ತುಮಕೂರು | ಸಹೋದ್ಯೋಗಿ ವರದಿಗಾರನಿಗೆ ಜಾತಿನಿಂದನೆ, ಹಲ್ಲೆ ಪಬ್ಲಿಕ್ ಟಿ.ವಿ ವರದಿಗಾರನ ವಿರುದ್ಧ ಎಫ್‌ಐಆರ್

Date:

ತುಮಕೂರು: ಸಹೋದ್ಯೋಗಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದರು ಎನ್ನಲಾದ ಪಬ್ಲಿಕ್ ಟಿ.ವಿ. ವರದಿಗಾರನ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. 

ಏ.21 ರಂದು ತುಮಕೂರು ನಗರದ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಇ.ಡಿ ದಾಳಿ ನಡೆದಿತ್ತು. ಈ ವೇಳೆ ಝೀ ಟಿ.ವಿ ಸುದ್ದಿ ವಾಹಿನಿಯ ವರದಿಗಾರ ಮಂಜುನಾಥ್ ಜಿ.ಎನ್ ಅವರು ವರದಿ ಮಾಡಲೆಂದು ಎಸ್‌ಎಸ್‌ಐಟಿಗೆ ಕಾಲೇಜಿಗೆ ತೆರಳಿದ್ದರು. 

ಈ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಪಬ್ಲಿಕ್ ಟಿ.ವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಎಂಬಾತ  ಝೀ ಟಿ.ವಿ ವರದಿಗಾರ ಮಂಜುನಾಥ್ ಜಿ.ಎನ್ ಎಂಬುವವರ ಮೇಲೆ ಎರಗಿ ಪಬ್ಲಿಕ್ ಟಿ.ವಿ ಕಬ್ಬಿಣದ ಲೋಗೋ ಮೈಕಿನಿಂದ ಹಲ್ಲೆ ಮಾಡಿರುವುದು ಅಲ್ಲದೆ, ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಝೀ ನ್ಯೂಸ್ ವರದಿಗಾರ ಮಂಜುನಾಥ್ ಜಿ.ಎನ್ ಅವರಿಗೆ ಕುತ್ತಿಗೆಗೆ ಪೆಟ್ಟಾಗಿದ್ದು, ರಕ್ತಗಾಯಗಳಾಗಿವೆ. ಈ ವೇಳೆ ಸಹೋದ್ಯೋಗಿ ಮಿತ್ರರು ಮಂಜುನಾಥ್ ಜಿ.ಎನ್ ಅವರನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪಿ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...