ತುಮಕೂರು | ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ : ಜಿಲ್ಲಾಧಿಕಾರಿಗಳಿಂದ ಚಾಲನೆ

Date:

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 17 ರಿಂದ 29ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು.  

 ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ 29 ಹಾಗೂ 30ರಂದು ಆಯೋಜಿಸಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಯಾತ್ರೆಯನ್ನು ಆಯೋಜಿಸಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 17ರಂದು ರಥಯಾತ್ರೆಗೆ ಚಾಲನೆ ನೀಡಿದ್ದು, ರಥಯಾತ್ರೆಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸಲಿದೆ ಎಂದು ತಿಳಿಸಿದರು.

 ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸ್ವಾತಂತ್ರ್ಯದ  ಬಗ್ಗೆ ನಾವೆಲ್ಲಾ ಮಾತನಾಡುತ್ತಿದ್ದೇವೆ. ಆದರೆ ಬಸವಣ್ಣನವರು 12ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಏಳಿಗೆಗಾಗಿ ಹಗಲಿರುಳು ಶ್ರಮಿಸಿದರು. ಸಾಮಾಜಿಕ ತಾರತಮ್ಯ, ಲಿಂಗತಾರತಮ್ಯ, ಮೂಢ ನಂಬಿಕೆಗಳನ್ನು ಹೋಗಲಾಡಿಸಲು 800 ವರ್ಷಗಳ ಹಿಂದೆಯೇ ರಚಿಸಿದ ವಚನಗಳು ಇಂದಿಗೂ ಪ್ರಸ್ತುತವಾಗಿವೆ. ಬಸವಣ್ಣನವರ ಮಹತ್ವವನ್ನು ನಾಡಿಗೆ ಸಾರಲು ಹೊರಟಿರುವುದು ಶ್ಲಾಘನೀಯ. ನಮ್ಮ ಜಿಲ್ಲೆಯಲ್ಲಿಯೂ ಬಸವಣ್ಣನವರ ವಚನಗಳ ಕುರಿತು ವಿಚಾರ ಸಂಕಿರಣಗಳನ್ನು ಏರ್ಪಡಿಸಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಶಾಸಕ ಜಿ.ಬಿ.ಜೋತಿಗಣೇಶ್ ಮಾತನಾಡಿ, ಬಸವಣ್ಣನವರ ಜಯಂತಿ ಅಂಗವಾಗಿ ಅವರ ಬದುಕು, ತತ್ವಗಳನ್ನು ಜನತೆಗೆ ತಿಳಿಸಲು ಸರಕಾರ ಕೈಗೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಇಂದು ತುಮಕೂರಿಗೆ ಆಗಮಿಸಿದೆ. ಬಸವಣ್ಣನವರ ವಚನಗಳ ಸಾರವನ್ನು ತಿಳಿದು ನಡೆದರೆ, ಕಲ್ಯಾಣ ರಾಜ್ಯ ಸಾಕಾರಗೊಳ್ಳಲಿದೆ ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಬಸವಾದಿ ಶರಣರ ಸಂದೇಶಗಳನ್ನು ಸರಕಾರ ನಾಡಿಗೆ ಪಸರಿಸಲು ಹೊರಟಿರುವುದು ಸ್ವಾಗತಾರ್ಹ. ಇದರ ಜೊತೆಗೆ ಶಾಲಾ, ಕಾಲೇಜುಗಳಲ್ಲಿ ಬಸವಣ್ಣನವರ ಬಗ್ಗೆ ವಿಚಾರ ಸಂಕಿರಣ, ಕಾರ್ಯಾಗಾರಗಳನ್ನು ನಡೆಸುವುದರ ಜೊತೆಗೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಸವಭವನ ನಿರ್ಮಾಣ ಮಾಡಬೇಕೆಂಬುದು ಬಹು ಜನರ ಬೇಡಿಕೆಯಾಗಿದೆ. ಸರಕಾರ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕೆಂಬುದು ಶರಣರ ಒತ್ತಾಯವಾಗಿದೆ ಎಂದರು. 

 ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಡಾ: ಪರಮೇಶ್, ತುಮಕೂರು ನಗರ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಜಿ.ಎಸ್.ಚಂದ್ರಮೌಳಿ, ಮುಖಂಡರಾದ ಸದಾಶಿವಯ್ಯ, ಎಂ.ಜಿ. ಸಿದ್ದರಾಮಯ್ಯ, ಡಾ. ಡಿ.ಎನ್.ಯೋಗೀಶ್ವರಪ್ಪ, ಎಸ್. ಕುಮಾರಸ್ವಾಮಿ, ರಾಜಶೇಖರಯ್ಯ, ಶಶಿಧರನ್, ತಕರಾರಿ ಮಹೇಶ್, ಕನ್ನಡ ಪ್ರಕಾಶ, ಶ್ರೀಧರ, ಅನುಸೂಯಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...