ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

Date:

  • ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಗುಂಡಿ ತೋಡಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ
  • ಬಗರ್‌ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಅರಣ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳು ಬಗರ್ ಹುಕುಂ ಸಾಗುವಳಿದಾರರ ಮೇಲೆ ಲಾಠಿ ಚಾರ್ಜ್‌ ನಡೆಸಿದ್ದು, ಹಲವು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಗಂಗಯ್ಯನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಏಕಾಏಕಿ ಬಂದು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ ಗುಂಡಿ ತೋಡುವುದಕ್ಕೆ ಮುಂದಾಗಿದ್ದರು. ಅದನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌) ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿ ಬಗರ್ ಹುಕುಂ ಸಾಗುವಳಿದಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

“ಚೇಳೂರು ಹೋಬಳಿಯ 35 ಗ್ರಾಮಗಳ ಬಗರ್‌ ಹುಕುಂ ರೈತರು ಕಳೆದ 70 ವರ್ಷಗಳಿಂದ ಉಳುಮೆ ಮಾಡುತ್ತಿರುವ ಜಮೀನನ್ನು ಅರಣ್ಯಭೂಮಿಯೆಂದು ಈ ಹಿಂದೆಯೂ ಅತಿಕ್ರಮಕ್ಕೆ ಮುಂದಾಗಿದ್ದರು” ಎಂದು ರೈತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅತಿಕ್ರಮಣವನ್ನು ಖಂಡಿಸಿ ರೈತರು ಹೋರಾಟ ಮಾಡಿದ್ದರಿಂದ, ಸ್ಥಳೀಯ ರಾಜಕೀಯ ಮುಖಂಡ ನಾಗರಾಜ್‌, ಡಿವೈಎಸ್‌ಪಿ ನಾಗರಾಜ್‌ ಸಮ್ಮುಖದಲ್ಲಿ ಅರಣ್ಯ ಇಲಾಖೆ ರೈತರ ಸ್ವಾಧೀನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆ ಮಾತಿಗೆ ತಪ್ಪಿ ಬಗರ್‌ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಗುರುವಾರ ಏಕಾಏಕಿ ಹಲ್ಲೆ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಆರ್‌ಎಸ್‌ ರಾಜ್ಯ ಕಾರ್ಯದರ್ಶಿ ಟಿ ಯಶ್ವಂತ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗಂಗಯ್ಯನ ಪಾಳ್ಯ ಗ್ರಾಮದ ರೈತರ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದ ಕೆಪಿಆರ್‌ಎಸ್‌ ಗುಬ್ಬಿ ತಾಲೂಕು ಅಧ್ಯಕ್ಷ ದೊಡ್ಡನಂಜಯ್ಯ ಅವರನ್ನು ಗುರಿಯಾಗಿಸಿಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ತೀವ್ರವಾಗಿ ಹಲ್ಲೆ ನಡೆಸಿ ಅಪಹರಿಸಿದ್ದರೆಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಯೋಜನೆ ಗ್ರಾಮದ ಮನೆ ಮನೆಗೂ ತಲುಪಲಿ: ಗ್ರಾ.ಪಂ ಅಧ್ಯಕ್ಷ ಲಕ್ಷ್ಮಣ ಕಂಬಳಿ

“ಘಟನೆಯಲ್ಲಿ ರೈತ ಮುಖಂಡ ದೊಡ್ಡನಂಜಯ್ಯ ಅವರನ್ನು ಗುರಿಯಾಗಿಸಿ, ಲಾಠಿಯನ್ನು ಮನಸ್ಸೋ ಇಚ್ಛೆ ಥಳಿಸಿ, ಕಾಲಲ್ಲಿ ತುಳಿದು ತಮ್ಮ ಜೀಪಿನಲ್ಲಿ ಅಪಹರಿಸಿದ್ದರು. ನಂತರ ರೈತರೆಲ್ಲ ಸೇರಿ ಪ್ರತಿಭಟನೆಯನ್ನು ತೀವ್ರಗೊಳಿಸಿ ದೊಡ್ಡನಂಜಯ್ಯ ಅವರ ಬಿಡುಗಡೆಗೆ ಆಗ್ರಹಿಸಿದ್ದರಿಂದ ಅವರನ್ನು ಜಿಲ್ಲಾಸ್ಪತ್ರೆ ಬಳಿ ಬಿಟ್ಟು ಹೋಗಿದ್ದರು” ಎಂದು ಯಶ್ವಂತ್‌ ಆರೋಪಿಸಿದ್ದಾರೆ.

“ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಅವರ ಮೇಲೆ ಹಲ್ಲೆ ಮಾಡಿದ್ದರಿಂದ ತಲೆಗೆ ತೀವ್ರತರವಾದ ಪೆಟ್ಟು ಬಿದ್ದಿದ್ದು, 34 ಹೊಲಿಗೆ ಹಾಕಲಾಗಿದೆ. ಅಲ್ಲದೆ, ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯರು, ವೃದ್ಧರು ಸೇರಿದಂತೆ ಹಲವರು ಗಂಭೀರ ಗಾಯಗೊಂಡಿದ್ದಾರೆ” ಎಂದರು.

“ಅರಣ್ಯ ಇಲಾಖೆ ಸಿಬ್ಬಂದಿ ಲಾಠಿ ಚಾರ್ಜ್ ಮಾಡುವ ಅಧಿಕಾರ ಕೊಟ್ಟವರು ಯಾರು? ದೌರ್ಜನ್ಯಕ್ಕೆ ಕಾರಣರಾಗಿರುವ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಮಾನತು ಮಾಡಬೇಕು. ಘಟನೆ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೂಡಲೇ ಕ್ರಮಕೈಗೊಳ್ಳಬೇಕು. ಬಗರ್ ಹುಕುಂ ಸಾಗುವಳಿ ರೈತರಿಗೆ ನ್ಯಾಯ ಸಿಗಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...