ತುಮಕೂರು | ಒಳ ಮೀಸಲಾತಿ ಜಾರಿ ಮಾಡದ ಬಿಜೆಪಿ ಸೋಲಿಸಲು ಮಾದಿಗ ಸಮುದಾಯಕ್ಕೆ ಕರೆ ಕೊಟ್ಟ ಅಂಬಣ್ಣ ಅರೋಲಿಕರ್

Date:

30 ವರ್ಷಗಳ ಸುದೀರ್ಘವಾದ ಒಳಮೀಸಲಾತಿ ಹೋರಾಟಕ್ಕೆ ಮಣಿದ ಕಾಂಗ್ರೆಸ್‌ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿದ್ದಂತೆ ಬಿಜೆಪಿ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿ ಮಾಡುತ್ತದೆ ಎಂದು ನಾವು ಭಾವಿಸಿದ್ದೆವು, ಆದರೆ ಮಾಡದೆ ಮೋಸ ಮಾಡಿತು ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್  ಹೇಳಿದರು.

ತುಮಕೂರಿನ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ನಡೆದ ದಲಿತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಆಶ್ವಾಸನೆ ನೀಡಿದ ಮೋದಿ, ಇಂದು ಒಳಮೀಸಲಾತಿಯನ್ನು ಕೋಮಾದಲ್ಲಿರಿಸಿದ್ದಾರೆ. ಇಡಬ್ಲ್ಯೂಎಸ್ ಶೇ. 10ರಷ್ಟು ಮೀಸಲಾತಿಯನ್ನು ಒಂದೇ ದಿನದಲ್ಲಿ ಜಾರಿಗೊಳಿಸಿದ ಮೋದಿ ಸರ್ಕಾರ ಒಳಮೀಸಲಾತಿಯನ್ನು 10 ವರ್ಷಗಳಾದರೂ ಜಾರಿಗೊಳಿಸಲಿಲ್ಲ. ಆದ್ದರಿಂದ ಇಷ್ಟು ದಿಟ್ಟ ನಿರ್ಲಕ್ಷ್ಯ ವಹಿಸಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಮಾದಿಗ ಸಮುದಾಯ ಸೋಲಿಸಬೇಕೆಂದು ಕರೆ ನೀಡಿದರು.

ರಾಜ್ಯಾದ್ಯಂತ ಆರ್‌ಎಸ್‌ಎಸ್, ಬಿಜೆಪಿ ಪ್ರಾಯೋಜಿತ ಮಾದಿಗ ಮುನ್ನಡೆ ನೆಲಕಚ್ಚಿದೆ. ಹೋರಾಟವನ್ನು ದಿಕ್ಕು ತಪ್ಪಿಸಲು ಬಿಜೆಪಿ ಮುಂದಾಗಿದ್ದನ್ನು ಗಮನಿಸಿದ ಮಾದಿಗ ಸಮುದಾಯ ಪಾಲ್ಗೊಳ್ಳದೆ ನೆಲಕಚ್ಚಿಸಿದೆ. 2018ರಲ್ಲಿ ಇದೇ ರೀತಿ ಕಾಂಗ್ರೆಸ್‌ ಒಳಮೀಸಲಾತಿಯನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಸೋತಿದ್ದನ್ನು ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. 2023ರಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್‌ ಜೊತೆಗೆ ನಿಂತಿದ್ದಕ್ಕೆ 136  ಸ್ಥಾನ ಗೆಲುವು ಸಾಧಿಸಲು ಸಾಧ್ಯವಾಗಿದೆ. ಕೋಮುವಾದಿ, ಮನುವಾದಿ, ಸನಾತನವಾದಿ ಸಿದ್ದಾಂತವನ್ನು ಈ ಚುನಾವಣೆಯಲ್ಲಿ ನಾವು ಸೋಲಿಸಬೇಕಾಗಿದೆ ಎಂದು ಬಸವರಾಜ್ ಕೌತಾಳ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಬಸವರಾಜ್ ಮಾತನಾಡಿ ಸಂವಿಧಾನದ ಸಮಬಾಳು ಸಮಪಾಲು ಆಶಯದಲ್ಲಿ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳನ್ನು ನೀಡಿದ್ದಾರೆ. ಈ ಗ್ಯಾರಂಟಿಗಳನ್ನು ಪ್ರಶ್ನಿಸಿ ಬಿಜೆಪಿ ಕೋರ್ಟ್ ಮೋರೆ ಹೋಗಿದೆ. ಇಂತಹ ಗೋಮುಖ ವ್ಯಾಘ್ರಗಳಿಗೆ ಈ ಚುನಾವಣೆಯಲ್ಲಿ ಬುದ್ದಿ ಕಲಿಸಬೇಕು. ದಲಿತರು ಈ ಲೋಕಸಭೆ ಚುನಾವಣೆಯನ್ನು ಸವಾಲಾಗಿ ತೆಗೆದುಕೊಳ್ಳದಿದ್ದರೆ, ಸಂವಿಧಾನ ಬದಲಾವಣೆ ಶತಸಿದ್ದವಾಗುತ್ತದೆ. ಮುಂದಿನ ಅಪಾಯಗಳ ತಡೆಗಾಗಿ ಜನಚಳುವಳಿಗಳು ಗಟ್ಟಿಯಾಗಬೇಕೆಂದರು.

ಸಭೆಯಲ್ಲಿ ಕೆ.ದೊರೈರಾಜ್, ಡಾ.ಅರುಂಧತಿ, ಎ.ನರಸಿಂಹಮೂರ್ತಿ, ಕೊಟ್ಟಶಂಕರ್, ರಂಗಧಾಮಯ್ಯ, ನರಸೀಯಪ್ಪ, ಪಿ.ಎನ್ ರಾಮಯ್ಯ, ಅನುಪಮಾ, ಪೂರ್ಣಿಮಾ, ಸುಧಾ, ಅರುಣ್, ಟಿ.ಸಿ. ರಾಮಯ್ಯ, ಕೃಷ್ಣಮೂರ್ತಿ, ತಿರುಮಲಯ್ಯ, ಮೋಹನ್, ವೆಂಕಟೇಶ್, ಕಾಶಿರಾಜ್, ರಾಜ, ಲಕ್ಷ್ಮಿಕಾಂತ್ ಮುಂತಾದವರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...