ತುಮಕೂರು | ಅಂಬೇಡ್ಕರ್ ಮತ್ತು ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಭೂಮಿ ಪೂಜೆ

Date:

ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ. ಹೋರಾಟಗಳಲ್ಲಿ ನಾವು ಸತ್ತರೆ ನಮ್ಮ ಮುಂದಿನ ಪೀಳಿಗೆ ಕನಸುಗಳನ್ನು ಸಾಕಾರಗೊಳಿಸಲಿದೆ ಎಂಬ ನಂಬಿಕೆ ನಮಗಿದೆ ಎಂದು ಮುಖಂಡರಾದ ಹೆತ್ತೇನಹಳ್ಳಿ ಮಂಜುನಾಥ್ ಅವರು ತಿಳಿಸಿದರು.

ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕಂಚಿನ ಪುತ್ಥಳಿ ನಿರ್ಮಾಣದ ಭೂಮಿ ಪೂಜೆಯನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಜುನಾಥ್, ಸಮ ಸಮಾಜಕ್ಕಾಗಿ ನಮ್ಮ ರಕ್ತದ ಕಣಕಣವೂ ಮಿಡಿಯುತ್ತಿದೆ. ಈ ನಾಡಿನ ಜನರಿಗಾಗಿ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧರಿದ್ದೇವೆ. ನಾವೆಲ್ಲರೂ ಜಾತಿ ಭೇದಗಳನ್ನು ಮರೆತು ಪರಸ್ಪರ ಕೈ ಹಿಡಿದು ಬದುಕೋಣ ಎಂದು ಸಾರಿದರು.

1000962647

ನಾವೆಲ್ಲಾ ಒಂದಾದಾಗ ಮಾತ್ರ ಈ ಸಾಮಾಜಿಕ ವ್ಯವಸ್ಥೆ ಸರಿಹೋಗುತ್ತದೆ. ಅಂಬೇಡ್ಕರ್ ಭಾರತದ ಕಣ್ತೆರೆಸಿದರು. ಆದರೆ, ಶ್ರೀವಾಲ್ಮೀಕಿ ಬದುಕಿನ ಮೌಲ್ಯಗಳನ್ನು ತಿಳಿಸಿಕೊಟ್ಟರು. ಇಂತಹ ದಾರ್ಶನಿಕರ ಮಾರ್ಗದರ್ಶನದಲ್ಲಿ ನಡೆಯಬೇಕು. ಆಗ ನಮ್ಮ ನಿಮ್ಮ ಬದುಕು ಸುಂದರವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಬಾ ಸಾಹೇಬ್ ಮತ್ತು ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣದ ಭೂಮಿ ಪೂಜೆಗೆ ಅಡೆತಡೆಗಳು ಎದುರಾದವು. ಈ ಅಡೆತಡೆಗಳ ಹಿಂದೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಪಿಎಸ್‌ಐ ಭೈರೇಗೌಡ ಇದ್ದಾರೆ. ಅವೆಲ್ಲವುಗಳನ್ನು ಮೀರಿ ನಾವು ಪುತ್ಥಳಿ ನಿರ್ಮಾಣ ಮಾಡಲಿದ್ದೇವೆ ಎಂದು ಸವಾಲು ಎಸೆದರು.

ನಮ್ಮ ಮನೆಗಳನ್ನು ಮಾರಿಯಾದರೂ ಆದರ್ಶಗಳನ್ನು ಉಳಿಸಿಕೊಳ್ಳುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮಿಂದ ಇದು ಸಾಧ್ಯವಾಗದಿದ್ದರೆ ನಮ್ಮ ಮಕ್ಕಳು ಮುಂದುವರೆಸುತ್ತಾರೆ. ನಾವು ಯಾರ ಕಟ್ಟಿಗೂ ಬಗ್ಗುವವರಲ್ಲ. ಇಲ್ಲಿ ಸೇರಿರುವವರು ಅಂಬೇಡ್ಕರ್ ಮತ್ತು ವಾಲ್ಮೀಕಿ ರಕ್ತದ ಕುಡಿಗಳು ಎಂದು ವಿರೋಧಿಗಳಿಗೆ ತೊಡೆತಟ್ಟಿ ಎಚ್ಚರಿಕೆ ನೀಡಿದರು.

ಪಾಲನಹಳ್ಳಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಸಿದ್ದರಾಜು ಸ್ವಾಮೀಜಿ, ಶಿಡ್ಲೆಕೋಣದ ಶ್ರೀ ವಾಲ್ಮೀಕಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಸಂಜಯಕುಮಾರನಂದ ಸ್ವಾಮೀಜಿ, ಕುಣಿಗಲ್‌ನ ಅರೇ ಶಂಕರ ಮಠದ ಪೀಠಾಧ್ಯಕ್ಷರಾದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಚಿಕ್ಕಣ್ಣ ಹಟ್ಟಿ ಕ್ಷೇತ್ರದ ಧರ್ಮದರ್ಶಿ ಶ್ರೀ ಪಾಪಣ್ಣ ಸ್ವಾಮೀಜಿ, ಇಸ್ಲಾಂ ಧರ್ಮಗುರುಗಳು ಹಾಗೂ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಪುತ್ಥಳಿ ನಿರ್ಮಾಣದ ಭೂಮಿ ಪೂಜೆ ನೆರವೇರಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...