೆಳವಣಿಗೆ, ಅಭಿವೃದ್ಧಿ ಕಾರ್ಯಗಳು, ಪ್ರಗತಿ ನೋಟವನ್ನು ವಾರ್ಷಿಕ ಮಹಾಸಭೆಯಲ್ಲಿ ಅವಲೋಕಿಸಲಾಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸ್ಥೆಯ ಕಾರ್ಯದರ್ಶಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯವ್ಯಯ ಲೆಕ್ಕಪತ್ರ ಮಂಡನೆ, ಶಿಕ್ಷಣ ಸಂಸ್ಥೆ ಪ್ರಗತಿ ಹಾದಿ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ನಂತರ ಮಾತನಾಡಿಿಿ ಸಚಿವರು, ದದ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಬೇಕೆಂದು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ಘಟಕದ ಮುಖ್ಯಸ್ಥರಿಗೆ ಸೂಚಿಸಿದರು.

1001089312

ಇದಕ್ಕೂ ಮುನ್ನ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ, ಸಾಹೇ ವಿವಿಯ ಕುಲಾಧಿಪತಿ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶಿಕ್ಷಕ ತರಬೇತಿಯ ಪ್ರಕ್ಷಣಾರ್ಥಿ ಸೇರಿದಂತೆ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾದ ಸಾಧನೆ ಮಾಡಬೇಕೆಂದು ಹುರಿದುಂಬಿಸಿ ಆರ್ಶೀವದಿಸಿದರು. 

ಇದೇ ಸಂದರ್ಭದಲ್ಲಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ವಕೀಲರಾದ ಅಮರನಾಥ್, ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ ನಂಜುಂಡಪ್ಪ, ಸಾಹೇ ವಿವಿಯ ಉಪಕುಲಪತಿಗಳಾದ ಡಾ.ಬಿ.ಕೆ.ಲಿಂಗೇಗೌಡ, ರಿಜಿಸ್ಟರ್ ಡಾ. ಅಶೋಕ್ ಮೆಹ್ತಾ, ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಮೆಡಿಕಲ್ ಕಾಲೇಜು, ಪ್ರಾಂಶುಪಾಲರಾದ ಸಾಣಿಕೊಪ್ಪ, ದಂತ ವೈದ್ಯಕೀಯ ಕಾಲೇಜಿನ ಡಾ. ಪ್ರವೀಣ್ ಕುಡುವ, ಉಪ ಪ್ರಾಂಶುಪಾಲರಾದ ಡಾ ಪ್ರಭಾಕರ್, ಇಂಜಿನಿಯರಿಂಗ್ ಕಾಲೇಜು ವಿಭಾಗದ ಪ್ರಾಂಶುಪಾಲರಾದ ಡಾ. ರವಿಪ್ರಕಾಶ್, ನೆಲಮಂಗಲ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ದಿವಾಕರ್ ಸೇರಿದಂತೆ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...