ತುಮಕೂರು | ಸರ್ಕಾರಿ ಶಾಲೆಗೆ ಕೊಠಡಿ ನಿರ್ಮಿಸಿ ಕೊಡುಗೆ ನೀಡಿದ ಚಿಕ್ಕ ಚಂಗಾವಿ ರೈತ ಸಿ.ಕೆ.ಪ್ರಕಾಶ್ : ಜೂನ್ 5 ರಂದು ಲೋಕಾರ್ಪಣೆ

Date:

 ಕಳೆದ ಅರವತ್ತು ವರ್ಷದ ಇತಿಹಾಸವುಳ್ಳ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚಿಕ್ಕ ಚಂಗಾವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಅಭಿವೃದ್ದಿ ಪಡಿಸಿ ಸುತ್ತಲಿನ ಏಳು ಗ್ರಾಮದ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಸ್ಥಳೀಯ ರೈತ ಸಿ.ಕೆ.ಪ್ರಕಾಶ್ ತಮ್ಮ ವೈಯಕ್ತಿಕ ವೆಚ್ಚದಿಂದ ನೂತನ ಕಟ್ಟಡ ನಿರ್ಮಾಣ ಮಾಡಿ ಇಲಾಖೆಗೆ ಹಸ್ತಾಂತರಿಸಲು ಜೂನ್ 5 ರಂದು ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ಚಿಕ್ಕ ಚಂಗಾವಿ ಸುತ್ತಲಿನ ಗ್ರಾಮಗಳಾದ ಬ್ಯಾಟಪ್ಪನಪಾಳ್ಯ, ಬುಕ್ಕಸಾಗರ, ಅಗ್ರಹಾರ ಹೀಗೆ ಅನೇಕ ಗ್ರಾಮದ ಮಕ್ಕಳು ಶಿಕ್ಷಣಕ್ಕೆ ಈ ಭಾಗದಲ್ಲಿ ಉಳಿದೊಂದು ಶಾಲೆ ಈ ಚಿಕ್ಕ ಚಂಗಾವಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ. ಈ ನಿಟ್ಟಿನಲ್ಲಿ ಕಳೆದ ವರ್ಷ ಕೊಠಡಿಯ ಕೊರತೆ ಕಂಡು ಸರ್ಕಾರಿ ಅನುದಾನವನ್ನು ಕಾಯದೆ ತಾವೇ ವೈಯಕ್ತಿಕ ಆಸಕ್ತಿ ವಹಿಸಿ ಸಿ.ಕೆ.ಪ್ರಕಾಶ್ ಸುಮಾರು 15 ಲಕ್ಷ ರೂಗಳನ್ನು ವ್ಯಯ ಮಾಡಿ ಅಚ್ಚುಕಟ್ಟಾದ ನೂತನ ದೊಡ್ಡ ಕೊಠಡಿಯನ್ನು ಸುಸಜ್ಜಿತವಾಗಿ ನಿರ್ಮಿಸಿದರು. ಈಗಾಗಲೇ ಸಾವಿರಾರು ಮಕ್ಕಳ ಶಿಕ್ಷಣಕ್ಕೆ ಅಡಿಪಾಯ ಹಾಕಿದ ಈ ಶಾಲೆಯನ್ನು ಉಳಿಸಿ ಬೆಳೆಸುವ ಆಲೋಚನೆಯಲ್ಲಿ ಗ್ರಾಮಸ್ಥರನ್ನು ಸೇರಿಸಿಕೊಂಡು ಕೊಠಡಿ ನಿರ್ಮಿಸಿದ್ದಾರೆ.

1001526952

ರೈತ ಮುಖಂಡ ಹಾಗೂ ಕೊಠಡಿಯ ದಾನಿ ಸಿ.ಕೆ.ಪ್ರಕಾಶ್ ಮಾತನಾಡಿ ನಮ್ಮ ಪೂರ್ವಜರು ಸರ್ಕಾರಿ ಶಾಲೆ ಮಂಜೂರಾತಿಯಾದ ಸಮಯದಲ್ಲಿ ತಕ್ಷಣವೇ ಭೂ ದಾನ ನೀಡಿ ಶಾಲೆಯನ್ನು ಊರಿಗೆ ಸಮೀಪದಲ್ಲೇ ನಿರ್ಮಿಸಲು ಅನುವು ಮಾಡಿದ್ದರು. ವರ್ಷಗಳು ಕಳೆದಂತೆ ಖಾಸಗಿ ಶಾಲೆಗಳ ಅಬ್ಬರಕ್ಕೆ ಸರ್ಕಾರಿ ಶಾಲೆಗಳು ಮುಚ್ಚುವ ಕೆಲಸ ನಡೆಯಿತು. ಈಗಾಗಲೇ ಎರಡು ಶಾಲೆಗಳು ಈ ಭಾಗದಲ್ಲಿ ಮುಚ್ಚಿದ್ದವು. ಉಳಿದ ಚಿಕ್ಕ ಚಂಗಾವಿ ಶಾಲೆಯು ಅದೇ ಪರಿಸ್ಥಿತಿಗೆ ತಲುಪುವ ಮುನ್ನ ನಮ್ಮ ಹಿರಿಯರ ಕನಸಿನ ಶಾಲೆಯನ್ನು ಉಳಿಸಲು ಅವಶ್ಯವಿದ್ದ ಕೊಠಡಿಯನ್ನು ಖುದ್ದು ನಾನೇ ಹಣ ವ್ಯಯ ಮಾಡಿ ಮುಂದೆ ನಿಂತು ಸುಸಜ್ಜಿತವಾಗಿ ನಿರ್ಮಿಸಿ ಇಲಾಖೆಗೆ ನೀಡುತ್ತವೆ. ಈ ನಿಟ್ಟಿನಲ್ಲಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 5 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿಗಳ ಅಮೃತ ಹಸ್ತದಿಂದ ಲೋಕಾರ್ಪಣೆ ಗೊಳ್ಳಲಿದೆ. ನಂತರ 10.30 ಕ್ಕೆ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ವಹಿಸಲಿದ್ದಾರೆ. ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ,ಮಾಜಿ ಶಾಸಕ ಮಸಾಲಾ ಜಯರಾಂ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಸಿಇಓ ಜಿ.ಪ್ರಭು, ಡಿಡಿಪಿಐ ಮನ ಮೋಹನ್, ಡಯಟ್ ಉಪ ನಿರ್ದೇಶಕ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸೋಮಶೇಖರ್ ಮಾತನಾಡಿ ಸಣ್ಣ ಗ್ರಾಮದಲ್ಲಿನ ಸರ್ಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ತಮ್ಮ ದುಡಿಮೆಯ ಲಕ್ಷಾಂತರ ಹಣವನ್ನು ಸರ್ಕಾರಿ ಶಾಲೆಗೆ ಸುರಿದು ಕೊಠಡಿ ನಿರ್ಮಿಸಿಕೊಟ್ಟ ರೈತ ಸಿ.ಕೆ.ಪ್ರಕಾಶ್ ಉದಾರ ದಾನಿಗಳು ಎಂದರೆ ಅತಿಶಯೋಕ್ತಿ ಅಲ್ಲ. ತಮ್ಮ ಹಿರಿಯರು ಭೂ ದಾನ ನೀಡಿ ಶಾಲೆ ನಿರ್ಮಿಸಿದ್ದರು. ಅವರ ಹಾದಿಯಲ್ಲೇ ಮತ್ತೊಮ್ಮೆ ಪ್ರಕಾಶ್ ಅವರು ಗ್ರಾಮೀಣ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಚಿಂತಿಸಿರುವುದು ನಮ್ಮ ಊರಿನ ಸೌಭಾಗ್ಯ. ಅವರ ದಾನ ಧರ್ಮ ಸತ್ಕಾರ್ಯದಲ್ಲಿ ಗ್ರಾಮಸ್ಥರೆಲ್ಲರೂ ಕೈ ಜೋಡಿಸಿ ಬೇರೆ ಊರಿಗೆ ಪ್ರೇರಣೆ ನೀಡೋಣ ಎಂದರು.

ಇದೇ ಸಂದರ್ಭದಲ್ಲಿ ಗ್ರಾಪಂ ಸದಸ್ಯ ದೇವರಾಜ್, ಮಾಜಿ ಅಧ್ಯಕ್ಷ ನಾರಾಯಣ, ಎಸ್ ಡಿಎಂಸಿ ಅಧ್ಯಕ್ಷ ಹರೀಶ್, ಸ್ಥಳೀಯರಾದ ವಿಜಯಕುಮಾರ್, ಶ್ರೀನಿವಾಸಗೌಡ, ಜೆಸಿಬಿ ಮೂರ್ತಿ, ದಿಲೀಪ್, ರಾಘು, ಪುನೀತ್, ಮಂಜಣ್ಣ, ದರ್ಶನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...