ತುಮಕೂರು | ಕ್ರಿಸ್‌ಮಸ್‌ ಸಂಭ್ರಮ : ಸಾಮೂಹಿಕ ಪ್ರಾರ್ಥನೆ

Date:

ಕ್ರೈಸ್ತ  ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‌ಮಸ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 

ನಗರದ ಚರ್ಚ್ ಸರ್ಕಲ್‌ನಲ್ಲಿರುವ ಸಿಎಸ್‌ಐ ವೆಸ್ಲಿ ದೇವಾಲಯ, ಹೊರಪೇಟೆಯ ಸಂತ ಲೂರ್ದು ಮಾತೆ ದೇವಾಲಯ, ಸಿಎಸ್‌ಐ ಲೇಔಟ್‌ನ ಚರ್ಚ್, ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಚರ್ಚ್, ದೇವನೂರು ಚರ್ಚ್, ಸಿರಾಗೇಟ್‌ನಲ್ಲಿರುವ ಟಾಮ್ಲಿಸನ್ ಚರ್ಚ್ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿರುವ ಚರ್ಚ್ಗಳಲ್ಲಿ ಕ್ರೈಸ್ತ ಬಾಂಧವರು ಬೆಳಿಗ್ಗೆ 8 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 

ಹಬ್ಬದ ಪ್ರಯುಕ್ತ ನಗರದಲ್ಲಿರುವ 7 ಸಿಎಸ್‌ಐ ಚರ್ಚ್, ಎರಡು ರೋಮನ್ ಕ್ಯಾಥೋಲಿಕ್ ಚರ್ಚೆ, ಒಂದು ಮಾರ್ಥಾಂಬ ಚರ್ಚ್ ಒಂದು ಫೆದರಲ್ ಚರ್ಚ್, 15 ಇಂಡಿಪೆಂಡೆಂಟ್ ಚರ್ಚ್ ಗಳು ಸೇರಿದಂತೆ ಎಲ್ಲ ಚರ್ಚ್ಗಳಲ್ಲಿ ವಿಶೇಷವಾಗಿ ವಿದ್ಯುದ್ದೀಪಾಲಂಕಾರ ಮಾಡಲಾಗಿದ್ದು, ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದ್ದವು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರೆöÊಸ್ತ ಬಾಂಧವರು ಹೊಸ ಉಡುಪುಗಳನ್ನು ಧರಿಸಿ ಚರ್ಚ್ಗಳಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ನಂತರ ಒಬ್ಬರಿಗೊಬ್ಬರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ವಿಶೇಷವಾಗಿ ತಯಾರಿಸಿದ್ದ ಸಿಹಿ ತಿಂಡಿಗಳನ್ನು ಸಹ ಕ್ರೈಸ್ತ ಬಾಂಧವರು ಪರಸ್ಪರ ಹಂಚಿ ತಿನ್ನುವ ಮೂಲಕ ಈ ಹಬ್ಬ ಶಾಂತಿ ಸೌಹಾರ್ದತೆ ಸಂಕೇತ ಎಂಬ ಸಂದೇಶವನ್ನು ಸಾರಿದರು. 

1002565260

ಚರ್ಚ್ ವೃತ್ತದಲ್ಲಿರುವ ಸಿಎಸ್‌ಐ ಮಹಾದೇವಾಲಯದ ಕ್ರೆöÊಸ್ತ ಬಾಂಧವರ ಸಾಮೂಹಿಕ ಪ್ರಾರ್ಥನೆಯಾದ ಬಳಿಕ ಸಂದೇಶ ನೀಡಿದ ಸಿಎಸ್‌ಐ ಮಹಾದೇವಾಲಯದ ಸಭಾ ಪಾಲಕರು, ಕ್ರಿಸ್‌ಮಸ್ ಏಸುಕ್ರಿಸ್ತನ ಜನ್ಮದಿನದ ಸಂಕೇತ. ಮನುಷ್ಯರಿಗೋಸ್ಕರ ದೇವರು ಪರಲೋಕವನ್ನು ಬಿಟ್ಟು ಭೂಲೋಕಕ್ಕೆ ಬಂದAತಹ ಶುಭ ವರ್ತಮಾನ ತಿಳಿಸುವಂತಹದ್ದು. ದೇವರು ಮನುಷ್ಯರ ಮೇಲೆ ಎಷ್ಟು ಪ್ರೀತಿ ಇಟ್ಟಿದ್ದಾನೆ ಎಂಬುದನ್ನು ತೋರಿಸುವುದು ಈ ಹಬ್ಬದ ಉದ್ದೇಶ ಎಂದರು. 

ಕ್ರಿಸ್‌ಮಸ್ ಹಬ್ಬ ಕ್ರೈಸ್ತರೆಲ್ಲರೂ ಬಹಳ ಉತ್ಸುಕತೆಯಿಂದ ಸಂತಸ, ಸಂಭ್ರಮದಿಂದ ಆಚರಿಸುವಂತಹ ಹಬ್ಬ. ಕ್ರೈಸ್ತರಿಗೆ ಮೂರು ಹಬ್ಬಗಳು ಮಹತ್ವದ್ದಾಗಿವೆ. ಕ್ರಿಸ್‌ಮಸ್ ಹಬ್ಬವನ್ನು ಬೆಳಕಿನ ಹಬ್ಬವೆಂದು ಆಚರಿಸಲಾಗುತ್ತದೆ. ಏಸುಕ್ರಿಸ್ತನು ಬೆಳಕಾಗಿ ಬಂದಿದ್ದಾನೆ. ಹಾಗಾಗಿ ಎಲ್ಲ ಚರ್ಚ್ಗಳಲ್ಲಿ ಕ್ಯಾಂಡಲ್‌ಗಳನ್ನು ಹಿಡಿದು ಏಸುವಿನ ಬೆಳಕು ನಮ್ಮೆಲ್ಲ ಸಂಕಷ್ಟವನ್ನು ದೂರ ಮಾಡುತ್ತದೆ ಎಂದು ಹಬ್ಬವನ್ನು ಆಚರಿಸಲಾಗುತ್ತದೆ ಎಂದರು.

ಡಿಸೆಂಬರ್ ಮೊದಲ ದಿನದಿಂದ ಈ ಹಬ್ಬದ ಸಡಗರ ಸಂಭ್ರಮಗಳು ಆರಂಭವಾಗುತ್ತದೆ ಎಂದರು.  ಬಹಳಷ್ಟು ವರ್ಷಗಳ ಹಿಂದೆ ಏಸುಕ್ರಿಸ್ತ ಹುಟ್ಟಿದಾಗ ಅಂದಿನ ಸಾಮಾಜಿಕ, ಆರ್ಥಿಕವಾದ ಪರಿಸ್ಥಿತಿಗಳು, ರಾಜಕೀಯ, ಧಾರ್ಮಿಕವಾದ ಪರಿಸ್ಥಿತಿಗಳು, ಬಡವರು, ನಿರ್ಗತಿಕರಿಗೆ ವಿರುದ್ಧವಾಗಿ ದೌರ್ಜನ್ಯ, ಶೋಷಣೆ ಮಾಡುವಂತಹ ಸನ್ನಿವೇಶ ಇದ್ದಾಗ ಏಸುಕ್ರಿಸ್ತ ಅಂತಹವರ ಪರವಾಗಿ ಸಮಾಜದಲ್ಲಿ ಶಾಂತಿ, ಸಮಾಧಾನ ತಂದು ದೇವರು ಬಡವರ ಪರ ಇದ್ದಾನೆ ಎಂದು ಸಾರಿ ಹೇಳಿದಂತಹ ಹಬ್ಬ ಇದಾಗಿದೆ ಎಂದು ಹೇಳಿದರು.

ಕ್ರಿಸ್‌ಮಸ್ ಹಬ್ಬ ಇಡೀ ಮನುಷ್ಯರನ್ನು ರಕ್ಷಣೆಯ ದಾರಿಯಲ್ಲಿ ನಡೆಸಲಿಕ್ಕೆ ಬಂದಂತಹ ಏಸುವಿನ ಆಗಮನವನ್ನು ಸೂಚಿಸುತ್ತದೆ. ಕ್ರಿಸ್ಮಸ್ ಶಾಂತಿ ಸಮಾಧಾನದ ಹಬ್ಬ. ಶಾಂತಿ ಕಾಪಾಡುವುದೇ ಈ ಹಬ್ಬದ ಸಂದೇಶ ಎಂದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...