ತುಮಕೂರು | ಚೈನ್‌ಲಿಂಕ್ ಆನ್‌ಲೈನ್‌ ವಂಚನೆ; ಮುಗ್ದರ ₹4 ಕೋಟಿ ದೋಖಾ ಮಾಡಿದ ವ್ಯವಸ್ಥಿತ ಜಾಲ

Date:

ಚೈನ್‌ಲಿಂಕ್ ಆನ್‌ಲೈನ್‌ ವಂಚನೆ ನಡೆದಿದ್ದು, ವ್ಯವಸ್ಥಿತ ಜಾಲವೊಂದು ಮುಗ್ದ ಜನರ ₹4 ಕೋಟಿ ದೋಖಾ ಮಾಡಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ವಾಟ್ಸಾಪ್ ಗ್ರೂಪ್ ಮೂಲಕ ಆ್ಯಪ್‌ ಅಪ್‌ಲೋಡ್ ಮಾಡಿ ಹೂಡಿದ ಹಣಕ್ಕೆ ನಿತ್ಯವೂ ದುಪ್ಪಟ್ಟು ಹಣ ನೀಡುವ ಆಮಿಷಕ್ಕೆ ಬಲಿಯಾದ ಸುಮಾರು 500 ಮಂದಿಯ 4-5 ಕೋಟಿ ರೂಪಾಯಿ ಹಣ ಲಪಾಟಿಯಿಸಿದ ಬೃಹತ್ ಅನ್‌ಲೈನ್‌ ವಂಚನೆ ಪ್ರಕರಣ ಗುಬ್ಬಿ ತಾಲೂಕಿನ ಸಿ ಎಸ್ ಪುರ ಪೊಲೀಸ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಲ್ಲೂರು ಗ್ರಾಮದಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿದ ವಂಚಕರ ಜಾಲ ಮೊದಲು ಡಾಟಾ ಮೀರ್ ಎಐ ಎಂಬ ಆ್ಯಪ್‌ ಡೌನ್‌ಲೋಡ್‌ ಮಾಡಲು ಸೂಚಿಸಿ ಹಣದ ಹೂಡಿಕೆ ಹಾಗೆಯೇ ನಿತ್ಯ ಹಣ ಲಾಭ ಬರುವ ಬಗ್ಗೆ ಹೇಳಿದ್ದರು. 300 ರಿಂದ ಆರಂಭಿಸಿ 4 ಲಕ್ಷದ ವರೆಗೆ ವಹಿವಾಟು ಮಾಡುವ ಮುಗ್ಧ ಜನರು ತಮ್ಮ ಹೂಡಿಕೆ ಹಣಕ್ಕೆ 80 ದಿನದಲ್ಲಿ ದುಪ್ಪಟ್ಟ ಹಣ ನೀಡುವ ಆಸೆಗೆ ವಂಚಕ ಜಾಲ ಮೊದಲ ಹಂತದಲ್ಲಿ ದುಪ್ಪಟ್ಟು ಹಣ ನೀಡಿ ನಂಬಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೈನ್‌ಲಿಂಕ್ ಮೂಲಕ ವಾಟ್ಸಾಪ್ ಗ್ರೂಪ್‌ಗೆ ಸೇರಿದ ಕಲ್ಲೂರಿನ 600ಕ್ಕೂ ಅಧಿಕ ಜನ ಹಣದ ಆಸೆ ಮತ್ತು ಒಬ್ಬ ಗ್ರಾಹಕರನ್ನು ಹುಡುಕಿಕೊಟ್ಟರೆ ಶೇ.10ರಷ್ಟು ಕಮಿಷನ್ ಆಸೆಗೆ ಬಲಿಯಾಗಿದ್ದಾರೆ. ಬೆಂಗಳೂರು ವಾಸಿಯಾಗಿರುವ ಕಲ್ಲೂರು ಮೂಲದ ಮೂರು ಮಂದಿ ಈ ಚೈನ್‌ಲಿಂಕ್ ಪ್ರಚಾರ ಮಾಡಿ ನಂತರ ಕೆಲವರನ್ನು ಬೆಂಗಳೂರು ನಗರದಲ್ಲಿ ಮೀಟಿಂಗ್ ನಡೆಸಿ ದೊಡ್ಡ ವೇತನ ನೀಡುವ ಆಸೆಯನ್ನೂ ಹುಟ್ಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪುರುಷಾಧಿಪತ್ಯದ ಕ್ರೌರ್ಯ | ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು

“₹500 ಹೂಡಿಕೆ ಮಾಡಿದರೆ ಐದು ದಿನದಲ್ಲಿ ₹450 ಬರುವ ಆಸೆ, ಕೆಲವರಿಗೆ 80 ದಿನದಲ್ಲಿ ದ್ವಿಗುಣ ಹಣ ನೀಡುವ ಆಮಿಷ ಸೇರಿದಂತೆ ಹಲವು ರೀತಿಯ ಯೋಜನೆಗಳನ್ನು ವಿವರಿಸಿ ವಂಚಿಸಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹದ ಬಳಿಕ ಆ್ಯಪ್ ರದ್ದು ಮಾಡಿ ವ್ಯವಸ್ಥಿತವಾಗಿ ನಾಪತ್ತೆಯಾಗಿದ್ದಾರೆ. ವಂಚನೆಗೆ ಒಳಗಾದ ಸುಮಾರು 40 ಮಂದಿ ಸಂತ್ರಸ್ತರು ಸಿ ಎಸ್ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವ್ಯವಸ್ಥಿತ ಜಾಲ ರಾಜ್ಯದೆಲ್ಲೆಡೆ ಆನ್‌ಲೈನ್‌ ಮೋಸ ನಡೆಸಿರುವ ಅನುಮಾನವಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ತನಿಖೆ ನಡೆಸಲಾಗುವುದು” ಎಂದು ಡಿವೈಎಸ್‌ಪಿ ಶೇಖರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...