ತುಮಕೂರು | ಬಿಜೆಪಿ-ಜೆಡಿಎಸ್‌ ಮೈತ್ರಿ ಸಭೆ: ಕಾರ್ಯಕರ್ತರು ಹೊರಹೋಗದಂತೆ ಪ್ರವೇಶದ್ವಾರಕ್ಕೆ ಬೀಗ!

Date:

  • ಬೀಗ ಮುರಿಯಲೆತ್ನಿಸಿದ ಕಾರ್ಯಕರ್ತರು
  • ಜೆಡಿಎಸ್ ಕಚೇರಿ ಆವರಣದಲ್ಲಿ ನಡೆಯುತ್ತಿದ್ದ ಸಭೆ

ತುಮಕೂರು ನಗರದ ಜಿಲ್ಲಾ ಜೆಡಿಎಸ್ ಕಚೇರಿ ಆವರಣದಲ್ಲಿ ಬುಧವಾರ ಬಿಜೆಪಿ ಮತ್ತು ಜೆಡಿಎಸ್ ಮೖತ್ರಿಪಕ್ಷಗಳ ಸಮನ್ವಯ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಸಭೆಗೆ ಬಂದಿದ್ದ ಎರಡೂ ಪಕ್ಷಗಳ ಕಾರ್ಯಕರ್ತರು ಎದ್ದು ಹೋಗುವುದನ್ನು ತಡೆಯಲು, ಸಭೆಯ ಮುಖ್ಯ ದ್ವಾರಕ್ಕೆ ಬೀಗ ಹಾಕಿ, ಕೂಡಿಟ್ಟ ಘಟನೆ ನಡೆದಿದೆ.

ಗೇಟ್‌ಗೆ ಬೀಗ ಹಾಕಿದ್ದರಿಂದ ಕಾರ್ಯಕರ್ತರು ಹೊರಗಡೆ ಹೋಗಲು, ಒಳಗಡೆ ಬರಲು ಪರದಾಡಿದರು. ಮಹಿಳೆಯೊಬ್ಬರು ಬ್ಯಾಂಕ್‌ಗೆ ತೆರಳಬೇಕು, ಸಮಯ ಆಗುತ್ತಿದೆ. ಗೇಟ್ ಬೀಗ ತೆಗೆಯುವಂತೆ ಜೋರಾದ ಧ್ವನಿಯಲ್ಲಿ ಪ್ರವೇಶದ್ವಾರದ ಬಳಿ ಕಾಯುತ್ತಿದ್ದ ಮುಖಂಡರ ಬಳಿ ಹೇಳುತ್ತಿರುವುದು ಕೂಡ ಕಂಡುಬಂತು. ಮಹಿಳೆಯ ಜೊತೆಗೆ ಹಲವು ಕಾರ್ಯಕರ್ತರು ಕೂಡ ಹೊರ ಹೋಗಲು ಕಾಯುತ್ತಿದ್ದರು. ಆದರೆ ‘ಗೇಟ್ ಪಾಲಕ’ ಅವಕಾಶ ನೀಡಲಿಲ್ಲ. ಅಲ್ಲೇ ಇದ್ದ ಕೆಲ ಮಾಧ್ಯಮದ ಮಂದಿ, ಬೀಗ ಯಾಕೆ ಹಾಕುತ್ತಿದ್ದೀರಿ ಎಂದು ”ಗೇಟ್ ಪಾಲಕ’ರ ಬಳಿ ಕೇಳಿದಾಗ, “ಬೀಗ ಹಾಕಿಲ್ಲ. ಗೇಟಿಗೆ ಯಡಿಯೂರಪ್ಪನವರ ಫ್ಲೆಕ್ಸ್ ಅಂಟಿಸಿದ್ದು ಕಾಣಲಿ ಎಂದು ಬಂದ್ ಮಾಡಿದ್ದಷ್ಟೇ” ಎಂದು ಸಮಜಾಯಿಷಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊರಗಡೆ ಹೋಗದಂತೆ ತಡೆಯಲು ಬೀಗ ಹಾಕಿಕೊಂಡು ಹೋಗಿದ್ದರಿಂದ ತುರುವೇಕೆರೆ ಬಿಜೆಪಿ ಮಾಜಿ ಶಾಸಕ ಮಸಾಲೆ ಜಯರಾಮ್ ಮತ್ತು ಗುಬ್ಬಿ ಜೆಡಿಎಸ್ ಪಕ್ಷದ ಮುಖಂಡ ಬಿ. ಎಸ್. ನಾಗರಾಜು ಅವರು ಅಲ್ಪ ಹೊತ್ತು ಕಾದರು. ನಂತರ ತುರುವೇಕೆರೆ ಮಾಜಿ ಶಾಸಕ ಮಸಾಲೆ ಜಯರಾಮ್ ಬೀಗ ಒಡೆಯುವಂತೆ ಕಾರ್ಯಕರ್ತರಿಗೆ ಹೇಳಿದರು. ಅಷ್ಟೊತ್ತಿಗೆ ಜೆಡಿಎಸ್ ಮುಖಂಡರೊಬ್ಬರು ಬಂದು ಬೀಗ ತೆಗೆದರು. ಆ ಬಳಿಕ ಮುಖಂಡರೊಬ್ಬರು ಗೇಟ್ ಬಳಿಯೇ ನಿಂತು ಸಭೆಯಿಂದ ಹೊರಗಡೆ ಹೋಗುತ್ತಿದ್ದವರನ್ನು ತಡೆದು, ಮತ್ತೆ ಒಳಗೆ ಕಳಿಸುತ್ತಿದ್ದ ದೃಶ್ಯ ಕಂಡು ಬಂತು.

bjp jds tumkur

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದಾಗಿ ಕೆಲ ನಾಯಕರಲ್ಲಿ ಅಸಮಾಧಾನವಿತ್ತು. ರಾಜ್ಯದ ಹಲವೆಡೆ ನಡೆಯುತ್ತಿರುವ ಮೈತ್ರಿ ಸಭೆಯಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗುತ್ತಿರುವ ಸುದ್ದಿಗಳು ವರದಿಯಾಗುತ್ತಿದೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಕಳೆದ  ಸೋಮವಾರ ನಡೆದ ಸಭೆಯಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ಕೂಡ ನಡೆದಿದ್ದು. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಇದ್ದ ಸಭೆಯಲ್ಲೇ ಈ ಮಾತಿನ ಚಕಮಕಿ ಉಂಟಾಗಿ, ಇದೇ ವೇಳೆ ತಳ್ಳಾಟ-ನೂಕಾಟ ಕೂಡ ನಡೆದಿತ್ತು.

ವರದಿ: ಚಂದನ್, ತುಮಕೂರು

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...