ತುಮಕೂರು | ಬೆಳಧರ ಸರ್ಕಾರಿ ಶಾಲೆ ಆಟದ ಮೈದಾನ ವಶ; ತಪ್ಪಿತಸ್ಥರ ವಿರುದ್ಧ ಲೋಕಾಯುಕ್ತಕ್ಕೆ ಅರ್ಜಿ 

Date:

ಬೆಳಧರ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆ ಆಟದ ಮೈದಾನದ ಸುತ್ತ ಹಾಕಿರುವ ಬೇಲಿ ಮತ್ತು ಗಿಡಗಳನ್ನು ಧ್ವಂಸಗೊಳಿಸಿ ವಶಕ್ಕೆ ಪಡೆಯಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೈದಾನ ವಶಕ್ಕೆ ಪಡೆಯಲು ಯತ್ನಿಸಿದವರು ಯಾವ ಕ್ರಮವನ್ನೂ ತೆಗೆದುದೊಳ್ಳದ ತುಮಕೂರು ತಾಲೂಕು ಶಿಕ್ಷಣಾಧಿಕಾರಿ, ತಹಶೀಲ್ದಾರ್ ಮತ್ತು ಕೋರ ಪೊಲೀಸ್ ಠಾಣೆಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನೈಜ ಹೋರಾಗರರ ವೇದಿಕೆ ಮುಖಂಡರು ಕರ್ನಾಟಕ ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಎಚ್ ಎಂ ವೆಂಕಟೇಶ್ ಅವರು ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದು, “ತುಮಕೂರು ತಾಲೂಕು ಕೊರಟಗೆರೆ ತಾಲೂಕಿನ ಬೆಳೆಧರ ಗ್ರಾಮದ ಹಿರಿಯ ಪ್ರಾರ್ಥಮಿಕ ಪಾಠಶಾಲೆಯ ಆಟದ ಮೈದಾನದ ಸುತ್ತ ಹಾಕಿರುವ (ಪೆನ್ಸಿಂಗ್) ಬೇಲಿಯನ್ನು ಮತ್ತು ನೆಟ್ಟಿರುವ ಗಿಡಗಳನ್ನು ಧ್ವಂಸಗೊಳಿಸಿ ಸರ್ಕಾರಿ ಶಾಲೆಯ ಆಟದ ಮೈದಾನವನ್ನು ಕಬ್ಜಾ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು ತಾಲೂಕು ಶಿಕ್ಷಣಾಧಿಕಾರಿ, ತಹಶೀಲ್ದಾರ್, ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು ಈವರೆಗೂ ತಪ್ಪಿತಸ್ಥರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳದಿರುವುದರಿಂದ, ನೈಜ ಹೋರಾಟಗಾರರಿಂದ ಬಂದಿರುವ ಮನವಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಬೇಕು” ಎಂದು ಉಲ್ಲೇಖಿಸಿದ್ದಾರೆ.

WhatsApp Image 2024 02 20 at 5.53.27 PM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಶಾಲೆಯ ಸ್ವತ್ತುಗಳ ರಕ್ಷಣೆ ಮಾಡಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆತರುವ ಅಭಿಯಾನವನ್ನು ಮಾಡಬೇಕೆಂದು ಶಿಕ್ಷಣ ಇಲಾಖೆ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಸಮರ್ಪಕ ಕಾರ್ಯ ನಿರ್ವಹಿಸಬೇಕು. ಬಹುಶಃ 1976ರಲ್ಲಿ ಬೆಳೆಧರ ಹಿರಿಯ ಪ್ರಾರ್ಥಮಿಕ ಪಾಠಶಾಲೆಗೆ ಆಟದ ಮೈದಾನವನ್ನು ಸರ್ಕಾರ ಮಂಜೂರು ಮಾಡಿದ್ದು, ಈವರೆಗೂ ಅಧಿಕಾರಿಗಳು ಅದಕ್ಕೆ ಕಾಂಪೌಂಡ್ ಹಾಕಿ ರಕ್ಷಣೆ ಮಾಡದೇ ಇರುವುದರಿಂದ ತುಮಕೂರಿನ ಕಾಳಜಿ ಫೌಂಡೇಶನ್ ಹೋರಾಟಗಾರರು ಪರಿಶ್ರಮದಿಂದ ಕೋರ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಎಸ್‌ಡಿಎಂಸಿ ಸದಸ್ಯರೊಂದಿಗೆ ಮುಳ್ಳು ತಂತಿ ಬೇಲಿಯನ್ನು ಆಟದ ಮೈದಾನದ ಸುತ್ತ ನಿರ್ಮಿಸಿ ಗಿಡಗಳನ್ನು ನೆಟ್ಟಿದ್ದರು.
ಆದರೆ ಈ ಆಟದ ಮೈದಾನವನ್ನು ಕಬ್ಜಾ ಮಾಡುವ ಉದ್ದೇಶದಿಂದ ರಾತ್ರೋರಾತ್ರಿ ಬುಲ್ಡೋಜರ್‌ಗಳನ್ನು ತಂದು ಬೇಲಿ ಮತ್ತು ಗಿಡಗಳನ್ನು ದ್ವಂಸ ಮಾಡಿದ್ದಾರೆ. ಇಂತಹವರ ವಿರುದ್ಧ ಶಿಕ್ಷಣ ಇಲಾಖೆಯ ಬಿಇೊ, ತುಮಕೂರು ತಹಶೀಲ್ದಾರ್, ಕೋರ ಪೊಲೀಸ್ ಠಾಣೆ ಅಧಿಕಾರಿಗಳು ಧ್ವಂಸಗೊಳಿಸಿದವರ ಮೇಲೆ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸಿಲ್ಲ. ಇದರಿಂದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪರೀಕ್ಷಾ ಹಂತದಲ್ಲಿ ತುಂಬಾ ತೊಂದರೆ ಉಂಟಾಗಿದೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

“ಸರ್ಕಾರಿ ಶಾಲೆಯ ಆಟದ ಮೈದಾನವನ್ನು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸದುಪಯೋಗ ಮಾಡಿಸಿಕೊಳ್ಳುವಲ್ಲಿ ಮುಖ್ಯ ಪಾತ್ರ ವಹಿಸಬೇಕಾಗಿದ್ದ ಅಧಿಕಾರಿಗಳು ನಿಸ್ಸಹಾಯಕರಂತೆ ಕಾಣುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ವಜ್ಞನ ತ್ರಿಪದಿಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪ : ಶಿವಕುಮಾರ ಶೀಲವಂತ

“ಆಟದ ಮೈದಾನವನ್ನು ವಶಪಡಿಸಿಕೊಳ್ಳಲು ಪಟ್ಟಭದ್ರ ಹಿತಾಸಕ್ತಿಗಳು ಬುಲ್ಡೋಜರ್‌ಗಳನ್ನು ತೆಗೆದುಕೊಂಡು ಬಂದು ಕಬ್ಜಾ ಮಾಡುತ್ತಿರುವವರ ವಿರುದ್ಧ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸದೆ ಕೋರ ಪೊಲೀಸ್ ಠಾಣೆಯ ಅಧಿಕಾರಿಗಳು, ತುಮಕೂರು ತಹಶೀಲ್ದಾರ್ ಮತ್ತು ತಾಲೂಕು ಶಿಕ್ಷಣಾಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ” ಎಂದು ಆರೋಪಿಸಿದರು.

“ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ತಾವುಗಳು ಸದರಿ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...