ತುಮಕೂರು | ಬ್ರಾಹ್ಮಣ ಧರ್ಮ ಶೂದ್ರ ಸಮಾಜವನ್ನು ನಿಯಂತ್ರಣದಲ್ಲಿಟ್ಟುಕೊಂಡಿದೆ : ನಟರಾಜು ಬೂದಾಳ್

Date:

ಭಾರತೀಯರೆಲ್ಲಾ ಒಂದೇ.ಅವರ ನಡುವೆ ಭಾಷೆ, ಜಾತಿ, ಧರ್ಮದ ಹೆಸರಿನಲ್ಲಿ ಭಿನ್ನತೆ ಇರಬಾರದು ಎಂಬುದು ನಿಸರ್ಗಕ್ಕೆ ವಿರುದ್ದವಾಗಿದೆ. ಬಹುತ್ವವೇ ಭಾರತದ ನಿಜವಾದ ತಿರುಳು ಎಂದು ಹಿರಿಯ ಚಿಂತಕ ಹಾಗೂ ನಿವೃತ್ತ ಪ್ರಾದ್ಯಾಪಕ ಡಾ.ನಟರಾಜು ಬೂದಾಳ್ ಪ್ರತಿಪಾದಿಸಿದರು.

ತುಮಕೂರು ನಗರದ ಏಂಪ್ರೆಸ್ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿರುವ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನ ಎರಡನೇ ದಿನದ ವಿಚಾರಗೋಷ್ಠಿಯಲ್ಲಿ ದಲಿತ ಚಳವಳಿಯ ಚಾರಿತ್ರಿಕ ಮಹತ್ವ ಮತ್ತು ವರ್ತಮಾನದ ಸವಾಲುಗಳು ಎಂಬ ವಿಷಯ ಕುರಿತು ಮಾತನಾಡಿದ ಅವರು, ನಿಸರ್ಗ ಹೇಗೆ ಎಲ್ಲಾ ಪ್ರಾಣಿ ಪಕ್ಷಿಗಳಿಗೆ ಅದರದ್ದೇ ಆದ ರೀತಿಯಲ್ಲಿ ಬದುಕಲು ಅವಕಾಶ ನೀಡಿದೆಯೋ, ಅದೇ ರೀತಿ ದೇಶದಲ್ಲಿ ಬದುಕುತ್ತಿರುವ ಎಲ್ಲಾ ಸಮುದಾಯಗಳ ನಡುವೆ ಭಿನ್ನತೆ ಇದೆ.ಅವರ ಆಚಾರ, ವಿಚಾರಗಳು ಬೇರೆ ಬೇರೆಯಾಗಿವೆ.ಎಲ್ಲವೂ ಒಂದೇ ಎಂಬುದು ಪ್ರಕೃತಿಗೆ ವಿರುದ್ದವಾಗಿದೆ ಎಂದರು.

ಪುರಾಣದ ಬಲಿ ಚಕ್ರವರ್ತಿಯ ಪ್ರಕರಣ ಇಂದಿಗೂ ಮುಂದುವರೆದಿದೆ.ಶೇ2.5ರಷ್ಟಿರುವ ಬ್ರಾಹ್ಮಣ ಧರ್ಮ, ಶೇ.97 ರಷ್ಟಿರುವ ಶೂದ್ರ ಸಮಾಜವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡಿದೆ.ಶೂದ್ರ ಸಮಾಜ ತಮ್ಮ ಆಚಾರ,ವಿಚಾರಗಳನ್ನು ಬದಿಗಿರಿಸಿ ನಿಧಾನವಾಗಿ ಬ್ರಾಹ್ಮಣ ಧರ್ಮವನ್ನು ಅನುಸರಿಸಲು ಮುಂದಾಗುತ್ತಿದ್ದೇವೆ. ಮನೆ ಕಟ್ಟುವುದು,ಮಗುವಿನ ಹೆಸರಿಡುವುದು. ಮಗನಿಗೆ ಮದುವೆ ಇಂತಹ ವಿಚಾರಗಳಲ್ಲಿ ಈಗಾಗಲೇ ಹಾಸು ಹೊಕ್ಕಾಗಿದೆ.ಇದನ್ನು ತಿರಸ್ಕರಿಸುವ ಧೈರ್ಯವನ್ನು ವಿದ್ಯಾವಂತ ದಲಿತರು ತೋರುತ್ತಿಲ್ಲ.ಇದು ವಿಪರ್ಯಾಸದ ಸಂಗತಿ. ವೈಜ್ಞಾನಿಕವಾಗಿ ದೇಶವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಬೇಕಿದೆ.ಇದೇ ಮುಂದಿರುವ ದೊಡ್ಡ ಸವಾಲು ಎಂದು ಡಾ.ನಟರಾಜ್ ಬೂದಾಳ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಳಮೀಸಲಾತಿ ಸುಪ್ರಿಂಕೋರ್ಟಿನ ತೀರ್ಪು ಮತ್ತು ಸಾಮಾಜಿಕ ನ್ಯಾಯ ಕುರಿತು ಮಾತನಾಡಿದ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಡಾ.ರವಿಕುಮಾರ್ ನೀಹ, ಪರಿಶಿಷ್ಟರೆಲ್ಲಾ ಒಂದೇ ಎಂಬ ನ್ಯಾಯಮೂರ್ತಿ ಸಂತೋಷ ಹೆಗಡೆ ಅವರ ತೀರ್ಪನ್ನು 2024ರ ಆಗಸ್ಟ್ 01ರಂದು ಬಂದ ಸುಪ್ರಿಂಕೋರ್ಟು ತೀರ್ಪ ಒಡೆದು ಹಾಕಿದೆ. ಹೇಗೆ ಪ್ರಕೃತಿಯಲ್ಲಿ ಭಿನ್ನತೆ ಇದೆಯೋ, ಅದೇ ರೀತಿ ಪರಿಶಿಷ್ಟ ಜಾತಿಗಳಲ್ಲಿಯೂ ಭಿನ್ನತೆ ಇದೆ ಎಂಬುದು ಒಪ್ಪಿಕೊಂಡೇ, ಸಾಮಾಜಿಕ ನ್ಯಾಯ ಹಾಗೂ ಸಮಾನ ಪ್ರಾತಿನಿದ್ಯ ಹಾಗೂ ಅದಕ್ಕೆ ಬೇಕಾದ ದತ್ತಾಂಶಗಳೊಂದಿಗೆ ಹೆಜ್ಜೆ ಇಡುವಂತೆ ಸೂಚಿಸಿದೆ.ಸಾಮಾಜಿಕ ನ್ಯಾಯ ವಿಲ್ಲದೆ ಸಮಾನತೆ ಎಂಬುದು ಮರೀಚಿಕೆ. ಹಾಗಾಗಿ ಈ ಎರಡು ವಿಷಯಗಳಲ್ಲಿ ದಸಂಸಕ್ಕೆ ಪ್ರಮುಖವಾಗಿದೆ. ಸಂವಿಧಾನದ ಆಧಾರದಲ್ಲಿ ಸಮಾಜಶಾಸ್ತ್ರೀಯ ವಾಸ್ತವವನ್ನು ಮುಂದಿಟ್ಟುಕೊಂಡು, ಈಗಿರುವ ಎಜೆ ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜು ಆಯೋಗದ ವರದಿಯನ್ನು ದತ್ತಾಂಶಗಳ ಮೂಲಕ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಒಳಮೀಸಲಾತಿಯನ್ನು ಅನುಮಾನದಿಂದ ನೋಡುತ್ತಿರುವವರು, ಫಲಾನುಭವಿಗಳ ಗುಂಪು, ಹೊಲಯ, ಮಾದಿಗರ ವಿಘಟನೆ ಈ ಎಲ್ಲಾ ಸವಾಲುಗಳ ಮೆಟ್ಟಿನಿಂತು ಒಳಮೀಸಲಾತಿ ಜಾರಿಗೆ ತರಬೇಕಾದ ಸವಾಲು ನಮ್ಮ ಮುಂದಿದೆ ಎಂದರು.

ಗೋಷ್ಠಿಯ ಅಧ್ಯಕ್ಷತೆಯನ್ನು ದಸಂಸ ರಾಜ್ಯ ಸಮಿತಿ ಸದಸ್ಯ ರಮೇಶ್ ಡಾಕುಳಕಿ ವಹಿಸಿದ್ದರು.

ಈ ವಿಚಾರವಾಗಿ ಸಿಂಗದಹಳ್ಳಿ ರಾಜಕುಮಾರ್, ರಂಗನಾಥ್ ಕೆ.ಜೆ.ಎಪ್,ಗುರುಪ್ರಸಾದ್ ಕಂಟಲಗೆರೆ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...