ತುಮಕೂರು | ಗಾಂಧಿ ಕೊಂದ ಮನಸ್ಥಿತಿಗಳಿಂದ ಸಿಜೆಐ ಮೇಲೆ ಶೂ ಎಸೆಯುವ ಪ್ರಯತ್ನ : ನವೀನ್ ಪೂಜಾರಹಳ್ಳಿ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಮುಂದಾಗಿದ್ದನ್ನು ಖಂಡಿಸಿ ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತುಮಕೂರು ನಗರದಲ್ಲಿ ವಿ.ವಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವಿದ್ಯಾರ್ಥಿಗಳು ಬಿ.ಎಚ್‌. ರಸ್ತೆ, ಟೌನ್ ಹಾಲ್ ಮೂಲಕ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ವಕೀಲ ರಾಕೇಶ್ ಕಿಶೋರ್ ವಿರುದ್ಧ ಘೋಷಣೆ ಕೂಗಿದರು. ಹಲ್ಲೆ ನಡೆಸಲು ಮುಂದಾದ ವಕೀಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ನವೀನ್ ಪೂಜಾರಹಳ್ಳಿ ಮಾತನಾಡಿ ಸಿಜೆಐ ಅವರ ಮೇಲೆ ಶೂ ಎಸೆಯುವ ಪ್ರಯತ್ನ ಭಾರತದ ನ್ಯಾಯಾಂಗದ ಮೇಲೆ ನಡೆದ ದಾಳಿಯಾಗಿದೆ. ಭಾರತ ಸಂವಿಧಾನದ ಆಶಯಗಳನ್ನು ಗೌರವಿಸದ ಹಾಗೂ ಗಾಂಧಿಯನ್ನು ಕೊಂದ ಮತಾಂಧ ಮನಸ್ಥಿತಿಯೇ ಇಂದು ನ್ಯಾಯಾಧೀಶರ ಮೇಲೆ ಶೂ ಎಸೆಯುವ ಪ್ರಯತ್ನದ ಹಿಂದಿನ ಕೆಲಸ ಮಾಡಿದೆ. ಈ ದುಷ್ಕೃತ್ಯವನ್ನು ತುಮಕೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಖಂಡಿಸುತ್ತೆವೆ. ಶೂ ಎಸದವನನ್ನು ಬೆಂಬಲಿಸಿದ ಭಾಸ್ಕರ್ ರಾವ್ ಅವರ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗವಾಯಿ ಅವರ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು
ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002201217

ತುಮಕೂರು ವಿವಿ ಸಂಶೋಧನಾರ್ಥಿ ಗಂಗಾಧರ್ ಬಿ.ಎಂ ಬಾಣಸಂದ್ರಮಾತನಾಡಿ ದೇಶದ ಅಡಿಪಾಯವೇ ಸಂವಿಧಾನ. ಇಡೀ ಭಾರತ ಸಂವಿಧಾನ ಮುಖೇನವೇ ಜಾಗೃತವಾಗಬೇಕು. ಸನಾತನವಾದ, ಮನುವಾದವು ಎಂದಿಗೂ ಬಾಬಾಸಾಹೇಬರ ಸಂವಿಧಾನವನ್ನು ಒಪ್ಪುವುದಿಲ್ಲ. ಸನಾತನವಾದ ಎಂದಿಗೂ ಸಮಾನತೆಯನ್ನು ಬಯಸುವುದಿಲ್ಲ. ವಕೀಲ ರಾಕೇಶ್ ಕಿಶೋರ್ ಎಂಬ ಸನಾತನವಾದಿಯೊಬ್ಬ ಸಂವಿಧಾನಬದ್ಧವಾದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಸ್ಥಾನದಲ್ಲಿರುವ ಸಿಜೆಐ ಬಿ.ಆರ್ ಗವಾಯಿ ಅವರತ್ತ ಶೂ ಎಸೆಯುವ ಪ್ರಯತ್ನ ಗವಾಯಿಯವರಿಗಾದ ಅಪಮಾನವಷ್ಟೇ ಅಲ್ಲ. ಅದು ಈ ದೇಶದ ಕಾನೂನು, ಸಂವಿಧಾನ, ಎಲ್ಲ ಭಾರತೀಯರಿಗೇ ಆದ ಅಪಮಾನ. ಇಂತಹ ವಿಕೃತ ಮನಸ್ಥಿತಿಯುಳ್ಳ ರಾಕೇಶ್ ಕಿಶೋರ್ ಅವರನ್ನು, ಆತನ ನಡೆಯನ್ನು ಬೆಂಬಲಿಸುವವರನ್ನು ದೇಶದ್ರೋಹಿಗಳೆಂದು ಪರಿಗಣಿಸಿ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು

ಸುಪ್ರೀಂ ಕೋರ್ಟ್‌ನಲ್ಲಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಎಂಬುವರು ಶೂ ಎಸೆಯಲು ಮುಂದಾಗಿದ್ದು, ಅವರ ನಡೆ-ನುಡಿಯನ್ನು ತೀವ್ರವಾಗಿ ಖಂಡಿಸಿದರು.

ಸಂಶೋಧನಾ ರ್ಥಿಗಳಾದ ಮಾರುತೇಶ ಕಸಾಪುರ, ರಾಹುಲ್,ಮಂಜುನಾಥ್, ಮಲ್ಲಿಕಾರ್ಜುನ ,ಹರೀಶ್,ಮಾರುತೇಶ್, ನವೀನ್ ಪೊನ್ನ ಸಮುದ್ರ, ಸುರೇಶ್, ರಮೇಶ್,ಅನಿಲ್ ಕುಮಾರ್ ,ನಾಗೇಂದ್ರ,ಧರ್ಮಣ್ಣ, ಧನುಷ್, ನಾಗೇಂದ್ರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...