ತುಮಕೂರು | ಕಾಲೇಜು ಕ್ಯಾಂಪಸ್ ಗಳಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಎಪಿಸಿಆರ್ ಒತ್ತಾಯ

Date:

ತುಮಕೂರು ನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಸಿವಿಲ್ ರೈಟ್ಸ್ ಪ್ರೊಟೆಕ್ಷನ್ ಇಂಡಿಯಾ(ಎಪಿಸಿಆರ್) ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಸಲ್ಲಿಸಿದ್ದಾರೆ.

ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು,ನಗರದಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ನಿರ್ಲಕ್ಷಿಸಿದೆ, ಹಾಗೆಯೇ ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲಿ  ಇಂತಹ ಪರಿಸ್ಥಿತಿ ಇದೆ. ಬೇರೆ ಜಿಲ್ಲೆಯ ಗತಿ ಏನಾಗಿರಬಹುದು ಎಂಬ ಸಂಶಯ ಇದೆ. ಕ್ಯಾಂಪಸ್, ಹಾಸ್ಟೆಲ್, ಅತಿಥಿಗೃಹ(ಪಿಜಿ) ಮುಂತಾದ ಕಡೆಗಳಲ್ಲಿ ಪರಿಸ್ಥಿತಿ ಗಂಭೀರಮಟ್ಟಕ್ಕೆ ತಲುಪುತ್ತಿದೆ.ಈ ಕುರಿತು ಶೀಘ್ರವಾಗಿ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ನಗರದ ಕ್ಯಾಂಪಸ್‌ಗಳು ಮತ್ತು ವಿದ್ಯಾರ್ಥಿ-ಯುವ ಸಮುದಾಯವು ಸಮಾಜಕ್ಕೆ ಮಾರಕವಾಗುವ ಸ್ಥಿತಿಯನ್ನು ಎದುರಿಸಬೇಕಾದೀತು ಎಂದು ಎಪಿಸಿಆರ್ ಮನವಿಯಲ್ಲಿ ಎಚ್ಚರಿಸಿದ್ದಾರೆ.

ಪ್ರಮುಖವಾಗಿ ಮಾದಕ ಪದಾರ್ಥಗಳ ಮಾರಾಟ ಜಾಲದ ಮೂಲವನ್ನು ಪತ್ತೆ ಹಚ್ಚಿ ಶೀಘ್ರವೇ ಅದರ ನಿರ್ಮೂಲನೆ ಮಾಡಬೇಕು.ತುಮಕೂರು ನಗರದ ಹೊರವಲಯದಿಂದ ಕ್ಯಾಂಪಸ್‌ಗಳಿಗೆ ಮಾದಕ ಪದಾರ್ಥಗಳನ್ನು ತಲುಪಿಸುವ ಮಧ್ಯವರ್ತಿಗಳ ಜಾಲವನ್ನು ತಡೆಯಬೇಕು ಮತ್ತು ಅವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಬೇಕು.ಕ್ಯಾಂಪಸ್‌ಗಳಲ್ಲಿರುವ ಅಚಿಟಿ ಡ್ರಗ್ಸ್ ಸ್ವಾಡ್‌ನ್ನು ಬಲಪಡಿಸಬೇಕು ಮತ್ತು ಅದರ ಕಾರ್ಯ ಚಟುವಟಿಕೆಯನ್ನು ಫಲಪ್ರದಗೊಳಿಸುವಂತೆ ನಿಗಾ ವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001789555

ಕೇರಳ ಮಾದರಿ ಅಂಟಿ ಡ್ರಗ್ ಪೊಲೀಸ್ ಕಾರ್ಯಾಚರಣೆಯನ್ನು(ವಿದ್ಯಾರ್ಥಿಗಳ ಹೆಸರು ಬಯಲು ಮಾಡದೆ,ಕ್ಯಾಂಪಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಯ ಪೋಷಕರ ಮಧ್ಯಸ್ಥಿಕೆಯಲ್ಲಿ ಅದನ್ನು ಪರಿಹರಿಸಬೇಕು.) ನಡೆಸಬೇಕು.ಮಾದಕ ವ್ಯಸನಿಗಳ ಪುನರ್ವಸತಿಯ ಕುರಿತು ಪೊಲೀಸ್ ಇಲಾಖೆಯು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿಗಾಗಿ ನಿರಂತರ ಶ್ರಮಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.

ಜಿಲ್ಲೆಯಾದ್ಯಂತ ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಈ ಅಪರಾಧದ ಬಗೆಗಿನ ಕಾನೂನು ಜಾಗೃತಿಯನ್ನು ಮೂಡಿಸಬೇಕಿದೆ.ಪ್ರಮುಖವಾಗಿ ಹೈಸ್ಕೂಲ್ ಹಂತದಲ್ಲಿ ಬಾಲಕರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ.ಮಕ್ಕಳಿಗೆ ನಿಂಬೆ ಹುಳಿ, ಕಚ್ಚಾ ಮ್ಯಾಂಗೋ ಮತ್ತಿತರರ ಪ್ಲೇವರ್‌ಗಳಲ್ಲಿ ಎಗ್ಗಿಲ್ಲದೆ ದೊರೆಯುತ್ತಿರುವ ಚಾಕಲೇಟ್ ರೂಪದ ಮಾದಕ ವಸ್ತುಗಳಿಗೆ ಕಡಿವಾಣ ಹಾಕುವ ಮೂಲಕ ಬೆಳೆಯುವ ಚಿಗುರುಗಳನ್ನು ರಕ್ಷಿಸಬೇಕಾಗಿದೆ.ನಗರದಲ್ಲಿ ಮತ್ತು ನಗರದ ಹೊರವಲಯದಲ್ಲಿ ಮಾದಕ ವ್ಯಸನದ ಪ್ರಭಾವ ಹೆಚ್ಚಾಗುತ್ತಿದೆಯೋ ಅಲ್ಲಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಮತ್ತು ವಿದ್ಯಾರ್ಥಿ ನಾಯಕರ ಸಭೆಯನ್ನು ಆಯೋಜಿಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಬೇಕು.ಶಾಲಾ ಕಾಲೇಜಿನ 100 ಮೀಟರ್ ಅಂತರದಲ್ಲಿ ಬೀಡಿ, ಸಿಗರೇಟು, ಗುಟ್ಕಾ ಮದ್ಯಪಾನ ಮುಂತಾದವುಗಳ ನಿಷೇಧ ಕಾನೂನು ಇದ್ದರೂ ಹಲವೆಡೆ ಅದರ ಮಾರಾಟ ನಡೆಯುತ್ತಿರುವುದು ಗಮನಿಸಬಹುದಾಗಿದೆ ಇದನ್ನು ಶೀಘ್ರವಾಗಿ ತಡೆಗಟ್ಟವಂತೆ ಮಾಡಬೇಕು. ಜಿಲ್ಲೆಯಾದ್ಯಂತ ವ್ಯಾಪಕವಾಗುತ್ತಿರುವ ಮಾದಕ ವ್ಯಸನದ ಪ್ರಭಾವದ ಕುರಿತು ಕಾನೂನು ತಜ್ಞರು, ಸಮಾಜ ಸೇವಕರು, ಸಂಶೋಧನಾ ವಿದ್ಯಾಥಿಗಳು ಮತ್ತು ಬುದ್ದಿ ಜೀವಿಗಳನ್ನೊಳಗೊಂಡ ಒಂದು ತಂಡದಿAದ ಜಿಲ್ಲೆಯ ಅಧ್ಯಯನ, ಪರಿಸ್ಥಿಯ ಅವಲೋಕನ ಮತ್ತು ಪರಿಹಾರ ಕಾರ್ಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ತಾಜುದ್ದೀನ್ ಷರೀಫ್ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾದ ಪದಾಧಿಕಾರಿಗಳಾದ ಅಫ್ಜಲ್ ಖಾನ್, ಹಮೀದ್ ಬೇಗ್, ಅಪ್ಸರ್ ಖಾನ್ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...