ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

Date:

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಕೆರೆಯ ಒತ್ತುವರಿ ತೆರವು ಮಾಡಿ ಕೆರೆಯನ್ನು ಕೆರೆಯನ್ನಾಗಿಯೇ ಉಳಿಸಬೇಕು ಎಂದು ಬೈಚೇನಹಳ್ಳಿ ಗ್ರಾಮಸ್ಥರು ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ಮನವಿ ಸಲ್ಲಿಸಿದರು.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕಚೇರಿಗೆ ಗ್ರಾಮಸ್ಥರು ಆಗಮಿಸಿದ್ದು, ಸ್ಥಳೀಯ ಮಂಜುನಾಥ್ ಎಂಬುವವರು ಮಾತನಾಡಿ, “ಬೈಚೇನಹಳ್ಳಿ ಗ್ರಾಮದಲ್ಲಿ 18 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿರುವ ಕೆರೆ ಇದ್ದು, ಕೆರೆಯ ಸುತ್ತಲಿನ ರೈತರ ಪೈಕಿ ಕೆಲವರು ಕೆರೆಯಂಚಿನಲ್ಲಿ ಮಣ್ಣು ಹಾಕಿಕೊಂಡು ಎತ್ತರ ಪ್ರದೇಶ ಮಾಡಿಕೊಂಡು ಕೆರೆಯ ಜಾಗವನ್ನು ಒತ್ತುವರಿ ಮಾಡಲು ಆರಂಭಿಸಿದ್ದಾರೆ. ಕೆರೆಯ ಮುಳುಗಡೆ ಪ್ರದೇಶದಲ್ಲಿದ್ದ ರೈತರಿಗೆ ಈಗಾಗಲೇ ಸರ್ವೇ ನಂಬರ್ 52 ರಲ್ಲಿ 12.32 ಎಕರೆ ಪರ್ಯಾಯ ಜಮೀನು ಸರ್ಕಾರ ನೀಡಿದೆ. ಆದರೆ ಕೆರೆಯಲ್ಲಿ ನೀರಿಲ್ಲ ಎಂಬ ನೆಪದಲ್ಲಿ ಈ ಜಮೀನು ಸಹ ನಮ್ಮದು ಎಂದು ಕೆರೆಯ ಹಳ್ಳದ ಜಾಗವನ್ನು ಮಣ್ಣು ತುಂಬಿ ಕಬಳಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಕೆರೆಯಲ್ಲಿ ನೀರು ಇದ್ದರೆ ಇಲ್ಲಿನ ರೈತರ ಕೊಳವೆಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ. ಈ ಬಗ್ಗೆ ತಿಳಿದೂ ಸಹ ಕೆರೆಯನ್ನೇ ಒತ್ತುವರಿ ಮಾಡಲಾಗುತ್ತಿದೆ. ಕೆರೆಯನ್ನು ಚಿಕ್ಕದಾಗಿಸುತ್ತಾ ಹೋದಲ್ಲಿ ಮುಂದಿನ ಪೀಳಿಗೆಗೆ ಈ ಕೆರೆಯೇ ಇಲ್ಲವಾಗುತ್ತದೆ. ಈ ಕಬಳಿಕೆ ಮಾಡುವವರ ಜಮೀನಿನಲ್ಲಿನ ಕೊಳವೆ ಬಾವಿಯಲ್ಲಿ ಸಹ ನೀರು ಇಲ್ಲವಾಗುತ್ತಿದೆ. ಈ ಬಗ್ಗೆ ತಿಳಿದಿದ್ದರೂ ಕೂಡ ಎಲ್ಲರಿಗೂ ತೊಂದರೆ ಕೊಡುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸಿ ಕೂಡಲೇ ಕೆರೆಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು” ಎಂದು ಸ್ಥಳೀಯ ಗಂಗರಾಜ್ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಭಾರೀ ಬಿಸಿಲು ಎದುರಾಗಿದೆ. ನಾಲ್ಕು ತಿಂಗಳ ಬೇಸಿಗೆ ರೈತರನ್ನು ಕಂಗೆಡಿಸುತ್ತಿರುವ ಈ ಸಮಯದಲ್ಲಿ ಇರುವ ಕೆರೆಯ ಜಾಗವನ್ನು ಕಬಳಿಸಿದರೆ ರೈತರ ಉಳಿವಿಲ್ಲ. ರೈತರ ಜೀವನಾಡಿ ಕೆರೆಯನ್ನು ಮತ್ತೊಬ್ಬ ರೈತನೇ ಒತ್ತುವರಿ ಮಾಡಿದರೆ ಯಾರಿಗೆ ನಮ್ಮ ಕಷ್ಟ ಹೇಳುವುದು ಎನ್ನಿಸುತ್ತಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಕೆರೆಯ ಅಳತೆ ನಡೆಸಿ ಉಳಿಸಿಕೊಡಬೇಕು” ಎಂದು ಸ್ಥಳೀಯ ಮರುಳಪ್ಪ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕ ಉದ್ಘಾಟನೆ

ಈ ಸಂದರ್ಭದಲ್ಲಿ ಬೈಚೇನಹಳ್ಳಿ ಗ್ರಾಮಸ್ಥರಾದ ಪುಟ್ಟಗಂಗಯ್ಯ, ಕೃಷ್ಣಪ್ಪ, ರಾಮಚಂದ್ರಯ್ಯ, ರಂಗಯ್ಯ, ಕುಮಾರ್, ಆನಂದ್, ವಿಶ್ವನಾಥ್, ಪ್ರಸನ್ನ, ರಮೇಶ್, ಶಂಕರ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...