ತುಮಕೂರು | ಕಂಬಳ ನೋಡಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ: ಮಂಗಳೂರಿನ ಇಬ್ಬರು ಸಾವು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.

ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ (ನ.26 ರಂದು) ಮುಂಜಾನೆ ಈ ದುರಂತ ಸಂಭವಿಸಿದೆ.

ಮಂಗಳೂರಿನ ಬಜಪೆ ಮೂಲದ ಕಿಶನ್ ಶೆಟ್ಟಿ (20), ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲಿಪ್ ನೇರಿ ಲೋಬೋ(32) ಮೃತ ದುರ್ದೈವಿಗಳು. ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ಕಂಬಳ ವೀಕ್ಷಿಸಲೆಂದೇ ಮಂಗಳೂರಿನಿಂದ ಐವರು ಸೇರಿ ಬೆಂಗಳೂರಿಗೆ ಕಾರಿನಲ್ಲಿ ಆಗಮಿಸಿದ್ದಾರೆ. ಕಂಬಳ ನೋಡಿಕೊಂಡು ತಮ್ಮ ಊರುಗಳಿಗೆ ವಾಪಸ್ ಆಗುವ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಬೋರ್‌ವೆಲ್‌ ಕೊರೆಯುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಕಿಶನ್ ಶೆಟ್ಟಿ ಹಾಗೂ ಅವರ ಸ್ನೇಹಿತರು ನೆಲಮಂಗಲ ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ, ದಾರಿ ತಪ್ಪಿ ತುಮಕೂರಿಗೆ ಹೋಗಿ ಬಳಿಕ ಹೆಬ್ಬೂರು ಮಾರ್ಗವಾಗಿ ಕುಣಿಗಲ್ ನಿಂದ ಮಂಗಳೂರಿಗೆ ತೆರಳುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯ ಒದಗಿಸಿ: ನೈಜ ಹೋರಾಟಗಾರರ ವೇದಿಕೆ

ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಕಾರು ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕುಣಿಗಲ್‌ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...