ತುಮಕೂರು | ಔಟರ್ ರಿಂಗ್ ರೋಡ್ ವಿರೋಧಿಸಿ ಅ. 4 ರಿಂದ ಜಾಗೃತಿ ಜಾಥಾ

Date:

ತುಮಕೂರಿನ ಔಟರ್ ರಿಂಗ್ ರೋಡ್ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕಬಳಿಸಲು ಹುನ್ನಾರ ನಡೆಸಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ,ಅಕ್ಟೋಬರ್ 04ರಿಂದ 06ರವರೆಗೆ ಯೋಜನೆಯಿಂದ ಬಾಧಿತ ಪ್ರದೇಶಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ,ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ಬೈಪಾಸ್ ರಸ್ತೆ ವಿರೋಧಿ ಹೋರಾಟ ಸಮಿತಿ ತಿಳಿಸಿದೆ.

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಸಮಿತಿಯ ಮುಖಂಡರಾದ ಸಂಯುಕ್ತ ಹೋರಾಟ-ಕರ್ನಾಟಕ ಸಂಚಾಲಕ ಸಿ.ಯತಿರಾಜು, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು,ಎಐಕೆಕೆಎಂಎಸ್‌ನ ಎಸ್.ಎನ್.ಸ್ವಾಮಿ, ಎಸ್.ಕೆ.ಎಂ.ಸಂಯೋಜಕರಾದ ಬಿ.ಉಮೇಶ್,ಎಐಕೆಎಸ್‌ನ ಕಂಬೇಗೌಡ,ಕೆಪಿಆರ್‌ಎಸ್‌ನ ಅಜ್ಜಪ್ಪ,ರಮೇಶ್ ಭೈರಸಂದ್ರ, ಸಿದ್ದಗಂಗಮ್ಮ,ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ಹಾಗೂ ಬಾಧಿತ ಹಳ್ಳಿಗಳ ರೈತರು,ಜಿಲ್ಲಾಡಳಿತ ಭೂಸ್ವಾಧೀನ ಕಾಯ್ದೆ-2013ನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ.ರೈತರ ಒಪ್ಪಿಗೆಯಿಲ್ಲದೆ ಇದ್ದರೂ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ ಎಂದು ಆರೋಪಿಸಿದರು.

ಸಂಯುಕ್ತ ಹೋರಾಟ-ಕರ್ನಾಟಕದ ಸಿ.ಯತಿರಾಜು ಮಾತನಾಡಿ,ಸರಕಾರ ಹೊಸ ಯೋಜನೆಯ ಹೆಸರಿನಲ್ಲಿ ರೈತರ ಫಲವತ್ತಾ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ.ಇದರಿಂದ 750ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬೀಳಲಿವೆ.ಅಲ್ಲದೆ ಸರಕಾರ ಯೋಜನೆಯ ಸಾಧಕ ಭಾಧಕಗಳ ಕುರಿತು ರೈತರೊಂದಿಗೆ ಚರ್ಚೆ ನಡೆಸದೆ, ದಬ್ಬಾಳಿಕೆ ನಡೆಸಲು ಮುಂದಾಗಿದೆ. ಸರಕಾರ ಕೂಡಲೇ ಯೋಜನೆಯಿಂದ ಹಿಂದೆ ಸರಿಯಬೇಕು. ಅಧಿಸೂಚನೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ,ಪ್ರಸ್ತಾಪಿತ ನಂದಿಹಳ್ಳಿ, ಮಲ್ಲಸಂದ್ರ, ವಸಂತ ನರಸಾಪುರ ಔಟರ್‌ರಿಂಗ್ ರೋಡ್‌ಗೆ 44 ಹಳ್ಳಿಗಳ ಸುಮಾರು 650 ಎಕರೆ ಫಲವತ್ತಾದ ಭೂಮಿಯ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆಯನ್ನು ರೈತರ ಒಪ್ಪಿಗೆ ಇಲ್ಲದೆ, ರೈತರೊಂದಿಗೆ ಮಾತುಕತೆ ನಡೆಸದೆ ಹೊರಡಿಸಲಾಗಿದೆ. ಇದರಲ್ಲಿ ಸುಮಾರು 750 ಕುಟುಂಬಗಳು ಹಣ್ಣ, ತರಕಾರಿ, ಹೂವು ಬೆಳೆಯುವುದರ ಜೊತೆಗೆ,ಅಡಿಕೆ,ತೆಂಗು ಇನ್ನಿತರ ತೋಟಗಾರಿಕಾ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿದ್ದಾರೆ.ಸರಕಾರ ಯೋಜನೆಯ ಸೋಷಿಯಲ್ ಇಪ್ಯಾಕ್ಟ್ ಬಗ್ಗೆ ಸರ್ವೆ ನಡೆಸದೆ ಭೂಸ್ವಾಧೀನಕ್ಕೆ ಮುಂದಾಗಿದೆ.ಹಾಗಾಗಿ ಸರಕಾರ ಯೋಜನೆಯನ್ನು ಕೈಬಿಡಬೇಕು.ಇದಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬರ್ 04 ರಿಂದ 06ರವರೆಗೆ ಜಾಗೃತಿ ಜಾಥಾ ಕೈಗೊಳ್ಳಲಾಗಿದೆ.ಅಲ್ಲದೆ ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಔಟರ್ ರಿಂಗ್ ರಸ್ತೆಯ ಬಾಧಿತ ಗ್ರಾಮಗಳ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.

ಸರಕಾರ ಪ್ರಾಸ್ತಾಪಿತ ನಂದಿಹಳ್ಳಿ, ಮಲ್ಲಸಂದ್ರ, ವಸಂತನರಸಾಪುರ ಔಟರ್ ರಿಂಗ್‌ರಸ್ತೆಗೆ ಭೂ ಸ್ವಾಧೀನ ವಿರೋಧಿಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ.ಅಲ್ಲದೆ ಈಗಾಗಲೇ ಇರುವ ರಸ್ತೆಗಳನ್ನೇ ವಿಸ್ತರಿಸಿ, ಉಪಯೋಗಿಸುವಂತೆ ಹೊಸ ಪ್ರಸ್ತಾಪ ಕೈಬಿಡುವಂತೆ ಅಕ್ಷಪಣೆ ನೀಡಿದ್ದೇವೆ.ಅಲ್ಲದೆ ದಾಬಸ್‌ಪೇಟೆಯಿಂದ ಗುಬ್ಬಿಯವರೆಗೆ ಸುಮಾರು 120 ಅಡಿ ಅಗಲದ ನಕಾಸೆ ರಸ್ತೆಯಿದ್ದು,ಆ ರಸ್ತೆಯನ್ನು ಔಟರ್ ರಿಂಗ್ ರಸ್ತೆಗೆ ಬಳಸುವಂತೆ ಮನವಿ ಮಾಡಲಾಗಿತ್ತು. ಈಲ್ಲಾಧಿಕಾರಿಗಳು ಸ್ಥಳಪರಿಶೀಲನೆ ನಡೆಸುವ ಭರವಸೆ ನೀಡಿದ್ದರು.ಆದರೆ ಇದುವರೆಗೂ ಜಿಲ್ಲಾಧಿಕಾರಿಗಳು ಈ ಕುರಿತು ರೈತರೊಂದಿಗೆ ಮಾತನಾಡಿಲ್ಲ.ಹಾಗಾಗಿ ಮತ್ತೊಮ್ಮೆ ಜಿಲ್ಲಾಡಳಿತದ ಗಮನ ಸೆಳೆಯುವ ಸಲುವಾಗಿ ಅಕ್ಟೋಬರ್ 13 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎ.ಗೋವಿಂದರಾಜು ನುಡಿದರು.

ಎಐಕೆಕೆಎಂಎಸ್‌ನ ಎಸ್.ಎನ್.ಸ್ವಾಮಿ ಮಾತನಾಡಿ,2013ರ ಭೂಸ್ವಾಧೀನ ಕಾಯ್ದೆ ಪ್ರಕಾರ ಯೋಜನಾ ವ್ಯಾಪ್ತಿಗೆ ಒಳಪಡುವ ಶೇ70ರಷ್ಟು ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಮಾಡುವಂತಿಲ್ಲ.ಈ ಯೋಜನೆಯಿಂದ ತುಮಕೂರು ನಗರ ಸೇರಿದಂತೆ ಜಿಲ್ಲೆಗೆ ಆಹಾರದ ಅಭದ್ರತೆ ಉಂಟಾಗಲಿದೆ.ಹಾಗಾಗಿ ಶಾಶಕರು, ಸಂಸದರು, ಮಂತ್ರಿಗಳು ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...