ತುಮಕೂರು | ರಾಷ್ಟ್ರೀಯ ಭಾಷಾ ಮತ್ತು ಉದ್ಯೋಗ ನೀತಿ ರಚನೆಗೆ ಬರಗೂರು ರಾಮಚಂದ್ರಪ್ಪ ಒತ್ತಾಯ

Date:

ರಾಷ್ಟ್ರದ ಎಲ್ಲಾ ರಾಜ್ಯಗಳ ಭಾಷೆಗಳು ಸಮಾನವೆನ್ನಲು ರಾಷ್ಟ್ರೀಯ ಭಾಷಾ ನೀತಿ ರಚನೆಯಾಗಬೇಕೆಂಬ ಹೋರಾಟ ನಮ್ಮದು ಎಂದು ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು. 

ತುಮಕೂರು ಜಿಲ್ಲಾಡಳಿತ ವತಿಯಿಂದ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿ ಕುರಿತು ಶುಕ್ರವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, 

 ಹಿಂದಿ ಭಾಷೆಗೆ ದೊರೆಯುತ್ತಿರುವ ವಿಶೇಷ ಪ್ರಾಶಸ್ತ್ಯ ಇತರೆ ಭಾಷೆಗಳಿಗೆ ಸಿಗದಿರುವುದು ವಿಪರ್ಯಾಸ. ಹಿಂದಿ ಭಾಷೆ ರಾಷ್ಟ್ರ ಭಾಷೆಯಲ್ಲ. ಹಿಂದಿಯಂತೆ ಕನ್ನಡಕ್ಕೂ ಪ್ರಾಶಸ್ತ್ಯ ದೊರೆಯಬೇಕು. ಕನ್ನಡಕಷ್ಟೆ ಅಲ್ಲದೆ, ದೇಶದ ಇತರೆ ರಾಜ್ಯಗಳ ಭಾಷೆಗಳಿಗೂ ಪ್ರಾಶಸ್ತ್ಯ ದೊರೆಯಬೇಕೆಂದು ನಮ್ಮ ಆಗ್ರಹವಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರೆಯಬೇಕು. ಇದಕ್ಕಾಗಿ ರಾಷ್ಟ್ರೀಯ ಉದ್ಯೋಗ ನೀತಿ ರಚನೆಯಾಗಬೇಕೆಂಬ ಹಕ್ಕೊತ್ತಾಯ ನಮ್ಮದು. ಇಲ್ಲದೆ ಹೋದರೆ ಎಲ್ಲ ರಾಜ್ಯ ಭಾಷೆಗಳು 2ನೇ ಹಾಗೂ 3ನೇ ದರ್ಜೆಯಲ್ಲಿಯೇ ಉಳಿಯಬೇಕಾದ ದುಸ್ಥಿತಿಗೆ ತಲುಪಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. 

ಕನ್ನಡಕ್ಕೆ 2008ರ ನವೆಂಬರ್ 1ರಂದು ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೂ ಸಹ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲು ಕರ್ನಾಟಕಕ್ಕೆ ಈವರೆಗೂ ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ತಮಿಳು ನಾಡಿನಲ್ಲಿ ಇಂತಹದೊಂದು ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಕೇಂದ್ರದ ಮಾನವ ಸಂಪನ್ಮೂಲ ಇಲಾಖೆಯಿಂದ ಅನುಮತಿ ಪಡೆದು ಕನ್ನಡದ ಪ್ರತ್ಯೇಕ ಶಾಸ್ತ್ರೀಯ

ಭಾಷಾ ಸಂಸ್ಥೆ ಸ್ಥಾಪನೆಗೆ ಮುಂದಾಗಬೇಕೆಂದು ಗೃಹ ಸಚಿವರಲ್ಲಿ ಅವರು ಮನವಿ ಮಾಡಿದರಲ್ಲದೆ ಪ್ರತ್ಯೇಕ ಶಾಸ್ತ್ರೀಯ ಭಾಷಾ ಸಂಸ್ಥೆ ಸ್ಥಾಪನೆಯಿಂದ ರಾಜ್ಯ ಭಾಷೆಗಳು ಮತ್ತಷ್ಟು ಬಲಗೊಳ್ಳಲು ಸಾಧ್ಯವೆಂದು ತಿಳಿಸಿದರು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...